ಸಾಂದರ್ಭಿಕ ಚಿತ್ರ 
ದೇಶ

ಡೇಟಿಂಗ್ ಆ್ಯಪ್‌ ಮೂಲಕ 500ಕ್ಕೂ ಹೆಚ್ಚು ಯುವತಿಯರಿಗೆ 2 ಕೋಟಿ ರೂ ವಂಚನೆ! ವ್ಯಕ್ತಿಯ ಬಂಧನ!

ಮಹಿಳೆಯರ ವಿಶ್ವಾಸ ಗಳಿಸಲು ವೈದ್ಯ, ಉದ್ಯಮಿ ಅಥವಾ ಚಲನಚಿತ್ರ ನಿರ್ಮಾಪಕ ಎಂದು ನಂಬಿಸಿ ಅನೇಕ ನಕಲಿ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳನ್ನು ರಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಡೇಟಿಂಗ್ ಮತ್ತು ವೈವಾಹಿಕ ಆ್ಯಪ್ ಮೂಲಕ ದೇಶಾದ್ಯಂತ 500ಕ್ಕೂ ಹೆಚ್ಚು ಯುವತಿಯರನ್ನು ಗುರಿಯಾಗಿಸಿಕೊಂಡು ಸುಮಾರು 2 ಕೋಟಿ ರೂ. ವಂಚಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಗುರುವಾರ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳದ ನಿವಾಸಿ ಆನಂದ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಅಸಂಖ್ಯಾತ ಪ್ರಮಾಣದ ಹನಿ-ಟ್ರ್ಯಾಪಿಂಗ್, ಪ್ರಣಯ ವಂಚನೆಗಳು ಮತ್ತು ಬ್ಲ್ಯಾಕ್‌ ಮೇಲಿಂಗ್‌ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.

ಮಹಿಳೆಯರ ವಿಶ್ವಾಸ ಗಳಿಸಲು ವೈದ್ಯ, ಉದ್ಯಮಿ ಅಥವಾ ಚಲನಚಿತ್ರ ನಿರ್ಮಾಪಕ ಎಂದು ನಂಬಿಸಿ ಅನೇಕ ನಕಲಿ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳನ್ನು ರಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪ್ರೀತಿ ಮತ್ತು ಮದುವೆ ಭರವಸೆ ನೀಡುವ ಮೂಲಕ ಸಂತ್ರಸ್ತೆಯರೊಂದಿಗೆ ಸಂಪರ್ಕ ಸಾಧಿಸುತ್ತಿದ್ದ. ನಂತರ, ವೈದ್ಯಕೀಯ ತುರ್ತು ಪರಿಸ್ಥಿತಿ, ವ್ಯವಹಾರ ನಷ್ಟ ಅಂತಾ ಹೇಳಿ ಕಥೆ ಕಟ್ಟುತ್ತಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹಲವಾರು ಸಂದರ್ಭಗಳಲ್ಲಿ ಸಂತ್ರಸ್ತೆಯರ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಹಾಕುವುದಾಗಿ ಬೆದರಿಕೆ ಹಾಕುವ ಮೂಲಕ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕುಮಾರ್ 500 ಕ್ಕೂ ಹೆಚ್ಚು ಮಹಿಳೆಯರನ್ನು ಗುರಿಯಾಗಿಸಿಕೊಂಡು ಸುಮಾರು 2 ಕೋಟಿ ರೂ. ವಂಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 7 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯೊಬ್ಬರು ನೀಡಿದ ದೂರಿನಿಂದ ಪ್ರಕರಣ ಬೆಳಕಿಗೆ ಬಂದಿದೆ. ಡಿಜಿಟಲ್ ಟ್ರ್ಯಾಕಿಂಗ್ ಬಳಸಿ ಪಶ್ಚಿಮ ಬಂಗಾಳದ 24 ಪರಗಣ ಪ್ರದೇಶದಿಂದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗಿದೆ. ಅಧಿಕಾರಿಗಳು ಆತನ ಬಳಿಯಿಂದ ನಾಲ್ಕು ಮೊಬೈಲ್ ಫೋನ್‌ಗಳು, ಎಂಟು ಸಿಮ್ ಕಾರ್ಡ್‌ಗಳು, ಡೆಬಿಟ್ ಕಾರ್ಡ್‌ಗಳು ಮತ್ತು ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕಾ; ಪ್ರತೀಕಾರ ತೀರಿಸಿಕೊಳ್ಳುತ್ತೇವೆಂದ ಟೆಹ್ರಾನ್, ಸಂಘರ್ಷ ಮತ್ತೆ ಉಲ್ಬಣ

ಹೊರ್ಮುಸ್, ಹಣದುಬ್ಬರ, ಮತ್ತು ಚುನಾವಣೆಗಳು: ಸಮಸ್ಯೆಯ ಸುಳಿಯಲ್ಲಿ ಟ್ರಂಪ್ (ಜಾಗತಿಕ ಜಗಲಿ)

ಪ್ರಧಾನಿ ಮೋದಿ ಜೊತೆಗೆ ಗುಟ್ಟಿನ ಮಾತುಕತೆ: ಕೊನೆಗೂ ಬಹಿರಂಗ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ತಾಂತ್ರಿಕ ದೋಷ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ, ಪ್ರಯಾಣಿಕರಿಗೆ ಸಾವಿನ ದರ್ಶನ ಮಾಡಿಸಿದ FLY91 ವಿಮಾನ..!

ಥೈಲ್ಯಾಂಡ್ ರೆಸ್ಟೋರೆಂಟ್‌ನಲ್ಲಿ ಜನಾಂಗೀಯ ನಿಂದನೆ: ಪೊಲೀಸರಿಗೆ ದೂರು ಕೊಟ್ಟ ಭಾರತೀಯ ಪ್ರವಾಸಿಗ! Video

SCROLL FOR NEXT