ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ  
ದೇಶ

'ಪ್ರಧಾನಿ ಮೋದಿ ಮೀನು ತಿನ್ನುವುದಾದರೆ ನಾನು ಅವರಿಗೆ ಅಡುಗೆ ಮಾಡಿ ಬಡಿಸುತ್ತೇನೆ': ಮಮತಾ ಬ್ಯಾನರ್ಜಿ

ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂಗಡಿಯೊಂದಕ್ಕೆ ಹೋಗಿ ಜಾಲ್ಮುರಿ ಸೇವಿಸಿದ್ದು ಭಾರೀ ಸುದ್ದಿಯಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ತಿನ್ನುವುದಾದರೆ ನಾನು ಅವರಿಗೆ ಮೀನು ಅಡುಗೆ ಮಾಡಿ ಬಡಿಸುತ್ತೇನೆ ಎಂದು ಹೇಳಿದ್ದರು.

ಜಾಲ್ಮುರಿ ಮತ್ತು ಮೀನು — ಪಶ್ಚಿಮ ಬಂಗಾಳ ಜನತೆಯ ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗ. ಅಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ.

ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂಗಡಿಯೊಂದಕ್ಕೆ ಹೋಗಿ ಜಾಲ್ಮುರಿ ಸೇವಿಸಿದ್ದು ಭಾರೀ ಸುದ್ದಿಯಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ತಿನ್ನುವುದಾದರೆ ನಾನು ಅವರಿಗೆ ಮೀನು ಪದಾರ್ಥ ಮಾಡಿಕೊಡುತ್ತೇನೆ ಎಂದು ಹೇಳಿದ್ದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮೀನು, ಮಾಂಸ ಮತ್ತು ಮೊಟ್ಟೆ ಸೇವನೆ ನಿಷೇಧಿಸಬಹುದು ಟಿಎಂಸಿ ಚುನಾವಣಾ ಪ್ರಚಾರ ವೇಳೆ ಆರೋಪಿಸಿತ್ತು. ಪ್ರಧಾನಮಂತ್ರಿ ಮೋದಿ ಸಸ್ಯಾಹಾರಿ ಎಂದು ಹೇಳಲಾಗುತ್ತಿದೆ.

ಕಳೆದ ಭಾನುವಾರ ಜಾರ್ಗ್ರಾಮ್‌ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಸ್ತೆಬದಿಯ ಸಾಮಾನ್ಯ ಅಂಗಡಿಯಿಂದ ಜನಪ್ರಿಯ ಬೆಂಗಾಳಿ ಸ್ಟ್ರೀಟ್ ಫುಡ್ ಪೊಪ್ಪಡ್ ಅಕ್ಕಿ, ಹಸಿಮೆಣಸಿನಕಾಯಿ ಮತ್ತು ವಿವಿಧ ಮಸಾಲೆಗಳಿಂದ ತಯಾರಾಗುವ ಜಾಲ್ಮುರಿ ಖರೀದಿಸಿ ತಿಂದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೆಲ್ಲ ಡ್ರಾಮಾ ಎಂದು ಕರೆದರು.

ಪ್ರಧಾನ ಮಂತ್ರಿಗಳದ್ದು ಕೇವಲ ಪ್ರದರ್ಶನ ಮಾತ್ರ. ಅವರು ತಿಂದ ಜಾಲ್ಮುರಿ ಅಂಗಡಿಯವರು ಮಾಡಿದ್ದು ಅಲ್ಲ, ಈ ತಿಂಡಿಯನ್ನು ಪ್ರಧಾನಮಂತ್ರಿಗೆ ಭದ್ರತೆ ಒದಗಿಸುವ ಎಸ್‌ಪಿಜಿ (Special Protection Group) ಸಿಬ್ಬಂದಿಯೇ ತಯಾರಿಸಿರಬಹುದು ಎಂದರು.

ಟಿಎಂಸಿ ಮುಖ್ಯಸ್ಥರು ಪ್ರಧಾನ ಮಂತ್ರಿಯವರು ಅಂಗಡಿಗೆ ಹೋಗಿ ಸಾಮಾನ್ಯರ ರೀತಿ ಖರೀದಿಸುವಂತೆ ನಾಟಕ ಮಾಡಲಾಗಿದೆ ಎಂದು ಹೇಳಿದರೆ, ಬಿಜೆಪಿ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು, ಮೋದಿ ಈ ರೀತಿಯಾಗಿ ಸಾಮಾನ್ಯ ಅಂಗಡಿಯಲ್ಲಿ ತಿಂಡಿ ತಿನ್ನುವುದರಿಂದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪರಿಣಾಮ ಬೀರುತ್ತದೆ ಎಂದು ಹೇಳಿದರು. ಕಳೆದ 15 ವರ್ಷಗಳಲ್ಲಿ ಮುಖ್ಯಮಂತ್ರಿ ಬ್ಯಾನರ್ಜಿ ಇಂತಹ ಸಣ್ಣ ವ್ಯಾಪಾರಿಗಳೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸಿದ್ದಾರೆಯೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಗೆದ್ದರೆ ಜನರ ಆಹಾರ ಪದ್ಧತಿಗಳನ್ನು ನಿಯಂತ್ರಿಸುತ್ತದೆ ಎಂಬ ಟಿಎಂಸಿ ಆರೋಪವನ್ನು ಕೇಸರಿ ಪಕ್ಷದ ನಾಯಕರು ತೀವ್ರವಾಗಿ ತಳ್ಳಿ ಹಾಕುತ್ತಿದ್ದು, ಪಶ್ಚಿಮ ಬಂಗಾಳದ ಮೀನುಪ್ರಿಯ ಜನರು ತಮ್ಮ ಇಚ್ಛೆಯಂತೆ ಏನು ಬೇಕಾದರೂ ತಿನ್ನಬಹುದು ಎಂದು ಹೇಳಿದ್ದಾರೆ.

Tamilnadu & West Bengal Election 2026 Live Updates | 9 ಗಂಟೆ ವೇಳೆಗೆ ತಮಿಳುನಾಡಿನಲ್ಲಿ ಶೇ. 17.69, ಪಶ್ಚಿಮ ಬಂಗಾಳದಲ್ಲಿ ಶೇ.18.76ರಷ್ಟು ಮತದಾನ

US-Iran war:: ಅಮೆರಿಕಾ ನೌಕಾ ದಿಗ್ಭಂಧನ ಮುಂದುವರಿದರೆ ಹಾರ್ಮುಜ್ ಜಲಸಂಧಿ ತೆರೆಯಲ್ಲ; ಇರಾನ್ ಕಠಿಣ ನಿಲುವು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

ಇಂದು SSLC ರಿಸಲ್ಟ್: 8.6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ, ಹೈಕೋರ್ಟ್ ಆದೇಶ ಹಿನ್ನೆಲೆ ಹಿಂದಿ ಗ್ರೇಡ್'ಗೆ ಕೊಕ್..!

ಕದನ ವಿರಾಮ ಒಪ್ಪಂದಕ್ಕೆ ಬೆಲೆ ಇಲ್ಲವೇ?: ಲೆಬನಾನ್‌ ಮೇಲೆ ಮುಂದುವರೆದ ಇಸ್ರೇಲ್ ದಾಳಿ, ಪತ್ರಕರ್ತೆ ಸೇರಿ ಐವರ ಸಾವು..!

ಕಬ್ಬಡ್ಡಿ ಪಂದ್ಯದ ವೇಳೆ ಬೆಟ್ಟಿಂಗ್: ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಈಗ ತಮಾಷೆನೂ ಮಾಡುವಂತಿಲ್ಲ‌ ಎಂಬಂತಾಗಿದೆ; ಗೃಹ ಸಚಿವ ಪರಮೇಶ್ವರ್

SCROLL FOR NEXT