ಅಧೀರ್ ರಂಜನ್ ಚೌಧರಿ 
ದೇಶ

ಬಂಗಾಳದಲ್ಲಿ ಲಕ್ಷಾಂತರ ಕೇಂದ್ರ ಪಡೆಗಳಿದ್ದರೂ ಹಿಂಸಾಚಾರ; ಚುನಾವಣಾ ಆಯೋಗದ ವೈಫಲ್ಯವನ್ನು ಬಿಂಬಿಸುತ್ತದೆ: ಕಾಂಗ್ರೆಸ್

ಇಂದು ANI ಜೊತೆ ಮಾತನಾಡಿದ ಚೌಧರಿ, ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿ ಇಂತಹ ಉದ್ವಿಗ್ನತೆ ಮತ್ತು ಹಿಂಸಾಚಾರದ ಘಟನೆಗಳು ಪುನರಾವರ್ತಿವಾಗುತ್ತಿವೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆಯ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಭಾನುವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗವು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವಲ್ಲಿ ವಿಫಲವಾಗಿರುವುದನ್ನು ಇದು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿದ್ದಾರೆ.

ಇಂದು ANI ಜೊತೆ ಮಾತನಾಡಿದ ಚೌಧರಿ, ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿ ಇಂತಹ ಉದ್ವಿಗ್ನತೆ ಮತ್ತು ಹಿಂಸಾಚಾರದ ಘಟನೆಗಳು ಪುನರಾವರ್ತಿವಾಗುತ್ತಿವೆ. "ಬಂಗಾಳದ ಜನರು ಚುನಾವಣೆಗಳ ಸಮಯದಲ್ಲಿ, ಚುನಾವಣೆಗೂ ಮೊದಲು ಮತ್ತು ಚುನಾವಣೆ ನಂತರ ಈ ಉದ್ವಿಗ್ನತೆಯನ್ನು ನಿಯಮಿತವಾಗಿ ನೋಡುತ್ತಿದ್ದಾರೆ. ಇದರಲ್ಲಿ ಹೊಸದೇನೂ ಇಲ್ಲ; ಹೊಸ ವಿಷಯವೆಂದರೆ ಲಕ್ಷಾಂತರ ಕೇಂದ್ರ ಪಡೆಗಳ ನಿಯೋಜನೆಯ ಹೊರತಾಗಿಯೂ ಈ ರೀತಿಯ ಹಿಂಸಾಚಾರ ಮುಂದುವರಿದರೆ, ಅದು ಚುನಾವಣಾ ಆಯೋಗದ ವೈಫಲ್ಯಗಳನ್ನು ಪ್ರತಿಬಿಂಬಿಸುತ್ತದೆ" ಎಂದು ಹೇಳಿದ್ದಾರೆ.

ಚುನಾವಣಾ ಆಯೋಗವು ಹೆಚ್ಚಿನ ಜಾಗರೂಕತೆಯನ್ನು ವಹಿಸಬೇಕೆಂದು ಒತ್ತಾಯಿಸಿದ ಕಾಂಗ್ರೆಸ್ ನಾಯಕ, ಜೊತೆಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳೂ ವಿಫಲವಾಗಿದ್ದಾರೆ ಎಂದು ಆರೋಪಿಸಿದರು. "ಆದ್ದರಿಂದ, ಚುನಾವಣಾ ಆಯೋಗವು ಹೆಚ್ಚು ಜಾಗರೂಕರಾಗಿರಬೇಕು ಮತ್ತು ಬಂಗಾಳದ ಕೆಳ ಹಂತದ ಪೊಲೀಸ್ ಅಧಿಕಾರಿಗಳು ಇನ್ನೂ ಆಡಳಿತ ಪಕ್ಷದ ಪರವಾಗಿ ಉದ್ವಿಗ್ನತೆಯನ್ನು ಹರಡಲು ಮತ್ತು ಭಯದ ವಾತಾವರಣವನ್ನು ಸೃಷ್ಟಿಸಲು ಸಹಾಯ ಮಾಡುತ್ತಿದ್ದಾರೆ" ಎಂದು ಆರೋಪಿಸಿದರು.

"ಹೊರಗಿನಿಂದ ಎಷ್ಟೇ ಉನ್ನತ ಅಧಿಕಾರಿಗಳನ್ನು ಕರೆತಂದರೂ, ಚುನಾವಣಾ ಆಯೋಗಕ್ಕೆ ಕೆಳ ಹಂತದ ಅಧಿಕಾರಿಗಳ ಮೇಲೆ ಯಾವುದೇ ನಿಯಂತ್ರಣವಿಲ್ಲ ಮತ್ತು ಅದಕ್ಕಾಗಿಯೇ ಹಿಂಸಾಚಾರ ನಡೆಯುತ್ತಿದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್