ಶರದ್ ಪವಾರ್  
ದೇಶ

ಮುಂಬೈ: ಶರದ್ ಪವಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಶರದ್ ಪವಾರ್ ಅವರ ವಯಸ್ಸು ಹಾಗೂ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮುಂಬೈ: ಮತ್ತೆ ಆರೋಗ್ಯದ ಸಮಸ್ಯೆಯಿಂದ ಇದೇ ತಿಂಗಳ 19ರಂದು ಇಲ್ಲಿನ ಬ್ರೀಜ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ-ಶರದ್ಚಂದ್ರ ಪವಾರ್ ಅಧ್ಯಕ್ಷ ಶರದ್ ಪವಾರ್ ಅವರನ್ನು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ಶರದ್ ಪವಾರ್ ಅವರ ವಯಸ್ಸು ಹಾಗೂ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಆತಂಕಪಡಬೇಕಾಗಿಲ್ಲ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ದಿವಂಗತ ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಅಭ್ಯರ್ಥಿಯಾಗಿರುವ ವಿಧಾನಸಭಾ ಉಪಚುನಾವಣೆಯಲ್ಲಿ ಮತ ಚಲಾಯಿಸಲು ಬಾರಾಮತಿಗೆ ಪ್ರಯಾಣಿಸಲು ಸಾಧ್ಯವಾಗುವುದಿಲ್ಲ ಎಂದು ಪವಾರ್ ಟ್ವೀಟ್ ಮಾಡಿದ್ದರು.

ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ನಿಧನರಾದ ಕಾರಣ ಉಪಚುನಾವಣೆ ಅನಿವಾರ್ಯವಾಯಿತು. ಸುನೇತ್ರಾ ಪವಾರ್ ಅವರಿಗೆ ಮತ ಚಲಾಯಿಸುವಂತೆ ಜನರಿಗೆ ಆಸ್ಪತ್ರೆಯಿಂದಲೇ ಶರದ್ ಪವಾರ್ ಮನವಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ದಿಗ್ಬಂಧನ ಧಿಕ್ಕರಿಸಿ, ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಸಂಗ್ರಹ; ಟ್ರಂಪ್'ಗೆ ಟೆಹ್ರಾನ್ ಡಿಚ್ಚಿ

Tamilnadu & West Bengal Election 2026 Live Updates |ಸಂಜೆ 5 ಗಂಟೆ ವೇಳೆಗೆ ತಮಿಳುನಾಡು ಶೇ. 81, ಪಶ್ಚಿಮ ಬಂಗಾಳ ಹಂತ-I ಶೇ.90 ಮತದಾನ

ಹೃದಯ ವಿದ್ರಾವಕ ಘಟನೆ: ಪತ್ನಿ, ತಾಯಿ ಕೊಂದು, ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ!

ಪಾಕಿಸ್ತಾನ ಡಬಲ್ ಗೇಮ್ ಆಡುತ್ತಿದೆ: ಇರಾನ್ ಕೆಂಡಾಮಂಡಲ, ಮುಂದಿನ ನಡೆಯೇ ನಿಗೂಢ! ಏನಿದು ಹೊಸ ವಿವಾದ?

Indian Stock Market: ಇರಾನ್ ಸಂಘರ್ಷ, ತೈಲ ಬೆಲೆ ಏರಿಕೆ.. ಷೇರುಮಾರುಕಟ್ಟೆ ಕುಸಿತ, Sensex 852 ಅಂಕ ಇಳಿಕೆ

SCROLL FOR NEXT