ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಸದಸ್ಯರು ಲೋಕಸಭೆಯಲ್ಲಿರುವುದು. 
ದೇಶ

ಸಂಸತ್ ಬಜೆಟ್ ಅಧಿವೇಶನ ಮುಕ್ತಾಯ: ರಾಜ್ಯಸಭೆ-ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಈ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತು 79 ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿದ್ದು, 2026–27ರ ಕೇಂದ್ರ ಬಜೆಟ್ ಕುರಿತು 97 ಸದಸ್ಯರು ಚರ್ಚೆ ನಡೆಸಿದ್ದಾರೆ.

ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಶನಿವಾರ ಮುಕ್ತಾಯಗೊಂಡಿದ್ದು, ರಾಜ್ಯಸಭೆ ಮತ್ತು ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ರಾಜ್ಯಸಭೆ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮಾಹಿತಿ ನೀಡಿ, ರಾಜ್ಯಸಭೆ ಒಟ್ಟು 157 ಗಂಟೆ 40 ನಿಮಿಷಗಳ ಕಾಲ ಕಾರ್ಯನಿರ್ವಹಿಸಿದ್ದು, ಶೇ.110ರಷ್ಟು ಫಲಪ್ರದವಾಗಿದೆ ಎಂದು ಹೇಳಿದ್ದಾರೆ.

ಏಪ್ರಿಲ್ 16ರಿಂದ 18ರವರೆಗೆ ನಡೆದ ಮೂರು ದಿನಗಳ ವಿಶೇಷ ಸಭೆಯಲ್ಲಿ ಹರಿವಂಶ್ ಅವರನ್ನು ಮೂರನೇ ಅವಧಿಗೆ ಉಪಸಭಾಪತಿಯಾಗಿ ಆಯ್ಕೆ ಮಾಡಲಾಗಿದೆ.

ಈ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತು 79 ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿದ್ದು, 2026–27ರ ಕೇಂದ್ರ ಬಜೆಟ್ ಕುರಿತು 97 ಸದಸ್ಯರು ಚರ್ಚೆ ನಡೆಸಿದ್ದಾರೆ.

ಇದೇ ವೇಳೆ ಪ್ರಮುಖ ಸಚಿವಾಲಯಗಳ ಕಾರ್ಯಚಟುವಟಿಕೆಗಳ ಕುರಿತು ಚರ್ಚೆ ನಡೆದಿದ್ದು, ಭಾರತ–ಅಮೆರಿಕಾ ವ್ಯಾಪಾರ ಒಪ್ಪಂದ ಮತ್ತು ಮಧ್ಯಪ್ರಾಚ್ಯ ಪರಿಸ್ಥಿತಿ ಕುರಿತಂತೆ ಸ್ವಯಂಪ್ರೇರಿತ ಹೇಳಿಕೆಗಳ ಜೊತೆಗೆ ಪ್ರಮುಖ ಸಚಿವಾಲಯಗಳ ಕಾರ್ಯವೈಖರಿಯ ಬಗ್ಗೆಯೂ ಸದನವು ಚರ್ಚೆಗಳನ್ನು ನಡೆಸಿದೆ.

ಅಧಿವೇಶನದ ಅವಧಿಯಲ್ಲಿ 117 ಪ್ರಶ್ನೆಗಳು, 446 ಶೂನ್ಯಾವಧಿ ಪ್ರಸ್ತಾಪಗಳು ಮತ್ತು 207 ವಿಶೇಷ ಉಲ್ಲೇಖಗಳು ದಾಖಲಾಗಿವೆ ಎಂದು ತಿಳಿಸಿದರು.

ಲೋಕಸಭೆಯಲ್ಲಿ, ಸ್ಪೀಕರ್ಓಂ ಬಿರ್ಲಾ ಅವರು ಸಮಾರೋಪ ಭಾಷಣ ನೀಡಿ ಬೆಳಿಗ್ಗೆ 11 ಗಂಟೆಗೆ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡುವ ಮುನ್ನ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ಸಂವಿಧಾನ ತಿದ್ದುಪಡಿ ಮಸೂದೆ ಮತಗಳ ವಿಭಜನೆಯ ನಂತರ ಸೋಲು ಕಂಡಿದೆ. ಈ ಮಸೂದೆಯಲ್ಲಿ ಲೋಕಸಭೆಯ ಸದಸ್ಯರ ಸಂಖ್ಯೆಯನ್ನು 543ರಿಂದ 816ಕ್ಕೆ ಹೆಚ್ಚಿಸುವ ಪ್ರಸ್ತಾಪವೂ ಸೇರಿತ್ತು.

ಅಧಿವೇಶನವು ಔಪಚಾರಿಕವಾಗಿ ಮುಕ್ತಾಯಗೊಳ್ಳುವ ಮೊದಲು ಮಸೂದೆಗಳ ಕುರಿತು ಚರ್ಚಿಸಲು ಸಂಸತ್ತು ಏಪ್ರಿಲ್ 16 ರಿಂದ 18 ರವರೆಗೆ ಮೂರು ದಿನಗಳ ವಿಶೇಷ ಅಧಿವೇಶನವನ್ನು ನಡೆಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ: ಹಡಗಿನ ಮೇಲೆ IRGC ಗುಂಡಿನ ದಾಳಿ, ಕದನ ವಿರಾಮ ಅನಿಶ್ಚಿತತೆ..?

'ಕದನ ವಿರಾಮ ವಿಸ್ತರಿಸುತ್ತೇವೆ, ಇರಾನ್‌ಗೆ ಮಾತುಕತೆಗೆ ಸಮಯ ನೀಡುತ್ತೇವೆ; ಹಾರ್ಮುಜ್ ಜಲಸಂಧಿ ನಿರ್ಬಂಧ ಮುಂದುವರಿಕೆ': ಡೊನಾಲ್ಡ್ ಟ್ರಂಪ್

ಪಹಲ್ಗಾಮ್ ಉಗ್ರರ ದಾಳಿಗೆ ಒಂದು ವರ್ಷ: ಯಾವುದೇ ರೀತಿಯ ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗಲ್ಲ; ಶತ್ರುಗಳಿಗೆ ಪ್ರಧಾನಿ ಮೋದಿ ಖಡಕ್ ವಾರ್ನಿಂಗ್

ಏ.23ರಿಂದ CET ಪರೀಕ್ಷೆ: 3.3 ಲಕ್ಷ ಅಭ್ಯರ್ಥಿಗಳು ನೋಂದಣಿ; 745 ಕೇಂದ್ರಗಳಲ್ಲಿ ವಸ್ತ್ರಸಂಹಿತೆ ನಿರ್ವಹಣೆಗೆ ಅಧಿಕಾರಿಗಳ ನಿಯೋಜನೆ

ಬಿಟ್‌ಕಾಯಿನ್ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ: ಗೃಹ ಸಚಿವ ಡಾ ಜಿ ಪರಮೇಶ್ವರ್

SCROLL FOR NEXT