ಸೋನಮ್ ವಾಂಗ್ಚುಕ್  
ದೇಶ

ಉಪವಾಸ ಅಂತ್ಯಗೊಳಿಸುವ ನನ್ನ ಪತ್ನಿಯ ಪ್ರಸ್ತಾವನೆಗೆ ರಾಹುಲ್ ನಿರ್ಲಕ್ಷ್ಯ: ಸೋನಮ್ ವಾಂಗ್ಚುಕ್ ಬೇಸರ

ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ನನಗೆ ಸೂಪ್‌ ನೀಡುತ್ತಿರುವ ಫೋಟೊವನ್ನು, ನಾನು ಉಪವಾಸ ಅಂತ್ಯಗೊಳಿಸುವವರೆಗೆ ಬಿಡುಗಡೆ ಮಾಡಲ್ಲ ಅಂತ ಮಾತುಕೊಟ್ಟಿದ್ದರು.

ನವದೆಹಲಿ: ನನ್ನ ಉಪವಾಸ ಅಂತ್ಯಗೊಳಿಸುವ ಬಗ್ಗೆ ರಾಹುಲ್‌ ಗಾಂಧಿ ಬಳಿ ನನ್ನ ಪತ್ನಿ ಗೀತಾಂಜಲಿ ಪ್ರಯತ್ನಿಸಿದರೂ ಅದನ್ನು ರಾಹುಲ್ ಗಾಂಧಿ ನಿರ್ಲಕ್ಷಿಸಿದ್ದರು ಎಂದು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಜಂತರ್ ಮಂತರ್‌ನಲ್ಲಿ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ರಾಹುಲ್ ಗಾಂಧಿ ಅವರಿಂದ ಜ್ಯೂಸ್ ನೀಡಲು ನನ್ನ ಪತ್ನಿ ಗೀತಾಂಜಲಿ ಪ್ರಯತ್ನಿಸಿದ್ದರು. ಆದರೆ, ಅವರಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಸಿಗಲಿಲ್ಲ. ಕಾಂಗ್ರೆಸ್ ನಾಯಕ ಮತ್ತು ಇತರ ರಾಜಕೀಯ ಪಕ್ಷಗಳ ಬಗ್ಗೆ ನನಗೆ ನಿರಾಶೆಯಾಗಿದೆ ಎಂದು ವಾಂಗ್ಚುಕ್ ಹೇಳಿದ್ದಾರೆ.

ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ನನಗೆ ಸೂಪ್‌ ನೀಡುತ್ತಿರುವ ಫೋಟೊವನ್ನು, ನಾನು ಉಪವಾಸ ಅಂತ್ಯಗೊಳಿಸುವವರೆಗೆ ಬಿಡುಗಡೆ ಮಾಡಲ್ಲ ಅಂತ ಮಾತುಕೊಟ್ಟಿದ್ದರು. ಆದರೆ, ಅವರು ಕೂಡ ಭರವಸೆಯನ್ನು ಮುರಿದರು. ಆದ್ದರಿಂದ ನಾನು ಈ ಎಲ್ಲಾ ನಾಯಕರ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದೇನೆ ಎಂದು ಅಸಾಮಾಧಾನ ಹೊರಹಾಕಿದ್ದಾರೆ.

ಜಂತರ್ ಮಂತರ್ ನಲ್ಲಿ ನಾನು ಉಪವಾಸ ಮಾಡುತ್ತಿದ್ದ ಸ್ಥಳಕ್ಕೆ ಕೆಲವೇ ಕೆಲವು ಮಂದಿ ವಿರೋಧ ಪಕ್ಷದ ನಾಯಕರು ಆಗಮಿಸಿ ನನ್ನನ್ನು ಭೇಟಿ ಮಾಡಿದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'Islamic NATO'ಗೆ ಊಹಾಪೋಹಗಳಿಗೆ ಮತ್ತಷ್ಟು ಬಲ: ಹೊಸ ರಕ್ಷಣಾ ಒಪ್ಪಂದದತ್ತ ಟರ್ಕಿ-ಸೌದಿ-ಪಾಕಿಸ್ತಾನ, ಜಾಗತಿಕ ಮಟ್ಟದಲ್ಲಿ ಹೆಚ್ಚಿದ ಕುತೂಹಲ..!

'ಭಾರತದ ಕಾನೂನು ಪಾಲಿಸುತ್ತಿದ್ದೀರಾ?': Metaಗೆ ಖಡಕ್ ಕ್ಲಾಸ್‌ ತೆಗೆದುಕೊಂಡ ಕೇಂದ್ರ ಸರ್ಕಾರ, ತೀವ್ರ ವಿಚಾರಣೆ

18 ಅಡಿ ಬಾವಿಯಲ್ಲಿ ಸಮುದ್ರದ ರೀತಿ ಅಲೆ...! ಗುಜರಾತ್‌ನಲ್ಲಿ ಬೆರಗು ಮೂಡಿಸಿದ ವಿಚಿತ್ರ ವಿದ್ಯಮಾನ; ಭೂಮಿಯೊಳಗೆ ನಡೆಯುತ್ತಿರುವುದೇನು? Video

ಸಂಪುಟ ವಿಸ್ತರಣೆ ಕಿಚ್ಚು; 'ಕೈ' ಪಾಳಯದಲ್ಲಿ ಹೈ ಡ್ರಾಮಾ: ಡ್ಯಾಮೇಜ್ ಕಂಟ್ರೋಲ್‌ಗೆ ಸುರ್ಜೇವಾಲಾ ಎಂಟ್ರಿ..!

'Real estate mafia ಲಾಭಕ್ಕಾಗಿ ಬಿಡದಿ ಯೋಜನೆ'; ಸರ್ಕಾರದ ವಿರುದ್ಧ BJP-JDS ವಾಗ್ದಾಳಿ, ಜಂಟಿ ಪಾದಯಾತ್ರೆಗೆ ಮುಂದು..!