ಕಂದಕಕ್ಕೆ ಉರುಳಿದ ವ್ಯಾನ್ 
ದೇಶ

Video - ಹೃದಯವಿದ್ರಾವಕ ಘಟನೆ: ವಾಲ್ಪಾರೈ ಘಾಟ್ ನಿಂದ ಕಂದಕಕ್ಕೆ ಉರುಳಿದ ವ್ಯಾನ್; 8 ಪ್ರವಾಸಿಗರು ಸಾವು

ವಾಲ್ಪರೈ ಘಾಟ್ ನ 13ನೇ ಹೇರ್ ಪಿನ್ ಬೆಂಡ್ (13ನೇ ಯು-ಟರ್ನ್ ಕರ್ವ್) ನಲ್ಲಿ ವ್ಯಾನ್ ಚಾಲಕನ ನಿಯಂತ್ರ ತಪ್ಪಿ ಪಲ್ಟಿಯಾಗಿ ರಸ್ತೆಯ ಪಕ್ಕದಲ್ಲಿರುವ ಆಳವಾದ ಕಣಿವೆಗೆ ಬಿದ್ದಿದೆ.

ಕೊಯಮತ್ತೂರು: ಕೇರಳದ ಕೋಯಿಕ್ಕೋಡ್ ನಿಂದ ಸುಮಾರು 16 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ಶುಕ್ರವಾರ ಸಂಜೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ವಾಲ್ಪರೈ ಘಾಟ್ ರಸ್ತೆಯಲ್ಲಿ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಭೀಕರ ಅಪಘಾತದಲ್ಲಿ ಎಂಟು ಜನ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.

ವಾಲ್ಪರೈ ಘಾಟ್ ನ 13ನೇ ಹೇರ್ ಪಿನ್ ಬೆಂಡ್ (13ನೇ ಯು-ಟರ್ನ್ ಕರ್ವ್) ನಲ್ಲಿ ವ್ಯಾನ್ ಚಾಲಕನ ನಿಯಂತ್ರ ತಪ್ಪಿ ಪಲ್ಟಿಯಾಗಿ ರಸ್ತೆಯ ಪಕ್ಕದಲ್ಲಿರುವ ಆಳವಾದ ಕಣಿವೆಗೆ ಬಿದ್ದಿದೆ ಎಂದು ವರದಿಯಾಗಿದೆ.

ಅಪಘಾತವನ್ನು ಕಣ್ಣಾರೆ ಕಂಡ ಸ್ಥಳೀಯರು, ವ್ಯಾನ್ 13ನೇ ಹೇರ್ ಪಿನ್ ಬೆಂಡ್ ನಿಂದ ಒಂಬತ್ತನೇ ಹೇರ್ ಪಿನ್ ಬೆಂಡ್ ಕ್ರಾಸಿಂಗ್ ಬಳಿ ಬಿದ್ದಿದೆ ಎಂದು ಹೇಳಿದ್ದಾರೆ.

ಜೀವಂತವಾಗಿ ಪತ್ತೆಯಾದ ನಾಲ್ವರನ್ನು ಪೊಲ್ಲಾಚಿಯಲ್ಲಿರುವ ಕೊಯಮತ್ತೂರು ಜಿಲ್ಲಾ ಪ್ರಧಾನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಮತ್ತು ಅರಣ್ಯ ಇಲಾಖೆಯ ಬೆಂಬಲದೊಂದಿಗೆ ಇತರರಿಗಾಗಿ ಹುಡುಕಾಟ ಮುಂದುವರೆದಿದೆ.

ಗಾಯಾಳುಗಳ ನಿಖರ ಸಂಖ್ಯೆ ಇನ್ನೂ ದೃಢಪಟ್ಟಿಲ್ಲ, ಆದರೆ ಹಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಮಾಹಿತಿ ಪಡೆದ ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿ, ಅಪಘಾತದ ಕಾರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ವಿದ್ಯಾರ್ಥಿಗಳ ಪ್ರತಿಭಟನೆಯ ಕುರಿತು ಚರ್ಚೆಗೆ ಅಮಿತ್ ಶಾ ಉತ್ತರಿಸುತ್ತಾರೆ, ಆದರೆ...: ಕಿರಣ್ ರಿಜಿಜು

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ