ಸಾಮ್ರಾಟ್ ಚೌಧರಿ 
ದೇಶ

ಬಿಹಾರ: ನಿತೀಶ್ ಆಡಳಿತ ಅಂತ್ಯ; ಮೊದಲ ಬಿಜೆಪಿ CM ಆಗಿ ಸಾಮ್ರಾಟ್ ಚೌಧರಿ ಆಯ್ಕೆ!

ಪಾಟ್ನಾದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಅವರು ಬಿಹಾರದ ಮೊದಲ ಬಿಜೆಪಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪಾಟ್ನಾ: ಬಿಹಾರ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿ ಆಗಿ ಸಾಮ್ರಾಟ್ ಚೌಧರಿ ಮಂಗಳವಾರ ಆಯ್ಕೆಯಾಗಿದ್ದಾರೆ. ಪಾಟ್ನಾದ ಲೋಕಭವನದಲ್ಲಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರ ಈ ಬೆಳವಣಿಗೆಯಾಗಿದೆ.

ಪಾಟ್ನಾದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಎನ್ ಡಿಎ ಮೈತ್ರಿಕೂಟದ ಶಾಸಕರು ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಾಮ್ರಾಟ್ ಚೌಧರಿ ಅವರು ಬಿಹಾರದ ಮೊದಲ ಬಿಜೆಪಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಂಪುಟ ವಿಸರ್ಜನೆಗೆ ನಿತೀಶ್ ಕುಮಾರ್ ಶಿಫಾರಸು ಮಾಡಿದರು.

ಕಳೆದ ತಿಂಗಳು 75 ನೇ ವರ್ಷಕ್ಕೆ ಕಾಲಿಟ್ಟ ಮತ್ತು ವಾರದ ಹಿಂದೆ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರ್ ಇಂದು ಕೊನೆಯ ಕ್ಯಾಬಿನೆಟ್ ಸಭೆಯ ನಂತರ ರಾಜಭವನಕ್ಕೆ ತೆರಳಿದ್ದು, ಅಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ನಂತರ ಇಷ್ಟೇಲ್ಲಾ ಬೆಳವಣಿಗೆಯಾಗಿದೆ.

ಹಿಂದಿ ಹಾರ್ಟ್ ಲ್ಯಾಂಡ್ ನಲ್ಲಿ ಇಲ್ಲಿಯವರೆಗೂ ಬಿಜೆಪಿ ಮುಖ್ಯಮಂತ್ರಿ ಹುದ್ದೆಯಿಲ್ಲದ ಏಕೈಕ ರಾಜ್ಯವಾಗಿದ್ದ ಬಿಹಾರದಲ್ಲಿ ಇದೀಗ ಗದ್ದುಗೆ ಹಿಡಿಯುವ ಅವಕಾಶ ದೊರೆತಿದ್ದು, ಪಕ್ಷದ ನಾಯಕರು ಜಾಗರೂಕರಾಗಿದ್ದಾರೆ.

243-ಬಲದ ಬಿಹಾರ ಅಸೆಂಬ್ಲಿಯಲ್ಲಿ, NDA ಒಟ್ಟು 202 ಸ್ಥಾನಗಳೊಂದಿಗೆ ಬಹುಮತವನ್ನು ಹೊಂದಿದೆ, ಅದರಲ್ಲಿ ಬಿಜೆಪಿ 89 ರಲ್ಲಿ ಸಿಂಹ ಪಾಲನ್ನು ಹೊಂದಿದೆ. ನಂತರ JD(U) ನ 85 ಸ್ಥಾನ ಹೊಂದಿದ್ದು, ಉಳಿದಂತೆ LJP(RV), HAM ಮತ್ತು RLM ಕೆಲವು ಸ್ಥಾನಗಳನ್ನು ಹೊಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿನ್ನ ಮೇಲೆ ಹೈಕಮಾಂಡ್ ಸಿಟ್ಟಾಗಿದೆ: ಜಮೀರ್ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ; ಶೀಘ್ರದಲ್ಲೇ ತಲೆದಂಡ ಸಾಧ್ಯತೆ

ಬೆಂಗಳೂರಿನಲ್ಲೊಂದು ವಿಚಿತ್ರ ಪ್ರಕರಣ: ನಮ್ಮ ಬೆಕ್ಕು ಪ್ರೆಗ್ನೆಂಟ್ ಆಗಲು ನಿಮ್ಮ ಗಂಡು ಬೆಕ್ಕೇ ಕಾರಣ; ಮಾರಾಮಾರಿ! Video ನೋಡಿ

ಅಮೆರಿಕಕ್ಕೆ ಸೆಡ್ಡು: 'ನೌಕಾ ದಿಗ್ಬಂಧನ' ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಇರಾನ್‌ ನ ಎರಡು ಹಡಗುಗಳು!

"ನಿತೀಶ್ ಕುಮಾರ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿಯೇ ಪಗಡಿ ತೆಗೆಯುತ್ತೇನೆ": ಕೊನೆಗೂ ಶಪಥ ಈಡೇರಿಸಿಕೊಂಡ ಸಾಮ್ರಾಟ್ ಚೌಧರಿ!

COVID ಲಸಿಕೆ, ಸರ್ಕಾರವೇ ಆಸಿಸ್ ಸ್ಪಿನ್ ದಿಗ್ಗಜನ ಸಾವಿಗೆ ಕಾರಣ: Shane Warne ಪುತ್ರನ ಸ್ಫೋಟಕ ಹೇಳಿಕೆ!

SCROLL FOR NEXT