ಮೋಹನ್ ಭಾಗವತ್ 
ದೇಶ

ಜಂತರ್‌ ಮಂತರ್ ಪ್ರತಿಭಟನೆ ಎಫೆಕ್ಟ್‌: ಆ. 6 ರಂದು Gen Z, ಜನರಲ್ ಆಲ್ಫಾ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ

ಪ್ರಕಟಣೆಯ ಪ್ರಕಾರ, ಮುಂಬೈನ ನೀತಾ ಮುಖೇಶ್ ಅಂಬಾನಿ ಕಲ್ಚರಲ್‌ ಸೆಂಟರ್‌ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ದೇಶದ 100ಕ್ಕೂ ಹೆಚ್ಚು ನಗರಗಳ 15ರಿಂದ 19 ವರ್ಷದೊಳಗಿನ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಮುಂಬೈ: ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ನೇತೃತ್ವದ ವಿದ್ಯಾರ್ಥಿಗಳ ಪ್ರತಿಭಟನೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸುತ್ತಿರುವ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆಗಸ್ಟ್ 6 ರಂದು ಜನರಲ್ ಝಡ್ ಮತ್ತು ಜನರಲ್ ಆಲ್ಫಾ ಜೊತೆ ಸಂವಾದ ನಡೆಸಲಿದ್ದಾರೆ.

ಪ್ರಕಟಣೆಯ ಪ್ರಕಾರ, ಮುಂಬೈನ ನೀತಾ ಮುಖೇಶ್ ಅಂಬಾನಿ ಕಲ್ಚರಲ್‌ ಸೆಂಟರ್‌ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ದೇಶದ 100ಕ್ಕೂ ಹೆಚ್ಚು ನಗರಗಳ 15ರಿಂದ 19 ವರ್ಷದೊಳಗಿನ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಭಾರತದ ಅಂತರರಾಷ್ಟ್ರೀಯ ಏಕೀಕರಣ ರಾಷ್ಟ್ರಗಳ ಚಳುವಳಿ(ಐಐಎಂಯುಎನ್) 15 ನೇ ವಾರ್ಷಿಕೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

"ನಾಯಕತ್ವ ಎಂದರೆ ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವುದಷ್ಟೇ ಅಲ್ಲ, ಅವರ ಮಾತುಗಳನ್ನು ಆಲಿಸುವುದೂ ಆಗಿದೆ. ಈ ಮಹತ್ವದ ಘಟ್ಟದಲ್ಲಿ ಇಂತಹ ಸಂವಾದ ಈಗ ಹಿಂದೆಂದಿಗಿಂತಲೂ ಹೆಚ್ಚು ಅಗತ್ಯವಾಗಿದೆ. ನಮ್ಮ ಆಹ್ವಾನವನ್ನು ಸ್ವೀಕರಿಸಿ ಈ ಸಮಾವೇಶಕ್ಕೆ ಆಗಮಿಸಲು ಸಮ್ಮತಿಸಿದ ಮೋಹನ್ ಭಾಗವತ್ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ಐಐಎಂಯುಎನ್ ಸಂಸ್ಥಾಪಕ ರಿಷಭ್ ಶಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

ಕಾವೇರಿ ವಿವಾದ: ನೀರು ಬಿಟ್ಟರೂ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು; ಇಲ್ಲಿದೆ ಕಾರಣ...

Flipkart Freedom Sale: Samsung Galaxy F70 Pro ಬಿಡುಗಡೆ, ವಿಶೇಷ ಬೆಲೆಯಲ್ಲಿ ಲಭ್ಯ!

'ನನಗೂ ಒಮ್ಮೆ ಸಚಿವ ಸ್ಥಾನ ಕೈತಪ್ಪಿತ್ತು': ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆ ಶಿವಕುಮಾರ್ ಸಮಾಧಾನ!