ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯಲ್ಲಿ ಗ್ರೆನೇಡ್ ದಾಳಿಗೆ ಸಂಚು: ಇಬ್ಬರು ISI ಕಾರ್ಯಕರ್ತರ ಬಂಧನ

ಬಂಧಿತ ಆರೋಪಿಗಳು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಗುಂಡಿನ ದಾಳಿ, ಗ್ರೆನೇಡ್ ದಾಳಿ ಮತ್ತು ಟಾರ್ಗೆಟೆಡ್ ಹತ್ಯೆಗಳನ್ನು ನಡೆಸಲು ಸಂಚು ರೂಪಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಪಾಕಿಸ್ತಾನ ಮೂಲದ ದರೋಡೆಕೋರ ಮತ್ತು ಐಎಸ್‌ಐ ವಕ್ತಾರ ಶಹಜಾದ್ ಭಟ್ಟಿ ಸೂಚನೆಯಂತೆ ಕೆಲಸ ಮಾಡುತ್ತಿದ್ದ ಇಬ್ಬರು ಭಾರತೀಯ ಐಎಸ್ಐ ಕಾರ್ಯಕರ್ತರನ್ನು ದೆಹಲಿ ಪೊಲೀಸರ ವಿಶೇಷ ತಂಡ ಮಂಗಳವಾರ ಬಂಧಿಸಿದೆ.

ಬಂಧಿತ ಆರೋಪಿಗಳು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಗುಂಡಿನ ದಾಳಿ, ಗ್ರೆನೇಡ್ ದಾಳಿ ಮತ್ತು ಟಾರ್ಗೆಟೆಡ್ ಹತ್ಯೆಗಳನ್ನು ನಡೆಸಲು ಸಂಚು ರೂಪಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಧ್ಯಪ್ರದೇಶದ ಗ್ವಾಲಿಯರ್ ಮೂಲದ ರಾಜ್‌ವೀರ್ (21) ಮತ್ತು ವಿವೇಕ್ ಬಂಜಾರ(19) ಎಂದು ಗುರುತಿಸಲಾಗಿದೆ.

"ದೆಹಲಿ ಪೊಲೀಸರು ಇಬ್ಬರು ISI ಕಾರ್ಯಕರ್ತರನ್ನು ಬಂಧಿಸುವ ಮೂಲಕ ರಾಷ್ಟ್ರ ರಾಜಧಾನಿ ಮತ್ತು ಪಕ್ಕದ ಪ್ರದೇಶಗಳಲ್ಲಿ ಯೋಜಿತ ದಾಳಿಗಳನ್ನು ವಿಫಲಗೊಳಿಸಿದ್ದಾರೆ.

ಆರೋಪಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಯುವಕರನ್ನು ಐಎಸ್ಐಗೆ ನೇಮಕ ಮಾಡಿಕೊಳ್ಳುತ್ತಿದ್ದರು ಮತ್ತು ದೆಹಲಿ-ಎನ್‌ಸಿಆರ್‌ನಲ್ಲಿ ಉದ್ದೇಶಿತ ಹಿಂಸಾಚಾರಕ್ಕೆ ಅವರನ್ನು ನಿಯೋಜಿಸುತ್ತಿದ್ದರು" ಎಂದು ಪೊಲೀಸ್ ಉಪ ಆಯುಕ್ತ(ವಿಶೇಷ ದಳ) ಪ್ರವೀಣ್ ಕುಮಾರ್ ತ್ರಿಪಾಠಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಗ್ರೆನೇಡ್ ದಾಳಿ ಮತ್ತು ಟಾರ್ಗೆಟೆಡ್ ಹತ್ಯೆ ನಡೆಸುವ ಸಂಚಿನ ಬಗ್ಗೆ ಮಾಹಿತಿ ದೊರೆತ ನಂತರ ಮಾರ್ಚ್ 31 ರಂದು ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

"ವಿವೇಕ್ ಬಂಜಾರನನ್ನು ಮೊದಲು ಏಪ್ರಿಲ್ 16 ರಂದು ಗ್ವಾಲಿಯರ್‌ನ ದಾಬ್ರಾದಲ್ಲಿ ಪತ್ತೆಹಚ್ಚಿ ಬಂಧಿಸಲಾಯಿತು. ವಿಚಾರಣೆಯ ಸಮಯದಲ್ಲಿ, ಅವನು ತನ್ನ ಸಹಚರ ರಾಜ್‌ವೀರ್ ಬಗ್ಗೆ ಮಾಹಿತಿ ನೀಡಿದನು. ನಂತರ ಏಪ್ರಿಲ್ 18 ರಂದು ದೆಹಲಿಯ ಸರೈ ಕಾಲೇ ಖಾನ್ ಪ್ರದೇಶದಲ್ಲಿ ರಾಜ್‌ವೀರ್ ನನ್ನು ಬಂಧಿಸಲಾಯಿತು" ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ

ಬಗೆಹರಿಯದ ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಜೊತೆಗಿನ ಶಾಂತಿ ಮಾತುಕತೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಪ್ರಯಾಣ?

ಎಂಜಿಆರ್, ಶಿವಾಜಿ ಗಣೇಶನ್ ತೊಡೆ ಮೇಲೆ ಕೂತು ಬೆಳೆದವನು ನಾನು, ಆದರೂ....: ನಟ ವಿಜಯ್‌ಗೆ ತಿರುಗೇಟು ನೀಡಿದ ಕಮಲ್ ಹಾಸನ್!

ಧರ್ಮದ ವಿಚಾರವಾಗಿ ಆನ್ ಲೈನ್ ನಲ್ಲಿ ವಿವಾದಕ್ಕೆ ಗುರಿಯಾದ 'The Rebel Kid' ಅಪೂರ್ವ ಮುಖಿಜಾ! Video ನೋಡಿ.....

ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವವರೆಗೂ ದಿಗ್ಬಂಧನ ತೆರವುಗೊಳಿಸಲ್ಲ: ಡೊನಾಲ್ಡ್ ಟ್ರಂಪ್

SCROLL FOR NEXT