ಕುಖ್ಯಾತ ದರೋಡೆಕೋರ ಸುಜಿತ್ ಸಿನ್ಹಾ 
ದೇಶ

ಜಾರ್ಖಂಡ್: ಜೈಲಿಗೆ ಸ್ಥಳಾಂತರಿಸುವಾಗ ನಡೆದ ಎನ್‌ಕೌಂಟರ್‌ನಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್‌ ಸುಜಿತ್ ಸಿನ್ಹಾ ಸಾವು!

ಜಾರ್ಖಂಡ್‌ನ ಕುಖ್ಯಾತ ದರೋಡೆಕೋರ ಸುಜಿತ್ ಸಿನ್ಹಾ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾನೆ. ದೀರ್ಘಕಾಲ ಜೈಲಿನಲ್ಲಿದ್ದ ಸುಜಿತ್ ಸಿನ್ಹಾ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದರು.

ರಾಂಚಿ: ಜಾರ್ಖಂಡ್‌ನ ಕುಖ್ಯಾತ ದರೋಡೆಕೋರ ಸುಜಿತ್ ಸಿನ್ಹಾ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾನೆ. ದೀರ್ಘಕಾಲ ಜೈಲಿನಲ್ಲಿದ್ದ ಸುಜಿತ್ ಸಿನ್ಹಾ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದರು. ಸುಜಿತ್ ಸಿನ್ಹಾ ನನ್ನು ಭಾನುವಾರ ಸಾಹೇಬ್‌ಗಂಜ್ ಜೈಲಿನಿಂದ ಧನ್‌ಬಾದ್ ಜೈಲಿಗೆ ಸ್ಥಳಾಂತರಿಸಬೇಕಿತ್ತು.

ಸುಜಿತ್ ನನ್ನು ಜಮ್ತಾರಾ ಮೂಲಕ ಧನ್‌ಬಾದ್‌ಗೆ ಖೈದಿ ವ್ಯಾನ್‌ನಲ್ಲಿ ಕರೆದೊಯ್ಯಲಾಗುತ್ತಿತ್ತು. ಖೈದಿಗಳ ವ್ಯಾನ್ ಜಮ್ತಾರಾ ಜಿಲ್ಲಾ ಗಡಿಯನ್ನು ತಲುಪುತ್ತಿದ್ದಂತೆ ಸುಜಿತ್ ಸಿನ್ಹಾ ಶೌಚಾಲಯಕ್ಕೆ ಹೋಗಬೇಕು ಎಂದು ಹೇಳಿದ್ದಾನೆ. ಹೀಗಾಗಿ ಪೊಲೀಸರು ವ್ಯಾನ್ ನಿಲ್ಲಿಸಿದ್ದರು. ಈ ಅವಕಾಶ ಬಳಸಿಕೊಳ್ಳಲು ಯೋಜಿಸಿದ ಸುಜಿತ್ ಸಿನ್ಹಾ ಖೈದಿಗಳ ವ್ಯಾನ್‌ನಲ್ಲಿದ್ದ ಪೊಲೀಸ್ ಅಧಿಕಾರಿಯಿಂದ ಗನ್ ಕಸಿದುಕೊಂಡು ಓಡಲು ಮತ್ತು ಗುಂಡು ಹಾರಿಸಲು ಪ್ರಾರಂಭಿಸಿದನು. ಸ್ಥಳದಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿ ಪ್ರತಿದಾಳಿ ನಡೆಸಿ ಸಿನ್ಹಾನನ್ನು ಸ್ಥಳದಲ್ಲೇ ಹತ್ಯೆ ಮಾಡಿದರು.

ಈ ಹಠಾತ್ ಘಟನೆಯು ಸ್ಥಳದಲ್ಲಿ ಭೀತಿಯನ್ನು ಸೃಷ್ಟಿಸಿತು. ಪೊಲೀಸರು ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಿದರು. ಸುಜಿತ್ ಸಿನ್ಹಾ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಆತ ಮೃತಪಟ್ಟಿದ್ದಾನೆ ಎಂದು ಘೋಷಿಸಿದರು. ಘಟನೆಯ ನಂತರ, ಇಡೀ ಪ್ರದೇಶವನ್ನು ಸುತ್ತುವರೆದು ಸಂಪೂರ್ಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪೊಲೀಸರು ಎನ್‌ಕೌಂಟರ್‌ನ ಪ್ರತಿಯೊಂದು ಅಂಶವನ್ನು ತನಿಖೆ ಮಾಡುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಸಹ ಸ್ಥಳಕ್ಕೆ ತಲುಪಿದ್ದಾರೆ ಮತ್ತು ಇಡೀ ಘಟನೆಯನ್ನು ಪರಿಶೀಲಿಸುತ್ತಿದ್ದಾರೆ.

ಮೇದಿನಿನಗರ ನಗರ ಪೊಲೀಸ್ ಠಾಣೆ ಪ್ರದೇಶದ ರೆಡ್ಮಾ ನಿವಾಸಿ ಸುಜಿತ್ ಸಿನ್ಹಾ ವಿರುದ್ಧ ವಿವಿಧ ಜಿಲ್ಲೆಗಳಲ್ಲಿ ಐದು ಡಜನ್‌ಗೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಪಲಮು ಜಿಲ್ಲೆಯೊಂದರಲ್ಲೇ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಸುಲಿಗೆ, ಕೊಲೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಗ್ಯಾಂಗ್ ಕಾರ್ಯಾಚರಣೆಗಳು ಸೇರಿವೆ. ಇತ್ತೀಚಿನ ವರ್ಷಗಳಲ್ಲಿ ಕೆಲವು ಪ್ರಕರಣಗಳಲ್ಲಿ ಆತನನ್ನು ಖುಲಾಸೆಗೊಳಿಸಲಾಗಿತ್ತು. ಆದರೆ ಹಲವಾರು ಗಂಭೀರ ಪ್ರಕರಣಗಳು ಇನ್ನೂ ಬಾಕಿ ಉಳಿದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ

Gen Zಗಳಿಗೆ ಗುಡ್ ನ್ಯೂಸ್; ಪ್ರತಿಭಟನಾಕಾರರ ವಿರುದ್ಧದ ಪ್ರಕರಣ ಹಿಂಪಡೆದ ಗುಜರಾತ್ ಸರ್ಕಾರ

ಭಾರತದ ಅವಿತಿರುವ ತೈಲ ಸಂಪತ್ತು ಪತ್ತೆಗೆ ನೂತನ ಸಮುದ್ರ ಮಂಥನ! (ಜಾಗತಿಕ ಜಗಲಿ)