ನವದೆಹಲಿ: ನನ್ನ ಉಪವಾಸ ಅಂತ್ಯಗೊಳಿಸುವ ಬಗ್ಗೆ ರಾಹುಲ್ ಗಾಂಧಿ ಬಳಿ ನನ್ನ ಪತ್ನಿ ಗೀತಾಂಜಲಿ ಪ್ರಯತ್ನಿಸಿದರೂ ಅದನ್ನು ರಾಹುಲ್ ಗಾಂಧಿ ನಿರ್ಲಕ್ಷಿಸಿದ್ದರು ಎಂದು ಹೋರಾಟಗಾರ ಸೋನಮ್ ವಾಂಗ್ಚುಕ್ ಬೇಸರ ವ್ಯಕ್ತಪಡಿಸಿದ್ದಾರೆ.
ಜಂತರ್ ಮಂತರ್ನಲ್ಲಿ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ರಾಹುಲ್ ಗಾಂಧಿ ಅವರಿಂದ ಜ್ಯೂಸ್ ನೀಡಲು ನನ್ನ ಪತ್ನಿ ಗೀತಾಂಜಲಿ ಪ್ರಯತ್ನಿಸಿದ್ದರು. ಆದರೆ, ಅವರಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಸಿಗಲಿಲ್ಲ. ಕಾಂಗ್ರೆಸ್ ನಾಯಕ ಮತ್ತು ಇತರ ರಾಜಕೀಯ ಪಕ್ಷಗಳ ಬಗ್ಗೆ ನನಗೆ ನಿರಾಶೆಯಾಗಿದೆ ಎಂದು ವಾಂಗ್ಚುಕ್ ಹೇಳಿದ್ದಾರೆ.
ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ನನಗೆ ಸೂಪ್ ನೀಡುತ್ತಿರುವ ಫೋಟೊವನ್ನು, ನಾನು ಉಪವಾಸ ಅಂತ್ಯಗೊಳಿಸುವವರೆಗೆ ಬಿಡುಗಡೆ ಮಾಡಲ್ಲ ಅಂತ ಮಾತುಕೊಟ್ಟಿದ್ದರು. ಆದರೆ, ಅವರು ಕೂಡ ಭರವಸೆಯನ್ನು ಮುರಿದರು. ಆದ್ದರಿಂದ ನಾನು ಈ ಎಲ್ಲಾ ನಾಯಕರ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದೇನೆ ಎಂದು ಅಸಾಮಾಧಾನ ಹೊರಹಾಕಿದ್ದಾರೆ.
ಜಂತರ್ ಮಂತರ್ ನಲ್ಲಿ ನಾನು ಉಪವಾಸ ಮಾಡುತ್ತಿದ್ದ ಸ್ಥಳಕ್ಕೆ ಕೆಲವೇ ಕೆಲವು ಮಂದಿ ವಿರೋಧ ಪಕ್ಷದ ನಾಯಕರು ಆಗಮಿಸಿ ನನ್ನನ್ನು ಭೇಟಿ ಮಾಡಿದರು ಎಂದು ಹೇಳಿದ್ದಾರೆ.