ಪಪ್ಪು ಯಾದವ್ 
ದೇಶ

ರಸ್ತೆಗೆ ತಂದು ರಾಮಲಲ್ಲಾನಿಗೆ ಅಪಮಾನ: ಸಂಸದ ಪಪ್ಪು ಯಾದವ್ ಹತ್ಯೆಗೆ ಯತ್ನ ಆರೋಪ, Video!

ಅಯೋಧ್ಯೆಯ ರಾಮಮಂದಿರ ದೇಣಿಗೆ ಅಕ್ರಮ ಆರೋಪವನ್ನು ಖಂಡಿಸಿ ಸಂಸತ್ತಿನ ಆವರಣದಲ್ಲಿ ಪೂರ್ಣಿಯಾದ ಪಕ್ಷೇತರ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅಯೋಧ್ಯೆಯ ರಾಮಲಲ್ಲಾನ ಫೋಟೋವನ್ನು ಪಪ್ಪು ಯಾದವ್ ಬಳಸಿದ್ದರು.

ನವದೆಹಲಿ: ಅಯೋಧ್ಯೆಯ ರಾಮಮಂದಿರ ದೇಣಿಗೆ ಅಕ್ರಮ ಆರೋಪವನ್ನು ಖಂಡಿಸಿ ಸಂಸತ್ತಿನ ಆವರಣದಲ್ಲಿ ಪೂರ್ಣಿಯಾದ ಪಕ್ಷೇತರ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅಯೋಧ್ಯೆಯ ರಾಮಲಲ್ಲಾನ ಫೋಟೋವನ್ನು ಪಪ್ಪು ಯಾದವ್ ಬಳಸಿದ್ದರು. ಈ ಸಂಬಂಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಅಲ್ಲದೆ ದೆಹಲಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಸಂಬಂಧ ಇಂದು ಪಪ್ಪು ಯಾದವ್ ಸುದ್ದಿಗೋಷ್ಠಿ ನಡೆಸಲು ಮುಂದಾಗಿದ್ದು ಈ ವೇಳೆ ಅಲ್ಲಿ ಜಮಾಯಿಸಿದ್ದ ನೂರಾರು ಹಿಂದೂ ಕಾರ್ಯಕರ್ತರು ಪಪ್ಪು ಯಾದವ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ನಂತರ ಮಾತನಾಡಿದ ಪಪ್ಪು ಯಾದವ್ ನನ್ನ ಹತ್ಯೆಗೆ ಯತ್ನಿಸಿದರು ಎಂದು ಪಪ್ಪು ಯಾದವ್ ಆರೋಪಿಸಿದರು. ಗುಂಪಿನಲ್ಲಿದ್ದವರು ಚಾಕುವಿನಿಂದ ದಾಳಿಗೆ ಯತ್ನಿಸಿದ್ದರು ಎಂದು ಪಪ್ಪು ಯಾದವ್ ಆರೋಪಿಸಿದ್ದಾರೆ.

ಇನ್ನು ನಿನ್ನೆ ರಾಷ್ಟ್ರ ರಾಜಧಾನಿಯ ಜಹಾಂಗೀರ್‌ಪುರಿ ಪೊಲೀಸ್ ಠಾಣೆಯಲ್ಲಿ ಅರ್ಜಿದಾರ ಸೂರ್ಯ ಮೈಥಿಲ್ ಎಂಬುವರು ಪಪ್ಪು ಯಾದವ್ ವಿರುದ್ಧ ದೂರು ನೀಡಿದ್ದು, ಪ್ರತಿಭಟನೆಯ ಸಮಯದಲ್ಲಿ ಪಪ್ಪು ಯಾದವ್ ಸನಾತನ ಧರ್ಮ ಮತ್ತು ಧಾರ್ಮಿಕ ಚಿಹ್ನೆಗಳಿಗೆ ಅವಮಾನ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿಚಾರದಲ್ಲಿ ರಾಜಿ ಮಾತೇ ಇಲ್ಲ; ಸರ್ವಪಕ್ಷ ಸಭೆಯಲ್ಲಿ ‘ಒಗ್ಗಟ್ಟಿನ ಮಂತ್ರ’: ರೈತರ ಹಿತವೇ ರಾಜಕೀಯಕ್ಕಿಂತ ಮೇಲು ಎಂದ CM ಡಿಕೆಶಿ

Spider-Man: ‘ಸ್ಪಾಯ್ಲರ್‌’ ಕೊಟ್ಟಿದ್ದಕ್ಕೆ ಥಿಯೇಟರ್‌ನಲ್ಲೇ ಹೊಡೆದಾಟ! ಸಿನಿಮಾ ನೋಡೋಕೆ ಹೋದವರ ಹೈಡ್ರಾಮಾ, Video

ಹೈದರಾಬಾದ್‌: ಅಪ್ರಾಪ್ತ ವಯಸ್ಕನ ಚಾರು ಚಾಲನೆ ವೇಳೆ ಭೀಕರ ಅಪಘಾತ; 7 ಬೈಕ್‌ ಜಖಂ, ಹಿರಿಯ ನಾಗರಿಕರಿಗೆ ತೀವ್ರ ಗಾಯ!

ಕಾವೇರಿ ಕಿಚ್ಚು: ‘ಭೂಮಿ-ನೀರು-ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’: ಸಿದ್ದರಾಮಯ್ಯ

21 ನೇ ಶತಮಾನದ ದೀರ್ಘ ಖಗ್ರಾಸ ಸೂರ್ಯಗ್ರಹಣ: ಆ.12 ರ ಖಗೋಳ ಕೌತುಕದ ವಿಶೇಷತೆಗಳಿವು...