Vijay 
ದೇಶ

'ಕಾವೇರಿ ನಮ್ಮ ಜೀವನಾಡಿ, ಈ ವಿಚಾರದಲ್ಲಿ ತುಚ್ಛ ರಾಜಕಾರಣ ಮಾಡಲು ಬಯಸಲ್ಲ: ತಮಿಳುನಾಡು ಸಿಎಂ ವಿಜಯ್..!

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದೊಂದಿಗೆ ನೇರ ಮಾತುಕತೆ ನಡೆಸಲು ಮುಂದಾಗಲಾಗಿತ್ತು. ಸಮಸ್ಯೆಗೆ ಸಕಾರಾತ್ಮಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಿದ್ದು, ಕಾವೇರಿ ವಿಚಾರದಲ್ಲಿ ತುಚ್ಛ...

ಚೆನ್ನೈ: "ಕಾವೇರಿ ನದಿ ತಮಿಳುನಾಡಿನ ಜೀವನಾಡಿ. ಇದರ ಸುತ್ತ ಕೀಳು ಮಟ್ಟದ ರಾಜಕೀಯ ಮಾಡಲು ನಮಗೆ ಇಷ್ಟವಿಲ್ಲ," ಎಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಹೇಳಿದ್ದಾರೆ.

ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆ ಹಾಗೂ ಕಾವೇರಿ ನೀರು ಹಂಚಿಕೆ ವಿವಾದದ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ವಿಜಯ್ ಅವರು ಮಾತನಾಡಿದರು.

ತಮಿಳುನಾಡಿನ ರೈತರ ಹಿತರಕ್ಷಣೆಗಾಗಿ ತಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ ಮೇಕೆದಾಟು ವಿಷಯದ ಕುರಿತು ಸರ್ವಪಕ್ಷ ಸಭೆ ಕರೆಯಬೇಕೆಂಬ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರ ಒತ್ತಾಯವನ್ನು ನೇರವಾಗಿ ತಿರಸ್ಕರಿಸಿದರು.

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದೊಂದಿಗೆ ನೇರ ಮಾತುಕತೆ ನಡೆಸಲು ಮುಂದಾಗಲಾಗಿತ್ತು. ಸಮಸ್ಯೆಗೆ ಸಕಾರಾತ್ಮಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಿದ್ದು, ಕಾವೇರಿ ವಿಚಾರದಲ್ಲಿ ತುಚ್ಛ ರಾಜಕಾರಣ ಮಾಡಲು ತಾವು ಬಯಸುವುದಿಲ್ಲ ಎಂದು ಹೇಳಿದರು.

1969ರಿಂದಲೂ ಕಾವೇರಿ ವಿವಾದದಲ್ಲಿ ತಮಿಳುನಾಡು ಅನುಸರಿಸಿಕೊಂಡು ಬಂದ ಹಾದಿಯನ್ನು ವಿವರಿಸಿದ ಅವರು, ಮಾತುಕತೆಯಿಂದ ಹಿಡಿದು ನ್ಯಾಯಾಲಯದ ಕಾನೂನು ಹೋರಾಟದವರೆಗಿನ ಬೆಳವಣಿಗೆಗಳನ್ನು ಸದನದ ಗಮನಕ್ಕೆ ತಂದರು.

ಕಾವೇರಿ ವಿವಾದವನ್ನು ಕಾನೂನು ಹೋರಾಟದ ಮೂಲಕವೇ ಎದುರಿಸುವ ನಿಲುವಿನಲ್ಲಿ ತಮ್ಮ ಸರ್ಕಾರ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಪುನರುಚ್ಚರಿಸಿದ ವಿಜಯ್‌, ಅದರ ಜತೆಗೆ ಮಾತುಕತೆ ಮೂಲಕವೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಲಾಗಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಭೇಟಿ ನೀಡಿ ಕರ್ನಾಟಕ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಪ್ರಸ್ತಾಪ ಮಾಡಿದ್ದುದಾಗಿಯೂ ಅವರು ತಿಳಿಸಿದರು.

ತಮಿಳುನಾಡಿನ ಜನರ ಹಿತಾಸಕ್ತಿಗಾಗಿ ಕಾವೇರಿ ವಿಚಾರದಲ್ಲಿ ಮಾತುಕತೆ ನಡೆಸುವಾಗ ಯಾವುದೇ ಅವಮಾನ ಎದುರಾದರೂ ಅದನ್ನು ಸಹಿಸಲು ನಾನು ಸಿದ್ಧನಿದ್ದೇನೆ. ಪರಸ್ಪರ ವೈರಾಗ್ಯ ಹೊಂದಿರುವ ರಾಷ್ಟ್ರಗಳೂ ತಮ್ಮ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಲು ಮುಂದಾಗುತ್ತವೆ. ಹಾಗಿರುವಾಗ ನೆರೆಯ ರಾಜ್ಯವಾದ ಕರ್ನಾಟಕದೊಂದಿಗೆ ಸಂವಾದ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವುದು ತಪ್ಪಲ್ಲ ಎಂಬ ನಂಬಿಕೆ ನನ್ನದು" ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'Islamic NATO' ಊಹಾಪೋಹಗಳಿಗೆ ಮತ್ತಷ್ಟು ಬಲ: ಹೊಸ ರಕ್ಷಣಾ ಒಪ್ಪಂದದತ್ತ ಟರ್ಕಿ-ಸೌದಿ-ಪಾಕಿಸ್ತಾನ, ಜಾಗತಿಕ ಮಟ್ಟದಲ್ಲಿ ಹೆಚ್ಚಿದ ಕುತೂಹಲ..!

'ಭಾರತದ ಕಾನೂನು ಪಾಲಿಸುತ್ತಿದ್ದೀರಾ?': Metaಗೆ ಖಡಕ್ ಕ್ಲಾಸ್‌ ತೆಗೆದುಕೊಂಡ ಕೇಂದ್ರ ಸರ್ಕಾರ, ತೀವ್ರ ವಿಚಾರಣೆ

ಚೆನ್ನೈ ನಟಿ ಕೊಲೆ: ತುಂಡು ತುಂಡಾಗಿ ಸಿಕ್ಕ ದೇಹ, ರುಂಡ ನಾಪತ್ತೆ, ಹಚ್ಚೆಯಿಂದ ಬಯಲಾಯ್ತು ಗುರುತು! ಆರೋಪಿ ಸಿಕ್ಕಿದ್ದೇ ರೋಚಕ!

18 ಅಡಿ ಬಾವಿಯಲ್ಲಿ ಸಮುದ್ರದ ರೀತಿ ಅಲೆ...! ಗುಜರಾತ್‌ನಲ್ಲಿ ಬೆರಗು ಮೂಡಿಸಿದ ವಿಚಿತ್ರ ವಿದ್ಯಮಾನ; ಭೂಮಿಯೊಳಗೆ ನಡೆಯುತ್ತಿರುವುದೇನು? Video

ಸಂಪುಟ ವಿಸ್ತರಣೆ ಕಿಚ್ಚು; 'ಕೈ' ಪಾಳಯದಲ್ಲಿ ಹೈ ಡ್ರಾಮಾ: ಡ್ಯಾಮೇಜ್ ಕಂಟ್ರೋಲ್‌ಗೆ ಸುರ್ಜೇವಾಲಾ ಎಂಟ್ರಿ..!