ಗರ್ಭಿಣಿ ಮಹಿಳೆಗೆ ಲೈಂಗಿಕ ಕಿರುಕುಳ 
ದೇಶ

ನಡು ರಸ್ತೆಯಲ್ಲೇ ಗರ್ಭಿಣಿ ಮಹಿಳೆಗೆ ಲೈಂಗಿಕ ಕಿರುಕುಳ: ಕೊನೆಗೂ ಆರೋಪಿ ಬಂಧನ, Police treatment ಗೆ ಸುಸ್ತು! video

ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಗರ್ಭಿಣಿ ಮಹಿಳೆಗೆ ದುಷ್ಕರ್ಮಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದ.

ಜೈಪುರ: ಇತ್ತೀಚೆಗೆ ವೈರಲ್ ಆಗಿದ್ದ ಗರ್ಭಿಣಿ ಮಹಿಳೆಯ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ರಾಜಸ್ತಾನ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಗೆ ಪೊಲೀಸರು ನೀಡಿರುವ ಸ್ಪೆಷಲ್ ಟ್ರೀಟ್ ಮೆಂಟ್ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ರಾಜಸ್ಥಾನದ ರಾಜಧಾನಿ ಜೈಪುರದ ಮಾಳವಿಯಾ ನಗರದಲ್ಲಿ ಕಳೆದ ಮಾರ್ಚ್ 25, 2026 ರಂದು ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಗರ್ಭಿಣಿ ಮಹಿಳೆಗೆ ದುಷ್ಕರ್ಮಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದ. ಮಹಿಳೆಯನ್ನು ಹಿಂಬಾಲಿಸಿದ್ದ ದುಷ್ಕರ್ಮಿ ಆಕೆಯನ್ನು ಹಿಂಭಾಗದಿಂದ ಹಿಡಿದುಕೊಂಡು ಆಕೆಯ ಎದೆಗೆ ಕೈಹಾಕಿದ್ದ.

ಈ ದಿಢೀರ್ ಘಟನೆಯಿಂದ ಆಘಾತಕ್ಕೊಳಗಾದ ಮಹಿಳೆ ಕೂಡಲೇ ಕಿರುಚಿಕೊಂಡರು. ಈ ವೇಳೆ ಜನ ಸೇರುತ್ತಾರೆ ಎಂಬ ಭಯದಿಂದ ಆತ ಆಕೆಯನ್ನು ಬಿಟ್ಟು ಪರಾರಿಯಾಗಿದ್ದ. ಈ ಘಟನೆಯ ವಿಡಿಯೋ ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವ್ಯಾಪಕ ವೈರಲ್ ಆಗಿತ್ತು.

ಆರೋಪಿಯನ್ನು ಕೂಡಲೇ ಬಂಧಿಸಿ ತಕ್ಕಶಾಸ್ತಿ ಮಾಡಬೇಕು ಎಂದು ಆಗ್ರಹ ಕೂಡ ಕೇಳಿಬಂದಿತ್ತು.

ತಿಂಗಳ ಬಳಿಕ ಕೊನೆಗೂ ಆರೋಪಿ ಬಂಧನ

ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜೈಪುರ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಆದರೆ ಈ ಪ್ರಕರಣ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದ. ಇದೀಗ ಜೈಪುರ ಪೊಲೀಸರು ಕೊನೆಗೂ ಪ್ರಮುಖ ಆರೋಪಿ ರಾಜನ್ ಅಲಿಯಾಸ್ ರಾಜ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸ್ ಟ್ರೀಟ್ ಮೆಂಟ್

ಬಂಧನದ ಬಳಿಕ ಆರೋಪಿಗೆ ಪೊಲೀಸರು ತಮ್ಮದೇ ಆದ ವಿಶೇಷ ಟ್ರೀಟ್ ಮೆಂಟ್ ನೀಡಿದ್ದು, ಆರೋಪಿ ಠಾಣೆಯಿಂದ ಹೊರಗೆ ಬರುವಾಗ ಕೈ ಮತ್ತು ಕಾಲುಗಳಿಗೆ ಬ್ಯಾಂಡೇಜ್ ಸಹಿತನಾಗಿ ಹೊರಬಂದ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 13 ರಿಂದ ಆರಂಭ; ಟಾಪ್‌ 10 ಚರ್ಚಾ ವಿಷಯಗಳಿವು

ಪಾಕ್ ತನ್ನ ಅತಿಕ್ರಮಣವನ್ನು ಮುಚ್ಚಿಹಾಕಲು PoKನಲ್ಲಿ ಚುನಾವಣೆ ನಡೆಸುವ ಪ್ರಯತ್ನ: ಭಾರತ ತೀವ್ರ ಖಂಡನೆ

ಶಾಸಕರ ಭವನದ 7ನೇ ಮಹಡಿಯಿಂದ ಬಿದ್ದು ಮಾಜಿ ಸಚಿವ ನಾನಕ್ ರಾಮ್ ಭುರ್ಜಿ ಸಾವು; ಕೊಲೆಯೋ, ಆತ್ಮಹತ್ಯೆಯೋ?