ಸಂಸ್ಕರಣಾ ಘಟಕದಲ್ಲಿ ಭಾರೀ ಅಗ್ನಿ ಅವಘಡ 
ದೇಶ

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ತೈಲ ಸಂಸ್ಕರಣಾ ಘಟಕದಲ್ಲಿ ಭಾರೀ ಅಗ್ನಿ ಅವಘಡ!

ಸಂಸ್ಕರಣಾಗಾರದ ಸಿಡಿಯು (ಕಚ್ಚಾ ಬಟ್ಟಿ ಇಳಿಸುವಿಕೆ ಘಟಕ) ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉದ್ಘಾಟಿಸಬೇಕಿದ್ದ ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಪಚ್ಪದ್ರಾ ತೈಲ ಸಂಸ್ಕರಣಾಗಾರ-ಪೆಟ್ರೋಕೆಮಿಕಲ್ ಸಂಕೀರ್ಣದಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಭದ್ರತಾ ಕಳವಳಕ್ಕೆ ಕಾರಣವಾಗಿದೆ.

ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗಿದ್ದು, ಯಾವುದೇ ಸಾವುನೋವುಗಳ ಬಗ್ಗೆ ತಕ್ಷಣ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಸಂಸ್ಕರಣಾಗಾರದ ಸಿಡಿಯು (ಕಚ್ಚಾ ಬಟ್ಟಿ ಇಳಿಸುವಿಕೆ ಘಟಕ) ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಸೋಮವಾರ ಸಂಜೆ ಸಂಸ್ಕರಣಾಗಾರಕ್ಕೆ ಭೇಟಿ ನೀಡಲಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಮತ್ತು ಬೆಂಕಿಯಿಂದ ಉಂಟಾದ ಹಾನಿಯ ಮೌಲ್ಯಮಾಪನವನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರತದ ಮೊದಲ ಹಸಿರು ಕ್ಷೇತ್ರ ಸಂಯೋಜಿತ ಸಂಸ್ಕರಣಾಗಾರ-ಕಮ್-ಪೆಟ್ರೋಕೆಮಿಕಲ್ ಸಂಕೀರ್ಣವನ್ನು ಪ್ರಧಾನಿ ಮೋದಿ ಅವರು ನಾಳೆ ಉದ್ಘಾಟಿಸಲಿದ್ದಾರೆ.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಮತ್ತು ರಾಜಸ್ಥಾನ ಸರ್ಕಾರ ಜಂಟಿಯಾಗಿ 79,450 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಅಭಿವೃದ್ಧಿಪಡಿಸಿದ್ದಾರೆ.

ಈ ಸಂಕೀರ್ಣವು 2.4 MMTPA ಪೆಟ್ರೋಕೆಮಿಕಲ್ ಸಾಮರ್ಥ್ಯವನ್ನು ಹೊಂದಿದ್ದು, ಕಚ್ಚಾ ತೈಲವನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿಣಾಮಕಾರಿಯಾಗಿ ಪರಿವರ್ತಿಸಲು ಅನುವು ಮಾಡಿಕೊಡುತ್ತದೆ. ಇದು ವ್ಯಾಪಕ ಶ್ರೇಣಿಯ ಕಚ್ಚಾ ತೈಲಗಳನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಸ್‌ನಲ್ಲಿ ನಿಧಾನಕ್ಕೆ ಕೈ ಹಾಕಿದ, ಸುಮ್ನೆ ಬಿಡ್ತಿನಾ?: ಕಹಿ ಅನುಭವ ಬಿಚ್ಚಿಟ್ಟ Bigg Boss ರಿಷಾ ಗೌಡ

ಬುರ್ಖಾ ಧರಿಸದಿದ್ದರೆ ರೇಪ್ ಮಾಡುವ ಬೆದರಿಕೆ; ಟೀಂ ಲೀಡರ್ ಕೆಟ್ಟದಾಗಿ ಮುಟ್ಟುತ್ತಿದ್ದ: TCS ಭಯಾನಕತೆ ಬಿಚ್ಚಿಟ್ಟ ಸಂತ್ರಸ್ತೆ

ನೆಹರು ಕಾಶ್ಮೀರಿ ಪಂಡಿತ ಅಲ್ಲ, ಮುಸ್ಲಿಂ ಕುಟುಂಬದಿಂದ ಬಂದಿದ್ದಾರೆ: ಬಿಜೆಪಿ ಮಾಜಿ ಸಂಸದ ವಿವಾದಾತ್ಮಕ ಹೇಳಿಕೆ

ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: ಸಮುದ್ರದಲ್ಲಿ ಅಲೆಗಳ ಅಬ್ಬರ; ಸುನಾಮಿ ಎಚ್ಚರಿಕೆ

Video: ಸೋಲಿನ ನಂತರ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ; ಓಡಿ ಬಂದ KKR ಆಟಗಾರ!

SCROLL FOR NEXT