ಹರಿಲಾಲ್ ಪಟೇಲ್ 
ದೇಶ

ನೆಹರು ಕಾಶ್ಮೀರಿ ಪಂಡಿತ ಅಲ್ಲ, ಮುಸ್ಲಿಂ ಕುಟುಂಬದಿಂದ ಬಂದಿದ್ದಾರೆ: ಬಿಜೆಪಿ ಮಾಜಿ ಸಂಸದ ವಿವಾದಾತ್ಮಕ ಹೇಳಿಕೆ

ನೆಹರು ಕೇವಲ ಮತಕ್ಕಾಗಿ ತಮ್ಮನ್ನು ತಾವು ಕಾಶ್ಮೀರಿ ಪಂಡಿತ ಎಂದು ಬಿಂಬಿಸಿಕೊಂಡಿದ್ದಾರೆ. ಅವರ ನಿಜವಾದ ಗುರುತನ್ನು ಮರೆಮಾಚಿದ್ದಾರೆ ಎಂದು ಹರಿಲಾಲ್ ಪಟೇಲ್ ಹೇಳಿದ್ದಾರೆ.

ಅಹಮದಾಬಾದ್: ಬಿಜೆಪಿ ಮಾಜಿ ಸಂಸದ ಹರಿಲಾಲ್ ಪಟೇಲ್ ಅವರು ಜವಾಹರಲಾಲ್ ನೆಹರು ಮತ್ತು ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರು ಕಾಶ್ಮೀರಿ ಪಂಡಿತರಲ್ಲ ಎಂದು ಸೋಮವಾರ ಹೇಳಿದ್ದಾರೆ.

ಗುಜರಾತ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು, ಹರಿಲಾಲ್ ಪಟೇಲ್ ಅವರು ಇಂದು ರಾಜ್‌ಕೋಟ್ ಜಿಲ್ಲೆಯಲ್ಲಿ ಚುನಾವಣಾ ಕಚೇರಿ ಉದ್ಘಾಟನೆ ವೇಳೆ ಈ ಹೇಳಿಕೆ ನೀಡಿದ್ದಾರೆ.

ನೆಹರು ಅವರು ಪಂಡಿತ ಕುಟುಂಬಕ್ಕೆ ಸೇರಿದವರಲ್ಲ, ಅವರು ಮುಸ್ಲಿಂ ಸಮುದಾಯದಿಂದ ಬಂದವರು ಎಂದು ಬಿಜೆಪಿ ನಾಯಕ ಗಂಭೀರ ಆರೋಪ ಮಾಡಿದ್ದಾರೆ.

ನೆಹರು ಕೇವಲ ಮತಕ್ಕಾಗಿ ತಮ್ಮನ್ನು ಕಾಶ್ಮೀರಿ ಪಂಡಿತ ಎಂದು ಬಿಂಬಿಸಿಕೊಂಡಿದ್ದಾರೆ. ಅವರ ನಿಜವಾದ ಗುರುತನ್ನು ಮರೆಮಾಚಿದ್ದಾರೆ ಎಂದು ಹರಿಲಾಲ್ ಪಟೇಲ್ ಹೇಳಿದ್ದಾರೆ.

ಈ ಹೇಳಿಕೆ ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣಾ ಬಿಸಿಯನ್ನು ಮತ್ತಷ್ಟು ಹೆಚ್ಚಿಸಿದ್ದು, ವಿರೋಧ ಪಕ್ಷ ಕಾಂಗ್ರೆಸ್, ಬಿಜೆಪಿ ನಾಯಕನ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಪಟೇಲ್ ಅವರು ಗಾಂಧಿ ಕುಟುಂಬವನ್ನು ಗುರಿಯಾಗಿಸಿಕೊಂಡು ಅವರ ವಂಶಾವಳಿ ಮತ್ತು ಗುರುತನ್ನು ಪ್ರಶ್ನಿಸಿದ್ದಾರೆ. ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಎಲ್ಲರೂ ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಗತಿ ಅಹಿರ್ ಈ ಹೇಳಿಕೆಗಳನ್ನು ಖಂಡಿಸಿದ್ದು, ಮಾಜಿ ಬಿಜೆಪಿ ಸಂಸದರು ಅನಗತ್ಯ ವಿವಾದ ಸೃಷ್ಟಿಸುತ್ತಿದ್ದಾರೆ ಮತ್ತು ಅವರಿಗೆ ಜ್ಞಾನದ ಕೊರತೆಯಿದೆ ಎಂದು ತಿರುಗೇಟು ನೀಡಿದ್ದಾರೆ.

ಭಾಷಣದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವೈರಲ್ ಆಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಮುನ್ನ ರಾಜಕೀಯ ವಿವಾದಕ್ಕೆ ಕಾರಣವಾಗಿದೆ ಮತ್ತು ಟೀಕೆಗೆ ಗುರಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: ಸಮುದ್ರದಲ್ಲಿ ಅಲೆಗಳ ಅಬ್ಬರ; ಸುನಾಮಿ ಎಚ್ಚರಿಕೆ

ಬಸ್‌ನಲ್ಲಿ ನಿಧಾನಕ್ಕೆ ಕೈ ಹಾಕಿದ, ಸುಮ್ನೆ ಬಿಡ್ತಿನಾ?: ಕಹಿ ಅನುಭವ ಬಿಚ್ಚಿಟ್ಟ Bigg Boss ರಿಷಾ ಗೌಡ

ಬುರ್ಖಾ ಧರಿಸದಿದ್ದರೆ ರೇಪ್ ಮಾಡುವ ಬೆದರಿಕೆ; ಟೀಂ ಲೀಡರ್ ಕೆಟ್ಟದಾಗಿ ಮುಟ್ಟುತ್ತಿದ್ದ: TCS ಭಯಾನಕತೆ ಬಿಚ್ಚಿಟ್ಟ ಸಂತ್ರಸ್ತೆ

Video: ಸೋಲಿನ ನಂತರ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ; ಓಡಿ ಬಂದ KKR ಆಟಗಾರ!

US-Iran war: ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕಾ; ಪ್ರತೀಕಾರ ತೀರಿಸಿಕೊಳ್ಳುತ್ತೇವೆಂದ ಟೆಹ್ರಾನ್, ಸಂಘರ್ಷ ಮತ್ತೆ ಉಲ್ಬಣ

SCROLL FOR NEXT