ರಕ್ಷಣಾ ಕಾರ್ಯಾಚರಣೆ 
ದೇಶ

ಪೂರಂ ಹಬ್ಬಕ್ಕೂ ಮುನ್ನ ದೊಡ್ಡ ದುರಂತ: ತ್ರಿಶೂರ್‌ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 12 ಕಾರ್ಮಿಕರು ಸಾವು

ಈ ಸ್ಫೋಟ ಎಷ್ಟು ಪ್ರಬಲವಾಗಿತ್ತೆಂದರೆ, ಹತ್ತಿರದ ಅನೇಕ ನಿವಾಸಿಗಳು ಆರಂಭದಲ್ಲಿ ಇದನ್ನು ಭೂಕಂಪ ಎಂದು ತಪ್ಪಾಗಿ ಭಾವಿಸಿದ್ದರು.

ತ್ರಿಶೂರ್: ಕೇರಳದ ತ್ರಿಶೂರ್ ಪೂರಂ ಹಬ್ಬಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾಗಲೇ ದೊಡ್ಡ ದುರಂತ ಸಂಭವಿಸಿದ್ದು, ತಿರುವಂಬಾಡಿ ದೇವಸ್ಥಾನಕ್ಕೆ ಸಂಬಂಧಿಸಿದ ಪಟಾಕಿ ಕಾರ್ಖಾನೆಯಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿದ್ದು, 12 ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಐದು ಮಂದಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.

ಅಧಿಕಾರಿಗಳ ಪ್ರಕಾರ, ಸ್ಫೋಟ ಸಂಭವಿಸಿದಾಗ ಸುಮಾರು 70 ಕಾರ್ಮಿಕರು ಕಾರ್ಖಾನೆಯಲ್ಲಿದ್ದರು ಮತ್ತು ಅವರಲ್ಲಿ ಹೆಚ್ಚಿನವರು ಕುಂದನೂರಿನವರು ಎನ್ನಲಾಗಿದೆ.

ಈ ಸ್ಫೋಟ ಎಷ್ಟು ಪ್ರಬಲವಾಗಿತ್ತೆಂದರೆ, ಹತ್ತಿರದ ಅನೇಕ ನಿವಾಸಿಗಳು ಆರಂಭದಲ್ಲಿ ಇದನ್ನು ಭೂಕಂಪ ಎಂದು ತಪ್ಪಾಗಿ ಭಾವಿಸಿದ್ದರು. ಆದರೆ ಆ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ ನಂತರ ಇದು ಸ್ಫೋಟ ಎಂದು ತಿಳಿದು ಬಂದಿದೆ.

ಸುಮಾರು 2,000 ಕೆಜಿ ಎಂದು ಅಂದಾಜಿಸಲಾದ ದೊಡ್ಡ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಕಾರ್ಖಾನೆಯಲ್ಲಿ ಸಂಗ್ರಹಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಮತ್ತಷ್ಟು ಸ್ಫೋಟ ಸಂಭವಿಸುವ ಭೀತಿಯ ನಡುವೆ ರಕ್ಷಣಾ ತಂಡಗಳು ಎಚ್ಚರಿಕೆಯಿಂದ ಕಾರ್ಯಚರಣೆ ನಡೆಸುತ್ತಿದ್ದಾರೆ.

ಪೊಲೀಸರು ಮತ್ತು ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಸ್ಥಳವನ್ನು ಸುತ್ತುವರೆದು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿವೆ.

ಕನಿಷ್ಠ 10 ಜನರನ್ನು ತ್ರಿಶೂರ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಘಟನೆಯ ಬಗ್ಗೆ ವಿವರವಾದ ತನಿಖೆಗೆ ಜಿಲ್ಲಾಧಿಕಾರಿ ಶಿಖಾ ಸುರೇಂದ್ರನ್ ಆದೇಶ ನೀಡಿದ್ದಾರೆ, ಸ್ಫೋಟಕ್ಕೆ ಕಾರಣ ಮತ್ತು ಅದರ ಪರಿಣಾಮಗಳ ತನಿಖೆಯನ್ನು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಮತ್ತು ತ್ರಿಶೂರ್ ಆರ್‌ಡಿಒ ಅವರಿಗೆ ವಹಿಸಿದ್ದಾರೆ.

ಏತನ್ಮಧ್ಯೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಸ್ಫೋಟದಲ್ಲಿ ಗಾಯಗೊಂಡವರಿಗೆ ಸಮಗ್ರ ವೈದ್ಯಕೀಯ ಚಿಕಿತ್ಸೆ ಖಚಿತಪಡಿಸಿಕೊಳ್ಳಲು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರಮೇಶ್ವರ್ ಗೆ ಬೆಟ್ಟಿಂಗ್ ಸಂಕಷ್ಟ: FIR ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಆದೇಶ

ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ: ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನಿರ್ಣಯ ಮಂಡನೆ!

ಪ್ರಧಾನಿ ಮೋದಿ ಒಬ್ಬ ಟೆರರಿಸ್ಟ್‌: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ; ಬಳಿಕ ಸ್ಪಷ್ಟನೆ; Video

ಗಲ್ಫ್‌ನಲ್ಲಿ ಅಮೆರಿಕ ವಶಪಡಿಸಿಕೊಂಡ ಹಡಗಿಗೂ ನಮಗೂ ಸಂಬಂಧವಿಲ್ಲ: ಇರಾನ್​​ಗೆ ಕೆಮಿಕಲ್ಸ್ ರವಾನೆ ತಳ್ಳಿಹಾಕಿದ ಚೀನಾ

Indian Stock market: ಮಾತುಕತೆ ಇರಾನ್-ಅಮೆರಿಕದ್ದು, ಲಾಭ ಮಾತ್ರ ಪಾಕಿಸ್ತಾನದ್ದು.. ಷೇರುಮಾರುಕಟ್ಟೆ ಭಾರಿ ಏರಿಕೆ! 3 ಲಕ್ಷ ಕೋಟಿ ರೂ ಲಾಭ

SCROLL FOR NEXT