ಪ್ರಧಾನಿ ಮೋದಿ 
ದೇಶ

'ಮಹಾ ಜಂಗಲ್ ರಾಜ್'ಗೆ ಮರಣ ಶಾಸನ'; ಮೊದಲ ಹಂತದ ದಾಖಲೆಯ ಮತದಾನದಿಂದ TMC ಬೆಚ್ಚಿಬಿದ್ದಿದೆ!

ಮೇ 4 ರಂದು ಫಲಿತಾಂಶ ಪ್ರಕಟವಾದ ನಂತರ, ಟಿಎಂಸಿ "ಗೂಂಡಾಗಳಿಗೆ" ಅಡಗಿಕೊಳ್ಳಲು ಸ್ಥಳ ಸಿಗುವುದಿಲ್ಲ ಮತ್ತು ಕಾನೂನಿನಿಂದ ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಧಾನಿ ವಾಗ್ದಾಳಿ ನಡೆಸಿದರು.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಗುರುವಾರ ನಡೆದ ಮೊದಲ ಹಂತದ ಮತದಾನದಲ್ಲಿ ಭಾರಿ ಪ್ರಮಾಣದ ಮತದಾನವಾಗಿದ್ದು, ಇದರಿಂದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸರ್ಕಾರ ಬೆಚ್ಚಿ ಬಿದ್ದಿದೆ ಮತ್ತು "ಜಂಗಲ್ ರಾಜ್ ಆಡಳಿತಕ್ಕೆ ಮರಣ ಶಾಸನ" ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಇಂದು ಪಾಣಿಹಟಿಯಲ್ಲಿ ನಡೆದ ಹೈ-ಡೆಸಿಬಲ್ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸಾರ್ವಜನಿಕರ ಅಗಾಧ ಭಾಗವಹಿಸುವಿಕೆಯು ಟಿಎಂಸಿಯ "ಮಹಾ ಜಂಗಲ್ ರಾಜ್" ಆಡಳಿತಕ್ಕೆ ಅಂತಿಮ ದಿನವಾಗಿದೆ ಎಂದರು.

ಪಶ್ಚಿಮ ಬಂಗಾಳದಲ್ಲಿ ಲಂಚವಿಲ್ಲದೆ ಯಾವುದೇ ಕೆಲಸವಾಗುವುದಿಲ್ಲ. "ವ್ಯವಸ್ಥಿತ ಭ್ರಷ್ಟಾಚಾರ, ದುರಾಡಳಿತ ಮತ್ತು ಒಳನುಸುಳುವವರ ಪ್ರಭಾವ" ದಿಂದ ರಾಜ್ಯವನ್ನು ಗುರುತಿಸಲಾಗುತ್ತಿದೆ ಎಂದು ಆರೋಪಿಸಿದರು.

"ಬಂಗಾಳದಲ್ಲಿ ಬಹಳ ದಿನಗಳಿಂದ ಗೋಚರಿಸುತ್ತಿದ್ದ ಬದಲಾವಣೆಯ ಅಲೆ - ನಿನ್ನೆಯ ಮೊದಲ ಹಂತದ ಮತದಾನದ ನಂತರ ಕಂಡು ಬಂದಿತು. ನಿನ್ನೆ ಬಿಜೆಪಿ ಪರವಾಗಿ ತೋರಿದ ಬೆಂಬಲವು ಅದರ ವಿಜಯದ ಕಹಳೆ ಊದಿದೆ" ಎಂದು ಮೋದಿ ಹೇಳಿದರು.

ಮೇ 4 ರಂದು ಫಲಿತಾಂಶ ಪ್ರಕಟವಾದ ನಂತರ, ಟಿಎಂಸಿ "ಗೂಂಡಾಗಳಿಗೆ" ಅಡಗಿಕೊಳ್ಳಲು ಸ್ಥಳ ಸಿಗುವುದಿಲ್ಲ ಮತ್ತು ಕಾನೂನಿನಿಂದ ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಧಾನಿ ವಾಗ್ದಾಳಿ ನಡೆಸಿದರು.

"ಮೊದಲ ಹಂತದ ಮತದಾನವು ಟಿಎಂಸಿಯ 'ಮಹಾ ಜಂಗಲ್ ರಾಜ್' ಅಂತ್ಯಗೊಂಡಿತು" ಎಂಬುದುನ್ನು ಸೂಚಿಸುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ರಾಜ್‌ಕುಮಾರ್ ಸ್ಮಾರಕಕ್ಕೆ 2.5 ಎಕರೆ ಸರ್ಕಾರಿ ಜಾಗ ಯಾಕೆ?: ನಟ ಚೇತನ್ ಅಹಿಂಸಾ

ವಿಜಯಪುರದಲ್ಲಿ ಥಾರ್​​ಗೆ ಟ್ರಕ್ ಡಿಕ್ಕಿ ಹೊಡೆಸಿ ಹತ್ಯೆ: ಸಿನಿಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಪೊಲೀಸರು; ಆರು ಜನರ ಬಂಧನ

ರಾಘವ್ ಚಡ್ಡಾ ಬಿಜೆಪಿಯ 'ಟೂಲ್'; ಪಕ್ಷ ಒಡೆಯಲು ಯತ್ನ: ಎಎಪಿ

ಸಂಸತ್ ನಲ್ಲಿ ನಿರ್ಬಂಧಿಸಿದ್ದ AAP ಗೆ ಶಾಕ್! ರಾಘವ್ ಚಡ್ಡಾ ಸೇರಿ 7 ಸಂಸದರು ಬಿಜೆಪಿ ಸೇರ್ಪಡೆ; ಸರ್ಕಾರಕ್ಕೆ ಮತ್ತಷ್ಟು ಬಲ!

SCROLL FOR NEXT