ಏರ್ ಇಂಡಿಯಾ  
ದೇಶ

ಫುಕೆಟ್–ದೆಹಲಿ ಏರ್ ಇಂಡಿಯಾ ವಿಮಾನ 300 ಅಡಿ ಕುಸಿತ, ಟರ್ಬ್ಯುಲೆನ್ಸ್; 12 ಮಂದಿ ಪ್ರಯಾಣಿಕರಿಗೆ ಗಾಯ

ವಿಮಾನ ನಿಲ್ದಾಣದಲ್ಲಿ ತೆಗೆದ ದೃಶ್ಯಗಳಲ್ಲಿ ಟರ್ಮಿನಲ್ ಗೇಟ್ ಹೊರಗೆ ಆಂಬುಲೆನ್ಸ್‌ಗಳು ನಿಯೋಜಿಸಲಾಗಿದ್ದವು. ಕೆಲ ಪ್ರಯಾಣಿಕರನ್ನು ವೀಲ್‌ಚೇರ್‌ಗಳಲ್ಲಿ ಹೊರತೆಗೆದುಕೊಂಡು ಬರುತ್ತಿರುವುದು ಕಂಡುಬಂದವು.

ನವದೆಹಲಿ: ಥೈಲ್ಯಾಂಡ್ ನ ಫುಕೆಟ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಮಂಗಳವಾರ ಹಾರಾಟದ ವೇಳೆ ಟರ್ಬುಲೆನ್ಸ್ ಅಂದರೆ ಗಾಳಿಯ ಪ್ರಕ್ಷುಬ್ಧತೆಗೆ ಸಿಲುಕಿ, 300 ಅಡಿ ಕುಸಿತ ಉಂಟಾಗಿ 12 ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ವಿಮಾನ ನಿಲ್ದಾಣದಲ್ಲಿ ತೆಗೆದ ದೃಶ್ಯಗಳಲ್ಲಿ ಟರ್ಮಿನಲ್ ಗೇಟ್ ಹೊರಗೆ ಆಂಬುಲೆನ್ಸ್‌ಗಳು ನಿಯೋಜಿಸಲಾಗಿದ್ದವು. ಕೆಲ ಪ್ರಯಾಣಿಕರನ್ನು ವೀಲ್‌ಚೇರ್‌ಗಳಲ್ಲಿ ಹೊರತೆಗೆದುಕೊಂಡು ಬರುತ್ತಿರುವುದು ಕಂಡುಬಂದರೆ, ಇನ್ನು ಕೆಲವರು ತಲೆಗೆ ಬ್ಯಾಂಡೇಜ್ ಹಾಕಿಸಿಕೊಂಡ ಸ್ಥಿತಿಯಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲ್ಪಟ್ಟರು.

ಈ ಕುರಿತು ಪ್ರಕಟಣೆ ನೀಡಿದ ಏರ್ ಇಂಡಿಯಾ ವಕ್ತಾರರು, AI2379 ವಿಮಾನವು ದೆಹಲಿಗೆ ಪ್ರಯಾಣಿಸುತ್ತಿದ್ದ ವೇಳೆ ಹಾರಾಟದ ಮಧ್ಯದಲ್ಲಿ "ಟರ್ಬುಲೆನ್ಸ್‌ಗೆ ಸಂಬಂಧಿಸಿದ ಕ್ಷಣಿಕ ಘಟನೆ"ಯನ್ನು ಅನುಭವಿಸಿದೆ ಎಂದು ತಿಳಿಸಿದ್ದಾರೆ.

ಇಂದು ಫುಕೆಟ್‌ನಿಂದ ದೆಹಲಿಗೆ ಸಂಚರಿಸುತ್ತಿದ್ದ ಏರ್ ಇಂಡಿಯಾದ AI2379 ವಿಮಾನವು ಹಾರಾಟದ ವೇಳೆ ಕ್ಷಣಿಕ ಟರ್ಬುಲೆನ್ಸ್‌ಗೆ ಒಳಗಾಗಿದ್ದು, ಇದರಿಂದ ಅಲ್ಪಕಾಲದ ಮಟ್ಟಿಗೆ ವಿಮಾನದ ಎತ್ತರದಲ್ಲಿ ಬದಲಾವಣೆ ಉಂಟಾಯಿತು ಎಂದು ಏರ್ ಇಂಡಿಯಾ ತಿಳಿಸಿದೆ.

ವಿಮಾನವು ಸುರಕ್ಷಿತವಾಗಿ ದೆಹಲಿಯಲ್ಲಿ ಭೂಸ್ಪರ್ಶ ಮಾಡಿದ್ದು, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಯಾವುದೇ ತೊಂದರೆಯಿಲ್ಲದೆ ವಿಮಾನದಿಂದ ಇಳಿದಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.

ಸದ್ಯದ ಮಾಹಿತಿಯ ಪ್ರಕಾರ ಪ್ರಯಾಣಿಕರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಸಣ್ಣಪುಟ್ಟ ಗಾಯಗಳಾಗಿರುವ ಕೆಲ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯಕೀಯ ಪರೀಕ್ಷೆ ಹಾಗೂ ಚಿಕಿತ್ಸೆಗಾಗಿ ವಿಮಾನ ನಿಲ್ದಾಣದ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಏರ್ ಇಂಡಿಯಾದ ವಿಮಾನ ನಿಲ್ದಾಣದ ಸಿಬ್ಬಂದಿ ಹಾಗೂ ವೈದ್ಯಕೀಯ ತಂಡ ಅಗತ್ಯ ನೆರವು ಒದಗಿಸುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

ಸಿದ್ದರಾಮಯ್ಯ ಮಾತಿಗೆ ಯಾವುದೇ ಬೆಲೆ ಇಲ್ಲ, ಅವರ ಆಪ್ತನಾಗಿದ್ದಕ್ಕೆ ಸಚಿವ ಸ್ಥಾನ ಕೈ ತಪ್ಪಿದೆ: CM ಡಿಕೆಶಿ ವಿರುದ್ಧ ಸುಧಾಕರ್ ಕಿಡಿ

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!