ನಿತಿನ್ ಗಡ್ಕರಿ 
ದೇಶ

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಯಾವುದೇ ಭವಿಷ್ಯವಿಲ್ಲ: ಸಾರಿಗೆ ಸಚಿವ ನಿತಿನ್ ಗಡ್ಕರಿ ಶಾಕಿಂಗ್ ಹೇಳಿಕೆ

ಬಸ್‌ವರ್ಲ್ಡ್ ಇಂಡಿಯಾ ಕಾನ್ಕ್ಲೇವ್ 2025 ರಲ್ಲಿ ಮಾತನಾಡಿದ ನಿತಿನ್ ಗಡ್ಕರಿ ಅವರು, "ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳಿಗೆ ಭವಿಷ್ಯವಿಲ್ಲ" ಎಂದು ಹೇಳಿದರು.

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್‌ನಂತಹ ಪಳೆಯುಳಿಕೆ ಇಂಧನಗಳಿಂದ ಕಾರ್ಯನಿರ್ವಹಿಸುವ ವಾಹನಗಳಿಗೆ ದೀರ್ಘಾವಧಿಯಲ್ಲಿ ಯಾವುದೇ ಭವಿಷ್ಯವಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಪರ್ಯಾಯ ಇಂಧನ ಆಯ್ಕೆಗಳ ಪರವಾಗಿ ಸಾರಿಗೆ ಸಚಿವರು ಈ ಹೇಳಿಕೆ ನೀಡಿದ್ದು, ಆಟೋಮೊಬೈಲ್ ಉದ್ಯಮವು ಶುದ್ಧ ಇಂಧನಗಳತ್ತ ಪರಿವರ್ತನೆಗೊಳ್ಳುವ ಕೆಲಸ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಈ ಬದಲಾವಣೆಯು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು ಸಾಕಷ್ಟು ಕೊಡುಗೆ ನೀಡುತ್ತದೆ ಎಂದು ಗಡ್ಕರಿ ಉಲ್ಲೇಖಿಸಿದ್ದಾರೆ.

ಶುದ್ಧ ಇಂಧನಕ್ಕೆ ಒತ್ತು

ಬಸ್‌ವರ್ಲ್ಡ್ ಇಂಡಿಯಾ ಕಾನ್ಕ್ಲೇವ್ 2025 ರಲ್ಲಿ ಮಾತನಾಡಿದ ನಿತಿನ್ ಗಡ್ಕರಿ ಅವರು, "ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳಿಗೆ ಭವಿಷ್ಯವಿಲ್ಲ" ಎಂದು ಹೇಳಿದರು.

ಜೈವಿಕ ಇಂಧನಗಳು, ಸಿಎನ್‌ಜಿ, ಎಲ್‌ಎನ್‌ಜಿ ಮತ್ತು ವಿದ್ಯುತ್ ಪವರ್‌ಟ್ರೇನ್‌ಗಳಂತಹ ಶುದ್ಧ ಇಂಧನ ಪರ್ಯಾಯಗಳ ಕಡೆಗೆ ಪರಿವರ್ತನೆಗೊಳ್ಳುವ ಅಗತ್ಯವಿದೆ. ಆಮದು, ಪರಿಸರ ಮಾಲಿನ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಗಂಭೀರ ಸಮಸ್ಯೆಗಳನ್ನು ಒಡ್ಡುತ್ತದೆ ಎಂದು ಗಡ್ಕರಿ ಹೇಳಿದ್ದಾರೆ.

ನಾವು ಈಗ ಹೈಡ್ರೋಜನ್ ಟ್ರಕ್‌ಗಳು ಮತ್ತು ಬಸ್‌ಗಳನ್ನು ಓಡಿಸುವ 10 ಮಾರ್ಗಗಳಲ್ಲಿದ್ದೇವೆ. ಹೈಡ್ರೋಜನ್ ಭವಿಷ್ಯದ ಇಂಧನವಾಗಿದೆ. ವಾಹನಗಳು E20 ಇಂಧನದಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುವಾಗ ಉದ್ಯಮವು ಈಗಾಗಲೇ ಫ್ಲೆಕ್ಸ್ ಇಂಧನ ಎಂಜಿನ್‌ಗಳ ಅಭಿವೃದ್ಧಿಯಲ್ಲಿ ಕೆಲಸ ಮಾಡುತ್ತಿದೆ ಎಂದಿದ್ದಾರೆ. ಇದೇ ವೇಳೆ, ಪರ್ಯಾಯ ಇಂಧನವಾಗಿ ಎಥೆನಾಲ್‌ನ ಪ್ರಾಮುಖ್ಯತೆಯನ್ನು ಸಚಿವರು ಒತ್ತಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್