ಅನುರಾಗ್ ಠಾಕೂರ್  
ದೇಶ

ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಗೆ ಆಫರ್ ಕೊಟ್ಟರೆ ಸಚಿವ ಸ್ಥಾನ: ಬಿಜೆಪಿ ನಾಯಕ ಅನುರಾಗ್ ಠಾಕೂರ್ ಆರೋಪ

ಕಾಂಗ್ರೆಸ್‌ನಲ್ಲಿ ವ್ಯಕ್ತಿಯ ಸ್ಥಾನಮಾನ ಮತ್ತು ಹುದ್ದೆಯನ್ನು ಹೈಕಮಾಂಡ್‌ಗೆ ನೀಡುವ ಕೊಡುಗೆಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಇದನ್ನು ನಾನು ಹೇಳುತ್ತಿಲ್ಲ. ಹೊರಬಂದಿರುವ ಆಡಿಯೋ ಟೇಪ್‌ನಲ್ಲಿ ಕಾಂಗ್ರೆಸ್ ನಾಯಕರ ನಡುವಿನ ಸಂಭಾಷಣೆಯಿಂದ ಈ ವಿಚಾರ ಬಹಿರಂಗವಾಗಿದೆ ಎಂದು ಹೇಳಿದರು.

ಇತ್ತೀಚೆಗೆ ವಿಸ್ತರಣೆಯಾದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಂಪುಟದ ಬಗ್ಗೆ ಆಡಿಯೋ ಕ್ಲಿಪ್‌ವೊಂದನ್ನು ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಆಡಿಯೋದಲ್ಲಿ ಕರ್ನಾಟಕದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಆರ್.ಬಿ. ತಿಮ್ಮಾಪುರ ಮತ್ತು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರ ಧ್ವನಿಗಳಿವೆ ಎಂದು ಹೇಳಲಾಗಿದ್ದು, ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಗಳನ್ನು ಪಕ್ಷದ ಹೈಕಮಾಂಡ್‌ಗೆ ನೀಡುವ ಕೊಡುಗೆಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ ಎಂಬುದನ್ನು ಇದು ಸೂಚಿಸುತ್ತದೆ ಎಂದು ಬಿಜೆಪಿ ಆರೋಪಿಸಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿಯ ಹಿರಿಯ ನಾಯಕ ಅನುರಾಗ್ ಠಾಕೂರ್, ಕಾಂಗ್ರೆಸ್‌ನಲ್ಲಿ ವ್ಯಕ್ತಿಯ ಸ್ಥಾನಮಾನ ಮತ್ತು ಹುದ್ದೆಯನ್ನು ಹೈಕಮಾಂಡ್‌ಗೆ ನೀಡುವ ಕೊಡುಗೆಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಇದನ್ನು ನಾನು ಹೇಳುತ್ತಿಲ್ಲ. ಹೊರಬಂದಿರುವ ಆಡಿಯೋ ಟೇಪ್‌ನಲ್ಲಿ ಕಾಂಗ್ರೆಸ್ ನಾಯಕರ ನಡುವಿನ ಸಂಭಾಷಣೆಯಿಂದ ಈ ವಿಚಾರ ಬಹಿರಂಗವಾಗಿದೆ ಎಂದು ಹೇಳಿದರು.

ಶೇ.80ರಷ್ಟು ಸಚಿವರು ಕೊಡುಗೆ ನೀಡಿ ತಮ್ಮ ಸ್ಥಾನಗಳನ್ನು ಪಡೆದುಕೊಂಡವರು ಎಂಬ ಆರೋಪಗಳು ಆ ಸಂಭಾಷಣೆಯಲ್ಲಿವೆ. ಅಲ್ಲದೆ, ಕಾಂಗ್ರೆಸ್ ಹೈಕಮಾಂಡ್‌ನಲ್ಲಿ ಯಾರಿದ್ದಾರೆ, ಆ ಕೊಡುಗೆಗಳನ್ನು ಸ್ವೀಕರಿಸಿದವರು ಯಾರು, ಅವುಗಳನ್ನು ಯಾವಾಗ ಮತ್ತು ಎಲ್ಲಿ ನೀಡಲಾಯಿತು ಹಾಗೂ ಈ ರೀತಿಯ ಪ್ರಕ್ರಿಯೆಯ ಮೂಲಕ ಎಷ್ಟು ಸಚಿವ ಸ್ಥಾನಗಳನ್ನು ಪಡೆಯಲಾಗಿದೆ ಎಂಬುದನ್ನು ಅವರು ಪ್ರಶ್ನಿಸಿದರು.

ಈ ಪ್ರಶ್ನೆಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉತ್ತರಿಸಬೇಕಾಗುತ್ತದೆ ಎಂದು ಠಾಕೂರ್ ಹೇಳಿದರು.

ಕಾಂಗ್ರೆಸ್ ವಿರುದ್ಧ ಮತ್ತಷ್ಟು ವಾಗ್ದಾಳಿ ನಡೆಸಿದ ಬಿಜೆಪಿ ನಾಯಕ, ಈ ವಿವಾದವನ್ನು ಆರೋಪಿತ ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಮಾತನಾಡಿದರು. ಜಾರಿ ನಿರ್ದೇಶನಾಲಯದ (ED) ತನಿಖೆ ಎದುರಿಸುತ್ತಿರುವ ವ್ಯಕ್ತಿಯೊಬ್ಬರನ್ನು ಕರ್ನಾಟಕ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನೂ ಅವರು ಪ್ರಶ್ನಿಸಿದರು.

ನಾವು ಖರ್ಗೆ ಅವರನ್ನು ಪ್ರಶ್ನಿಸಿದಾಗ, ಅವರು ತಮ್ಮ ಹೈಕಮಾಂಡ್, ಗಾಂಧಿ ಕುಟುಂಬದತ್ತ ಬೆರಳು ತೋರಿಸುತ್ತಾರೆ. ವಾಲ್ಮೀಕಿ ಯೋಜನೆಯಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿರುವ ಹಾಗೂ ಅವರ ವಿರುದ್ಧ ಇ.ಡಿ. ಪ್ರಕರಣ ನಡೆಯುತ್ತಿರುವ ವ್ಯಕ್ತಿಗೆ ಹೊಸ ಸಚಿವ ಸಂಪುಟದಲ್ಲಿ ಏಕೆ ಸ್ಥಾನ ನೀಡಲಾಯಿತು ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದರು.

ದಲಿತರ ಕಲ್ಯಾಣಕ್ಕಾಗಿ ಉದ್ದೇಶಿಸಲಾಗಿದ್ದ ಯೋಜನೆಯಿಂದ ದುರ್ಬಳಕೆಯಾದ ಹಣವನ್ನು ಸಚಿವ ಸ್ಥಾನ ಪಡೆಯಲು ಕೊಡುಗೆಯಾಗಿ ಬಳಸಿರಬಹುದು ಎಂದು ಅವರು ಮತ್ತೊಂದು ಆರೋಪ ಮಾಡಿದರು. ಆ ವ್ಯಕ್ತಿಗೆ ಬಹುಮಾನ ನೀಡುವ ಉದ್ದೇಶದಿಂದಲೇ ಹೊಸ ಸಚಿವ ಸ್ಥಾನವನ್ನು ಸೃಷ್ಟಿಸಲಾಗಿದೆಯೇ ಎಂಬುದನ್ನೂ ಅವರು ಪ್ರಶ್ನಿಸಿದರು.

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಆರ್.ಬಿ. ತಿಮ್ಮಾಪುರ ಮತ್ತು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ಅವರ ನಡುವಿನ ಸಂಭಾಷಣೆ ಎಂದು ಹೇಳಲಾಗುತ್ತಿರುವ ಆಡಿಯೋ ಕ್ಲಿಪ್‌ನ್ನು ಈ ವಿವಾದ ಕೇಂದ್ರವಾಗಿಸಿಕೊಂಡಿದೆ. ಸಚಿವರನ್ನು ಆಯ್ಕೆ ಮಾಡುವಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ಪಾತ್ರದ ಕುರಿತು ಪ್ರಶ್ನಿಸುವ ಹೇಳಿಕೆಗಳು ಈ ಧ್ವನಿಮುದ್ರಿಕೆಯಲ್ಲಿ ಇವೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ತೈಲ ಖರೀದಿಗೆ ನಿರ್ಬಂಧ ಮಸೂದೆಗೆ ಅಮೆರಿಕ ಸೆನೆಟ್ ಅಸ್ತು: ಭಾರತ ಸೇರಿ 5 ದೇಶಗಳ ಮೇಲೆ ಶೇ.100ರಷ್ಟು ಸುಂಕ ಹೇರಿಕೆ ಶಾಕ್

ಉಕ್ರೇನ್ ರಾಜಧಾನಿ ಕೈವ್ ನಲ್ಲಿ ರಷ್ಯಾ ದಾಳಿ: ಮಗು ಸೇರಿದಂತೆ ಮೂವರು ಸಾವು!

ಸಿದ್ದರಾಮಯ್ಯ ಜತೆ ಮುನಿಸಿಲ್ಲ: ನನಗೆ ಸಚಿವ ಸ್ಥಾನ ನೀಡದಂತೆ ಹೈಕಮಾಂಡ್‌ಗೆ ಅವರು ಹೇಳಿಲ್ಲ; ಜಮೀರ್ ಸ್ಪಷ್ಟನೆ

ಸಚಿವನಾಗಿದ್ದೇನೆ, ಈಗೇನು ಮಾಡುತ್ತೀಯಪ್ಪಾ ಜಗದ್ಗುರು?

ಮುಂಬೈ: ಸಲ್ಮಾನ್ ಖಾನ್ ಬಾಂದ್ರಾ ನಿವಾಸದ ಹೊರಗೆ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಹಠಾತ್ ಸಾವು!