ಸಿದ್ಧಿವಿನಾಯಕ ದೇವಸ್ಥಾನ 
ದೇಶ

ಮುಂಬೈನ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪ್ರತಿವರ್ಷ 18 ಕೋಟಿ ದೇಣಿಗೆ ಕಳ್ಳತನ: ರಾಜ್ ಠಾಕ್ರೆ ಆರೋಪ ಬೆನ್ನಲ್ಲೇ 8 ಮಂದಿ ಬಂಧನ

ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆದ ದೇಣಿಗೆ ಹಗರಣದ ಕುರಿತು ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಆರೋಪಗಳ ನಡುವೆ, ಸಿದ್ಧಿವಿನಾಯಕ ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಸದಾ ಸರ್ವಾಂಕರ್ ಪ್ರತಿಕ್ರಿಯಿಸಿದ್ದಾರೆ.

ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆದ ದೇಣಿಗೆ ಹಗರಣದ ಕುರಿತು ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಆರೋಪಗಳ ನಡುವೆ, ಸಿದ್ಧಿವಿನಾಯಕ ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಸದಾ ಸರ್ವಾಂಕರ್ ಪ್ರತಿಕ್ರಿಯಿಸಿದ್ದಾರೆ. ಆರೋಪದ ಆಧಾರದ ಮೇಲೆ ಪೊಲೀಸರು ಬಂಧಿಸಿದ ದೇವಾಲಯದ ನೌಕರರನ್ನು ಮೊದಲು ಪೊಲೀಸ್ ಕಸ್ಟಡಿಗೆ ಮತ್ತು ನಂತರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸರು ಇಲ್ಲಿಯವರೆಗೆ ಒಟ್ಟು ಎಂಟು ಜನರನ್ನು ಬಂಧಿಸಿದ್ದಾರೆ ಎಂದು ಸದಾ ಸರ್ವಾಂಕರ್ ಹೇಳಿದ್ದಾರೆ. ಅವರೆಲ್ಲರನ್ನೂ ಆರಂಭದಲ್ಲಿ ಮೂರು ದಿನಗಳ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು. ಪೊಲೀಸ್ ಕಸ್ಟಡಿ ಪೂರ್ಣಗೊಂಡ ನಂತರ, ಅವರ ವಿರುದ್ಧ ಹೆಚ್ಚಿನ ಕಾನೂನು ಕ್ರಮಗಳನ್ನು ಪ್ರಾರಂಭಿಸಲಾಯಿತು. ನಂತರ ನ್ಯಾಯಾಲಯವು ಎಲ್ಲರಿಗೂ ಜಾಮೀನು ನೀಡಿತು. ಜಾಮೀನು ಪಡೆದವರಲ್ಲಿ ನರೇಶ್ ಖಾಡೆ ಕೂಡ ಇದ್ದಾರೆ ಎಂದು ಅವರು ಹೇಳಿದರು.

ತನಿಖೆ ಕಾನೂನಿನ ಪ್ರಕಾರ ನಡೆಯುತ್ತಿದೆ ಮತ್ತು ನ್ಯಾಯಾಲಯದ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಗೌರವಿಸಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷರು ಹೇಳಿದ್ದಾರೆ. ಇದುವರೆಗಿನ ಪ್ರಕ್ರಿಯೆಗಳ ನಂತರ ಆರೋಪಿಗಳಿಗೆ ನ್ಯಾಯಾಲಯದಿಂದ ಪರಿಹಾರ ಸಿಕ್ಕಿದೆ ಎಂದು ಅವರು ಸೂಚಿಸಿದ್ದಾರೆ. ಇತ್ತೀಚೆಗೆ ರಾಜ್ ಠಾಕ್ರೆ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ಹಗರಣದ ವಿಷಯವನ್ನು ಎತ್ತಿದ್ದು ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದರು. ಇದು ರಾಜಕೀಯ ಮತ್ತು ಸಾರ್ವಜನಿಕ ಚರ್ಚೆಗೆ ನಾಂದಿ ಹಾಡಿದೆ.

ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರ ಆರೋಪಗಳು

ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ದೇವಾಲಯಗಳಲ್ಲಿನ ದೇಣಿಗೆಗಳ ಬಗ್ಗೆ ಗಂಭೀರ ಆರೋಪ ಮಾಡಿದರು. ಕಳೆದ ಶನಿವಾರ ತಮ್ಮ ಪಕ್ಷದ ವಿದ್ಯಾರ್ಥಿ ವಿಭಾಗದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕವಾಗಿ ಸುಮಾರು 18 ಕೋಟಿ ಮೌಲ್ಯದ ದೇಣಿಗೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂದೇ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ: ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

‘CM ಡಿಕೆ ಶಿವಕುಮಾರ್ ಸೂಚನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ, ಆದ್ರೂ...’: ರಾಜೀನಾಮೆ ಬಗ್ಗೆ ಹೊರಟ್ಟಿ ಹೇಳಿದ್ದೇನು?

ಹಿರಿಯ ಶಾಸಕ HK ಪಾಟೀಲ್‌ಗೆ ತಪ್ಪಿದ ಸಚಿವ ಸ್ಥಾನ: 21 ಕಾಂಗ್ರೆಸ್ ಕೌನ್ಸಿಲರ್‌ಗಳ ಸಾಮೂಹಿಕ ರಾಜೀನಾಮೆ!

'ಬಿಜೆಪಿಯ ದುರಹಂಕಾರದ ವಿರುದ್ಧ ಜನಾದೇಶ': ತಮ್ಮ ಐತಿಹಾಸಿಕ ಗೆಲುವಿಗೆ ಮೂರು ಕಾರಣ ನೀಡಿದ ಪ್ರಶಾಂತ್ ಕಿಶೋರ್!

ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕೀಯದ ದರ್ಬಾರು: ಡಿಕೆಶಿ ಸಂಪುಟದಲ್ಲಿಯೂ 2ನೇ ತಲೆಮಾರಿನ ನಾಯಕರ ಕಾರುಬಾರು; ಸಾಮರ್ಥ್ಯಕ್ಕಿಂತ ಸಂಪರ್ಕ ಮುಖ್ಯವೇ?