ಪತ್ರಕರ್ತೆ ರಾಣಾ ಅಯ್ಯೂಬ್ 
ದೇಶ

ಹಿಂದೂ ದೇವತೆ, ಸಾವರ್ಕರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಹಿಂದೂ ದೇವತೆಗಳು ಮತ್ತು ಸಾವರ್ಕರ್ ವಿರುದ್ಧದ ಪೋಸ್ಟ್ ಗಳು ಅವಹೇಳನಕಾರಿ ಮತ್ತು ಕೋಮು ಭಾವನೆ ಕೆರಳಿಸುವಂತಿವೆ ಎಂದು ಹೈಕೋರ್ಟ್ ಹೇಳಿದೆ.

ನವದೆಹಲಿ: ಪತ್ರಕರ್ತೆ ರಾಣಾ ಅಯ್ಯೂಬ್ ಅವರ ಕೆಲವು ಟ್ವೀಟ್‌ಗಳು "ಅವಮಾನಕರ, ಪ್ರಚೋದನಕಾರಿ ಮತ್ತು ಕೋಮುವಾದಿ" ಎಂದು ಬುಧವಾರ ಹೇಳಿರುವ ದೆಹಲಿ ಹೈಕೋರ್ಟ್, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ, ದೆಹಲಿ ಪೊಲೀಸರಿಗೆ ಮತ್ತು ಸಾಮಾಜಿಕ ಮಾಧ್ಯಮ ಎಕ್ಸ್ ಗೆ ಸೂಚಿಸಿದೆ.

ಸಾಮಾಜಿಕ ಮಾಧ್ಯಮದಿಂದ ರಾಣಾ ಅಯ್ಯೂಬ್ ಅವರ ಆಕ್ಷೇಪಾರ್ಹ ಪೋಸ್ಟ್ ಗಳನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಹಿಂದೂ ದೇವತೆಗಳು ಮತ್ತು ಸಾವರ್ಕರ್ ವಿರುದ್ಧದ ಪೋಸ್ಟ್ ಗಳು ಅವಹೇಳನಕಾರಿ ಮತ್ತು ಕೋಮು ಭಾವನೆ ಕೆರಳಿಸುವಂತಿವೆ ಎಂದು ಹೇಳಿದೆ.

ರಾಣಾ ಅಯ್ಯೂಬ್ ಅವರ ಟ್ವೀಟ್‌ಗಳು ಹಿಂದೂ ದೇವತೆಗಳು ಮತ್ತು "ಐತಿಹಾಸಿಕ ವ್ಯಕ್ತಿಗಳನ್ನು" ಅವಮಾನಿಸಿವೆ ಎಂದು ಆರೋಪಿಸಿ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್, ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಸಹ ನಿರ್ದೇಶಿಸಲಾಗಿದೆ ಎಂಬುದನ್ನು ಗಮನಿಸಿದರು ಮತ್ತು ಕೇಂದ್ರ ಸರ್ಕಾರ, ದೆಹಲಿ ಪೊಲೀಸರು ಮತ್ತು ಎಕ್ಸ್ ಗೆ "ಒಟ್ಟಿಗೆ ಕೆಲಸ ಮಾಡಿ" 24 ಗಂಟೆಗಳಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ" ಸೂಚಿಸಿದ್ದಾರೆ.

"ಈ ಸಂಬಂಧ ಕೇಂದ್ರ ಸರ್ಕಾರ, ರಾಣಾ ಅಯ್ಯೂಬ್ ಮತ್ತು ಎಕ್ಸ್‌ಗೆ ನೋಟಿಸ್ ನೀಡಿರುವ ನ್ಯಾಯಾಲಯವು, ಏಪ್ರಿಲ್ 10 ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

EC-TMC ಸಭೆಯಲ್ಲಿ ಕೋಲಾಹಲ: ಟಿಎಂಸಿ ನಾಯಕರಿಗೆ ‘ಇಲ್ಲಿಂದ ತೊಲಗಿ’ ಎಂದ CEC, ಡೆರೆಕ್ ಒಬ್ರಿಯಾನ್ ಆಕ್ರೋಶ..!

Video ವೈರಲ್: ಬಾಬಾ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ: ನಡು ರಸ್ತೆಯಲ್ಲೇ ಅಳುತ್ತಾ ಸಹಾಯಕ್ಕಾಗಿ ಅಂಗಲಾಚಿದ 17 ವರ್ಷದ ಬಾಲಕಿ!

ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಶಾಕ್: ಅಪ್ರಾಪ್ತ ವಯಸ್ಸಿನ ಗರ್ಭಧಾರಣೆ ಪ್ರಕರಣಗಳ POCSO ಅಡಿ ವರದಿ ಕಡ್ಡಾಯ: Dinesh Gundu rao

ಭಾರತ ಎಂದಿಗೂ ನ್ಯಾಯದ ಪರ ನಿಂತಿದೆ; ಭಾರತೀಯರ ಕಾಳಜಿ ವಹಿಸುವುದು ನನ್ನ ಜವಾಬ್ದಾರಿ- ಇರಾನ್ ಪ್ರತಿನಿಧಿ ಇಲಾಹಿ

ರಾಜಕೀಯ ಅಧಃಪತನ.. ನಿಮ್ಮ ಎಡವಟ್ಟು ಸರಿಪಡಿಸಲು ವರ್ಷಗಳೇ ಬೇಕು: Israeli ವಿಪಕ್ಷ ನಾಯಕ ಕಿಡಿ

SCROLL FOR NEXT