ಕೇಶವ್ ಪ್ರಸಾದ್ ಮೌರ್ಯ 
ದೇಶ

'ಮದರಸಾದಲ್ಲಿ ಶಿಕ್ಷಣ ಪಡೆಯವವರು ಉಗ್ರರಂತ ಮನಸ್ಥಿತಿ ಬೆಳೆಸಿಕೊಳ್ಳುತ್ತಾರೆ: ಭಾರತ್‌ ಮಾತಾ ಕಿ ಜೈ ಎನ್ನಲ್ಲ, ವಂದೇ ಮಾತರಂ ಹಾಡಲ್ಲ'

ಮದರಸಾದಲ್ಲಿ ಶಿಕ್ಷಣ ಪಡೆಯುವವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ, ‘ವಂದೇ ಮಾತರಂ’ ಹಾಡಲ್ಲ. ಬದಲಿಗೆ ಉಗ್ರರಂತಹ ಮನಸ್ಥಿತಿ ಬೆಳೆಸಿಕೊಳ್ಳುತ್ತಾರೆ ಎಂದಿದ್ದಾರೆ.

ಲಕ್ನೋ: ಮದರಸಾಗಳು ಎಲ್ಲೇ ಇದ್ದರೂ ಅವು ಅನಧಿಕೃತವಾಗಿ ಉಗ್ರರನ್ನು ಉತ್ಪಾದಿಸುತ್ತಿವೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದು, ರಾಜಕೀಯ ಕೋಲಾಹಲ ಎಬ್ಬಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದರಸಾದಲ್ಲಿ ಶಿಕ್ಷಣ ಪಡೆಯುವವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ, ‘ವಂದೇ ಮಾತರಂ’ ಹಾಡಲ್ಲ. ಬದಲಿಗೆ ಉಗ್ರರಂತಹ ಮನಸ್ಥಿತಿ ಬೆಳೆಸಿಕೊಳ್ಳುತ್ತಾರೆ ಎಂದಿದ್ದಾರೆ.

ಮದರಸಾ ಬಾಂಗ್ಲಾದೇಶದಲ್ಲಿರಲಿ, ಪಾಕಿಸ್ತಾನದಲ್ಲಿರಲಿ ಅಥವಾ ಭಾರತದಲ್ಲಿರಲಿ, ಮದರಸಾಗಳು ಅನಧಿಕೃತವಾಗಿ ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ ಎಂದು ಹೇಳಿದ್ದಾರೆ.

ಬಿಜೆಪಿ ನಾಯಕನ ವಿವಾದಾತ್ಮಕ ಹೇಳಿಕೆ ವಿರುದ್ಧ ಕಿಡಿಕಾರಿರುವ ಸಮಾಜವಾದಿ ಪಕ್ಷ, ಚುನಾವಣೆ ಸಮೀಪಿಸುತ್ತಿದೆ. ಅವರು ಪಾಕಿಸ್ತಾನ ಮತ್ತು ಬಾಂಗ್ಲಾದೇಶವನ್ನು ಉಲ್ಲೇಖಿಸದಿದ್ದರೆ, ತಮ್ಮ ಕಾರ್ಯಸೂಚಿಯನ್ನು ಹೇಗೆ ಅನುಸರಿಸುವುದು ಹೇಗೆ? ಎಂದು ಕಿಡಿಕಾರಿದೆ. ಈ ಹೇಳಿಕೆಯು ಪ್ರಚೋದನಕಾರಿ, ಸಾಮಾಜಿಕ ಸಾಮರಸ್ಯವನ್ನು ಹದಗೆಡಿಸುವಂಥದ್ದು ಎಂದು ಜಮೀಯತ್ ಉಲೆಮಾ ಇ ಹಿಂದ್ ಆಕ್ರೋಶ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

ಮಾಧ್ಯಮಗಳ ಧ್ವನಿ ಅಡಗಿಸಲು ಪಾಕ್‌ ಮುಂದು? ಅನುಮತಿ ಇಲ್ಲದೆ ವರದಿಗಾರಿಕೆಗೆ ನಿಷೇಧ; ಸತ್ಯ ಮುಚ್ಚಿಡಲು ವಿದೇಶಿ ಮಾಧ್ಯಮಗಳ ರೆಕ್ಕೆ ಕತ್ತರಿಸಿದ ಸರ್ಕಾರ..!

Los Angeles ಭೇಟಿಗೂ ಮುನ್ನ ಟ್ರಂಪ್‌ಗೆ ಆಘಾತ; ಗಾಲ್ಫ್‌ ಮೈದಾನದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿ ಬಂಧನ, ಹತ್ಯೆಗೆ ಸಂಚು ಶಂಕೆ..!

ಭಾರತದ ಯುವಜನತೆ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ: ಭಾವನಾತ್ಮಕ Video ಮೂಲಕ ಮನದಾಳದ ಮಾತು ಹಂಚಿಕೊಂಡ ಸೋನಂ ವಾಂಗ್‌ಚುಕ್‌

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!