ಸೋನಿಯಾ ಗಾಂಧಿ 
ದೇಶ

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ಲೋಕಸಭೆಯ ಬಲವರ್ಧನೆ ಒಳಗೊಂಡ ಯಾವುದೇ ಗಡಿ ನಿರ್ಣಯ ಗಣಿತದ ದೃಷ್ಟಿಯಿಂದ ಮಾತ್ರವಲ್ಲ, ರಾಜಕೀಯವಾಗಿಯೂ ಸಮಾನವಾಗಿರಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

ನವದೆಹಲಿ: ಈ ವಾರ ನಡೆಯುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಸೂದೆಗಳನ್ನು ಮಂಡಿಸುವ ಕೇಂದ್ರ ಸರ್ಕಾರದ ನಡೆಯ ಹಿಂದಿರುವ ಅಸಲಿ ವಿಷಯ ಮಹಿಳಾ ಮೀಸಲಾತಿ ಅಲ್ಲ, ಕ್ಷೇತ್ರಗಳ ಪುನರ್‌ವಿಂಗಡಣೆ ಎಂದು ಕಾಂಗ್ರೆಸ್‌ ವರಿಷ್ಠ ನಾಯಕಿ ಗಾಂಧಿ ಸೋನಿಯಾ ಗಾಂಧಿ ಹೇಳಿದ್ದಾರೆ. ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಮತ್ತು ಸಂವಿಧಾನದ ಮೇಲಿನ ದಾಳಿ ಎಂದು ಅವರು ಟೀಕಿಸಿದ್ದಾರೆ.

ಲೋಕಸಭೆಯ ಬಲವರ್ಧನೆ ಒಳಗೊಂಡ ಯಾವುದೇ ಗಡಿ ನಿರ್ಣಯ ಗಣಿತದ ದೃಷ್ಟಿಯಿಂದ ಮಾತ್ರವಲ್ಲ, ರಾಜಕೀಯವಾಗಿಯೂ ಸಮಾನವಾಗಿರಬೇಕು ಎಂದು ಅವರು ಒತ್ತಿ ಹೇಳಿದ್ದಾರೆ. ಈ ಕುರಿತು ಆಂಗ್ಲ ದಿನಪತ್ರಿಕೆ ದಿ ಹಿಂದೂನಲ್ಲಿ ಪ್ರಕಟವಾದ ತಮ್ಮ ಲೇಖನವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣಾ ಮತಪ್ರಚಾರ ಉತ್ತುಂಗದಲ್ಲಿರುವಾಗ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಸಂಸತ್ತಿನ ಮೂಲಕ ಪಾಸ್ ಮಾಡಲು ಬಯಸುತ್ತಿರುವ ಮಸೂದೆಗಳಿಗೆ ಬೆಂಬಲ ಕೋರಿ ಪ್ರಧಾನಿ ಮೋದಿ ವಿಪಕ್ಷಗಳಿಗೆ ಮನವಿ ಮಾಡುತ್ತಿದ್ದಾರೆ ಎಂದು ಸೋನಿಯಾ ಹೇಳಿದರು.

2023 ಸೆಪ್ಟೆಂಬರ್‌ನಲ್ಲಿ ವಿಶೇಷ ಅಧಿವೇಶನದಲ್ಲಿ ಸಂಸತ್ತು ನಾರಿ ಶಕ್ತಿ ವಂದನ ಅಧಿನಿಯಮ-2023ನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಮುಂದಿನ ಜನಗಣತಿ ಆಧಾರಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯ ಬಳಿಕ ಜಾರಿಗೆ ಬರಲಿರುವ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ಕಡ್ಡಾಯಗೊಳಿಸಲು ಸಂವಿಧಾನದಲ್ಲಿ 334 ಎ ವಿಧಿ ಪರಿಚಯಿಸಲಾಗಿದೆ.ಈಗ 2029ರಿಂದಲೇ ಮಹಿಳಾ ಮೀಸಲಾತಿಯನ್ನು ಅನ್ವಯಿಸಲು 334 ಎ ವಿಧಿಯನ್ನು ತಿದ್ದುಪಡಿ ಮಾಡಲಾಗುತ್ತಿದೆ ಎಂಬುದು ನಮಗೆ ಅರ್ಥವಾಗಿದೆ.

ವಿರೋಧ ಪಕ್ಷ ಈ ಷರತ್ತನ್ನು ಕೇಳಿರಲಿಲ್ಲ. ರಾಜ್ಯಸಭೆಯ ವಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು 2024ರ ಲೋಕಸಭಾ ಚುನಾವಣೆಯಿಂದಲೇ ಮೀಸಲಾತಿ ನಿಬಂಧನೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದ್ದರು. ಆದರೆ ಸ್ವತಃ ತಿಳಿದಿರುವ ಕಾರಣಗಳಿಗಾಗಿ, ಸರ್ಕಾರ ಒಪ್ಪಿಲ್ಲ ಎಂದು ಉಲ್ಲೇಖಿಸಿದ್ದಾರೆ.

ಈಗ 2029ರಿಂದಲೇ ಮಹಿಳಾ ಮೀಸಲಾತಿಯನ್ನು ಅನ್ವಯಿಸಲು 334 ಎ ವಿಧಿಯನ್ನು ತಿದ್ದುಪಡಿ ಮಾಡಲಾಗುತ್ತಿದೆ ಎಂಬುದು ನಮಗೆ ಅರ್ಥವಾಗಿದೆ. ಪ್ರಧಾನಿ ಯೂ ಟರ್ನ್ ತೆಗೆದುಕೊಳ್ಳಲು 30 ತಿಂಗಳು ತೆಗೆದುಕೊಂಡಿದ್ದೇಕೆ?, ವಿಶೇಷ ಅಧಿವೇಶನ ಕರೆಯಲು ಅವರು ಕೆಲವು ವಾರ ಏಕೆ ಕಾಯಬಾರದು ಸೋನಿಯಾ ಪ್ರಶ್ನಿಸಿದ್ದಾರೆ.

ಏಪ್ರಿಲ್ 29ರಂದು ಪಶ್ಚಿಮ ಬಂಗಾಳದಲ್ಲಿ ಕೊನೆಯ ಹಂತದ ಚುನಾವಣೆ ಮುಗಿದ ನಂತರ ಸರ್ಕಾರದ ಹೊಸ ಪ್ರಸ್ತಾಪಗಳೇನು ಎಂಬುದನ್ನು ಚರ್ಚಿಸಲು ಸರ್ವಪಕ್ಷ ಸಭೆ ಕರೆಯಬೇಕೆಂದು ವಿಪಕ್ಷದ ನಾಯಕರು ಸರ್ಕಾರಕ್ಕೆ ಒಂದಲ್ಲ, ಮೂರು ಬಾರಿ ಪತ್ರ ಬರೆದಿದ್ದಾರೆ. ಆದರೆ ನಮ್ಮ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ಗಾಂಧಿ ತಿಳಿಸಿದ್ದಾರೆ.

ಇದಕ್ಕೆ ಬದಲು ಪ್ರಧಾನಿ ಪ್ರತಿಕ್ರಿಯೆಗಳನ್ನು ನೀಡುವುದು, ರಾಜಕೀಯ ಪಕ್ಷಗಳಿಗೆ ಮನವಿ ಮಾಡುವುದು ಮತ್ತು ಸಮ್ಮೇಳನ ಆಯೋಜಿಸುವುದರಲ್ಲಿ ನಿರತರಾಗಿದ್ದಾರೆ. ಇದು ಪ್ರಧಾನಿಯವರ ಏಕಪಕ್ಷೀಯತೆ ಮತ್ತು ನಿರ್ಧಾರ ತೆಗೆದುಕೊಳ್ಳುವಲ್ಲಿ ಅವರ ನನ್ನ ದಾರಿ ಅಥವಾ ಹೆದ್ದಾರಿ ವಿಧಾನವನ್ನು ತೋರಿಸುತ್ತಿದೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

SCROLL FOR NEXT