ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ 
ದೇಶ

ಪ್ರಧಾನಿ ಮೋದಿ ಇರಾನಿನ ಧೈರ್ಯ- ದಿಟ್ಟತನ ನೋಡಿ ಕಲಿಯಲಿ: TMC ಸಂಸದೆ ಮಹುವಾ ಮೊಯಿತ್ರಾ

ಭಾರತವು ತನ್ನದೇ ಆದ ಕದನ ವಿರಾಮ, ತನ್ನದೇ ಆದ ವ್ಯಾಪಾರ ಒಪ್ಪಂದ ಮತ್ತು ತನ್ನದೇ ಆದ ಇಂಧನ ನೀತಿಯನ್ನು ಘೋಷಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ.

ನವದೆಹಲಿ: ಧೈರ್ಯ ಮತ್ತು ದಿಟ್ಟತನ ಏನು ಎಂಬುದನ್ನು ಇರಾನ್ ಜಗತ್ತಿಗೆ ಕಲಿಸಿಕೊಟ್ಟಿದೆ' ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಬುಧವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮಹುವಾ, 'ಧೈರ್ಯ ಮತ್ತು ದಿಟ್ಟತನವನ್ನು ಇರಾನ್ ಜಗತ್ತಿಗೆ ತೋರಿಸಿಕೊಟ್ಟಿದೆ. ಬಹುಶಃ ನಮ್ಮ ದೇಶದ ನಾಯಕತ್ವವು ಬೆದರಿಕೆ ಒಡ್ಡುವವರನ್ನು ಕೆಚ್ಚೆದೆಯಿಂದ ಎದುರಿಸಬೇಕು' ಎಂದಿದ್ದಾರೆ.

ಭಾರತವು ತನ್ನದೇ ಆದ ಕದನ ವಿರಾಮ, ತನ್ನದೇ ಆದ ವ್ಯಾಪಾರ ಒಪ್ಪಂದ ಮತ್ತು ತನ್ನದೇ ಆದ ಇಂಧನ ನೀತಿಯನ್ನು ಘೋಷಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ.

ಅಲ್ಲದೆ ಭಾರತದ ವಿದೇಶಾಂಗ ನೀತಿಯ ಕುರಿತು ಮಹುವಾ ಪ್ರಶ್ನಿಸಿದ್ದಾರೆ. ಬುಧವಾರದಂದು ಅಮೆರಿಕ ಹಾಗೂ ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಏರ್ಪಟ್ಟಿತ್ತು. ಆದರೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಡಕ್ಕೆ ಇರಾನ್ ಜಗ್ಗಲಿಲ್ಲ ಎಂದು ವರದಿಯಾಗಿತ್ತು ಈ ಹಿನ್ನೆಲೆಯಲ್ಲಿ ಮಹುವಾ ಪ್ರತಿಕ್ರಿಯಿಸಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ನಡುವಣ ಯುದ್ಧವನ್ನು ನಿಲ್ಲಿಸಿದ್ದೇನೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 50ಕ್ಕೂ ಹೆಚ್ಚು ಸಲ ಹೇಳಿಕೆ ನೀಡಿದ್ದರು. ಆದರೆ ಭಾರತ ಹಾಗೂ ಪಾಕ್ ನಡುವಣ ಬಿಕ್ಕಟ್ಟಿನಲ್ಲಿ ಮೂರನೇ ದೇಶದ ಮಧ್ಯಪ್ರವೇಶವನ್ನು ಭಾರತ ನಿರಾಕರಿಸುತ್ತಲೇ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kerala, Karnataka Bypoll & Assam Election 2026 Live Updates | ಅಸ್ಸಾಂ, ಕೇರಳ, ಪುದುಚೆರಿ, ಕರ್ನಾಟಕದ 2 ಕ್ಷೇತ್ರಗಳಲ್ಲಿ ಮತದಾನ ಆರಂಭ

ಕದನ ವಿರಾಮ ಉಲ್ಲಂಘಿಸಿ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಪ್ರತೀಕಾರಕ್ಕೆ ಇರಾನ್ ಮುಂದು, ಹಾರ್ಮುಜ್ ಮಾರ್ಗ ಮತ್ತೆ ಬಂದ್..!

ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಹಿಜ್ಬುಲ್ಲಾ ರಾಕೆಟ್ ದಾಳಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

IPL 2026: KL Rahul 92 ರನ್; ಕೊನೆಯ ಎಸೆತದಲ್ಲಿ ಎಡವಿದ ಡೆಲ್ಲಿ, 1 ರನ್‌ನಿಂದ GT ಗೆ ರೋಚಕ ಜಯ!

ಕದನ ವಿರಾಮ ನಮಗಲ್ಲ: ಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ, 300ಕ್ಕೂ ಹೆಚ್ಚು ಸಾವು, 1200 ಮಂದಿಗೆ ಗಾಯ!

SCROLL FOR NEXT