ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ  
ದೇಶ

Assembly elections: ಪ. ಬಂಗಾಳ ಅಂತಿಮ ಹಂತದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ. 61.1ರಷ್ಟು ಮತದಾನ: ಸಿಎಂ ಮಮತಾ ಬ್ಯಾನರ್ಜಿ ಸೇರಿ ಪ್ರಮುಖ ನಾಯಕರ ಭವಿಷ್ಯ ಇಂದು ನಿರ್ಧಾರ

ಇಂದಿನ ಮತದಾನದಲ್ಲಿ 1,228 ಪುರುಷರು ಮತ್ತು 220 ಮಹಿಳೆಯರು ಸೇರಿದಂತೆ ಒಟ್ಟು 1,448 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಒಟ್ಟು 294 ವಿಧಾನಸಭಾ ಕ್ಷೇತ್ರಗಳಲ್ಲಿ 142 ಕ್ಷೇತ್ರಗಳಲ್ಲಿ ಮಹತ್ವದ ಸ್ಪರ್ಧಾತ್ಮಕ ಮತದಾನ ಇಂದು ನಡೆಯುತ್ತಿದ್ದು, ಫಲಿತಾಂಶ ಮೇ 4ರಂದು ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿ 142 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಬುಧವಾರ 7 ಗಂಟೆಗೆ ಮತದಾನ ಆರಂಭವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ 1,448ಕ್ಕೂ ಹೆಚ್ಚು ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇಂದು ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಮಧ್ಯಾಹ್ನ 1 ಗಂಟೆಯವರೆಗೆ ಶೇ.61.1ರಷ್ಟು ಮತದಾನವಾಗಿದೆ.

ಕೇರಳ, ಅಸ್ಸಾಂ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಮೊದಲ ಹಂತದ ಮತದಾನ ಈಗಾಗಲೇ ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ 152 ಕ್ಷೇತ್ರಗಳಲ್ಲಿ ನಡೆದ ಮತದಾನದಲ್ಲಿ, ಪಶ್ಚಿಮ ಬಂಗಾಳದಲ್ಲಿ ದಾಖಲೆಯ ಶೇಕಡಾ 92.72ರಷ್ಟು ಮತದಾನ ಕಂಡಿದ್ದು, ಸ್ವಾತಂತ್ರ್ಯ ನಂತರದ ಗರಿಷ್ಠ ಪ್ರಮಾಣವಾಗಿದೆ. ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಫಲಿತಾಂಶಗಳ ಜೊತೆಗೆ ಮೇ 4ರಂದು ಚುನಾವಣಾ ಫಲಿತಾಂಶಗಳು ಪ್ರಕಟವಾಗಲಿವೆ.

ಇಂದಿನ ಮತದಾನದಲ್ಲಿ 1,228 ಪುರುಷರು ಮತ್ತು 220 ಮಹಿಳೆಯರು ಸೇರಿದಂತೆ ಒಟ್ಟು 1,448 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಒಟ್ಟು 3.22 ಕೋಟಿಗೂ ಹೆಚ್ಚು ಮತದಾರರು ಭಾಗವಹಿಸುವ ನಿರೀಕ್ಷೆಯಿದ್ದು, ಇದರಲ್ಲಿ 1.64 ಕೋಟಿ ಪುರುಷರು, 1.57 ಕೋಟಿ ಮಹಿಳೆಯರು ಮತ್ತು 792 ತೃತೀಯ ಲಿಂಗದ ಮತದಾರರು ಸೇರಿದ್ದಾರೆ.

41,001 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.

ಚುನಾವಣಾ ಆಯೋಗವು ಭದ್ರತಾ ಕ್ರಮಗಳನ್ನು ಬಲಪಡಿಸಿದ್ದು, ಪಶ್ಚಿಮ ಬಂಗಾಳದ ಏಳು ಜಿಲ್ಲೆಗಳಾದ್ಯಂತ ಕೇಂದ್ರ ಭದ್ರತಾ ಪಡೆಗಳ 2,321 ತುಕಡಿಗಳನ್ನು ನಿಯೋಜಿಸಲಾಗಿದೆ. ಒಟ್ಟು 142 ಭದ್ರತಾ ವೀಕ್ಷಕರನ್ನು ನಿಯೋಜಿಸಲಾಗಿದೆ. ಡ್ರೋನ್‌ಗಳ ಮೂಲಕವೂ ಮತದಾನ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ.

ಕೋಲ್ಕತ್ತಾ, ಹೌರಾ, ಉತ್ತರ ಮತ್ತು ದಕ್ಷಿಣ 24 ಪರಗಣಾ, ನಾಡಿಯಾ, ಹೂಗ್ಲಿ ಮತ್ತು ಪೂರ್ವ ಬರ್ಧಮಾನ ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾರರು ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಈ ಜಿಲ್ಲೆಗಳು ರಾಜ್ಯದ ರಾಜಕೀಯ ಮತ್ತು ಚುನಾವಣಾ ಕೇಂದ್ರ ಭಾಗಗಳಾಗಿವೆ.

ಮಮತಾ ವಿರುದ್ಧ ಸುವೇಂದು: ಭಾವನಿಪುರದಲ್ಲಿ ಪೈಪೋಟಿ

ಪಶ್ಚಿಮ ಬಂಗಾಳದ ಚುನಾವಣಾ ಲೆಕ್ಕಾಚಾರದಲ್ಲಿ ಭಾವನಿಪುರ ಕ್ಷೇತ್ರವು ಪ್ರಮುಖ ಪಾತ್ರವಹಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ದೀರ್ಘಕಾಲದಿಂದ ಪ್ರತಿನಿಧಿಸಿಕೊಂಡು ಬಂದಿರುವ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ವಿರುದ್ಧ ಕಠಿಣ ಪೈಪೋಟಿಯನ್ನು ಎದುರಿಸುತ್ತಿದ್ದಾರೆ. ಇದರಿಂದಾಗಿ ಇದು ರಾಜ್ಯದ ಅತ್ಯಂತ ಗಮನ ಸೆಳೆಯುವ ಕ್ಷೇತ್ರವಾಗಿದೆ.

ತೃಣಮೂಲ ಕಾಂಗ್ರೆಸ್ ಪಕ್ಷವು ದಕ್ಷಿಣ ಕೊಲ್ಕತ್ತಾದಲ್ಲಿ ತನ್ನ ಬಲವನ್ನು ಉಳಿಸಿಕೊಳ್ಳಲು ಸಂಘಟನೆ ಶಕ್ತಿ ಮತ್ತು ಭಾವನಾತ್ಮಕ ಅಂಶಗಳ ಮೇಲೆ ಭರವಸೆ ಇಟ್ಟಿದೆ. ಮತ್ತೊಂದೆಡೆ ಬಿಜೆಪಿ ಸಾಮಾಜಿಕ ಸಮೀಕರಣ ಮತ್ತು ಪ್ರತೀಕಾತ್ಮಕ ರಾಜಕೀಯದ ಮೂಲಕ ಈ ಕ್ಷೇತ್ರವನ್ನು ಗೆಲ್ಲಲು ಪ್ರಯತ್ನಿಸುತ್ತಿದೆ.

ಈ ಪೈಪೋಟಿ 2021ರ ವಿಧಾನಸಭಾ ಚುನಾವಣೆಯನ್ನು ನೆನಪಿಸುತ್ತದೆ. ಆಗ ಮಮತಾ ಬ್ಯಾನರ್ಜಿ ಅವರು ತಮ್ಮ ಮಾಜಿ ಸಹಚರ ಸುವೇಂದು ಅಧಿಕಾರಿಯನ್ನು ನಂದಿಗ್ರಾಮದಲ್ಲಿ ಎದುರಿಸಿದ್ದರು. ಆ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಸೋತರೂ, ಟಿಎಂಸಿ ಪಕ್ಷವು ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ನಂತರ ಅವರು ಭಾವನಿಪುರ ಉಪಚುನಾವಣೆಯಲ್ಲಿ ಗೆದ್ದಿದ್ದರು.

ಈ ಬಾರಿ ಕ್ಷೇತ್ರ ಬದಲಾಗಿದೆ, ಫಲಿತಾಂಶವೂ ಬದಲಾಗುತ್ತದೆಯೇ ಎಂಬುದು ಕಾದು ನೋಡಬೇಕಿದೆ.

ಮಮತಾ ಬ್ಯಾನರ್ಜಿ ಪಕ್ಷವು ‘ಘೋರೆರ್ ಮೇಯೆ’ (ಮನೆಯ ಮಗಳು) ಎಂಬ ಭಾವನಾತ್ಮಕ ಘೋಷಣೆ, ಸಂಘಟನೆ ಶಕ್ತಿ ಮತ್ತು ನಿರಂತರತೆಯ ಮೇಲೆ ಅವಲಂಬಿಸಿದೆ. ಇನ್ನೊಂದೆಡೆ ಬಿಜೆಪಿ ಜಾತಿ ಸಮೀಕರಣ, ರಾಮನವಮಿ ಪ್ರಚಾರ ಮತ್ತು ಬೂತ್ ಮಟ್ಟದ ಸಾಮಾಜಿಕ ತಂತ್ರಗಳನ್ನು ಬಳಸಿಕೊಂಡು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಭದ್ರ ಕ್ಷೇತ್ರವನ್ನು ಗೆಲ್ಲಲು ಪ್ರಯತ್ನಿಸುತ್ತಿದೆ.

2021ರಲ್ಲಿ ದಕ್ಷಿಣ ಬಂಗಾಳದ ಮತದಾನ

ದಕ್ಷಿಣ ಬಂಗಾಳ ಪ್ರದೇಶವು ತೃಣಮೂಲ ಕಾಂಗ್ರೆಸ್‌ನ ಬಲವಾದ ಪ್ರದೇಶವೆಂದು ಪರಿಗಣಿಸಲ್ಪಡುತ್ತದೆ. ಅಂತಿಮ ಫಲಿತಾಂಶ ನಿರ್ಧಾರದಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. 2021ರ ಚುನಾವಣೆಯಲ್ಲಿ ಟಿಎಂಸಿ 123 ಸ್ಥಾನಗಳನ್ನು ಗೆದ್ದು ಪ್ರಾಬಲ್ಯ ಸಾಧಿಸಿತು. ಬಿಜೆಪಿ 18 ಸ್ಥಾನಗಳನ್ನು ಗೆದ್ದು ಗಮನಾರ್ಹ ಸಾಧನೆ ಕಂಡಿತು. ಎಡಪಕ್ಷಗಳು ಒಂದೇ ಸ್ಥಾನವನ್ನು ಗೆದ್ದವು. ಈ ಹಿಂದಿನ ಧೋರಣೆಗಳನ್ನು ಗಮನಿಸಿದರೆ, ದಕ್ಷಿಣ ಬಂಗಾಳ ಎಲ್ಲಾ ಪ್ರಮುಖ ಪಕ್ಷಗಳಿಗೆ ಪ್ರಮುಖ ಪ್ರದೇಶವಾಗಿಯೇ ಉಳಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಧಾರವಾಡ ವಿದ್ಯಾಗಿರಿ ಠಾಣೆ ಇನ್ಸ್​​ಪೆಕ್ಟರ್ ರಫೀಕ್​​ ಅಮಾನತು!

'ಅಮೆರಿಕನ್ನರಿಗೆ ಗಲ್ಫ್ ನೀರಿನ ಕೆಳಭಾಗವೇ ಗತಿ': 'ಪರಮಾಣು, ಕ್ಷಿಪಣಿ ಸಾಮರ್ಥ್ಯ' ರಕ್ಷಣೆಗೆ ಬದ್ಧ- ಖಮೇನಿ ಪ್ರತಿಜ್ಞೆ

ಟ್ರಂಪ್ ಯೋಜನೆ ಬುಡಮೇಲು ಮಾಡಿದ ಪಾಕಿಸ್ತಾನ: ನಿರ್ಬಂಧಕ್ಕೆ Dont Care; ರಷ್ಯಾ, ಚೀನಾ ಜೊತೆ ವ್ಯಾಪಾರಕ್ಕೆ ಇರಾನ್ ಗೆ ನೆರವು!

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

SCROLL FOR NEXT