ಸಾಂದರ್ಭಿಕ ಚಿತ್ರ  
ದೇಶ

ಆಗಸ್ಟ್ 15ಕ್ಕೆ ಉಗ್ರ ದಾಳಿಗೆ ಪಾಕ್ ಸಂಚು; BKI ಏಜೆಂಟ್ ಬಂಧಿಸಿ ಚೀನಾದ 86-P ಗ್ರೆನೇಡ್ ವಶಕ್ಕೆ ಪಡೆದ ಪಂಜಾಬ್ ಪೊಲೀಸರು

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ವೇಳೆ ಅತಿ ದೊಡ್ಡ ಉಗ್ರ ದಾಳಿಗೆ ಪಾಕಿಸ್ತಾನದ ISI ಪ್ರಾಯೋಜಿತ ಬಾಬರ್ ಖಾಲ್ಸಾ ಇಂಟರ್ನ್ಯಾಷನಲ್ ಉಗ್ರಗಾಮಿ ಸಂಘಟನೆ ಸಂಚು ರೂಪಿಸಿತ್ತು. ಆದರೆ, ಪಂಜಾಬ್ ಪೊಲೀಸರು ಆ ಸಂಚನ್ನು ಯಶಸ್ವಿಯಾಗಿ ಹತ್ತಿಕ್ಕಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಜಲಂಧರ್‌ (ಪಂಜಾಬ್): ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಈ ವೇಳೆ ಅತಿ ದೊಡ್ಡ ಉಗ್ರ ದಾಳಿಗೆ ಪಾಕಿಸ್ತಾನದ ISI ಪ್ರಾಯೋಜಿತ ಬಾಬರ್ ಖಾಲ್ಸಾ ಇಂಟರ್ನ್ಯಾಷನಲ್ (BKI) ಉಗ್ರಗಾಮಿ ಸಂಘಟನೆ ಸಂಚು ರೂಪಿಸಿತ್ತು. ಆದರೆ ಪಂಜಾಬ್ ಪೊಲೀಸರು, ಪಾಪಿ ಪಾಕಿಸ್ತಾನದ ಆ ಸಂಚನ್ನು ಯಶಸ್ವಿಯಾಗಿ ಹತ್ತಿಕ್ಕಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಆಗಸ್ಟ್ 15ರ ವೇಳೆಗೆ ಪಂಜಾಬ್‌ನ ವಿವಿಧೆಡೆ ಸಾರ್ವಜನಿಕ ಸ್ಥಳಗಳು ಹಾಗೂ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿ ದೊಡ್ಡ ಮಟ್ಟದ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು, ಜಂಟಿ ಕಾರ್ಯಾಚರಣೆ ನಡೆಸಿ, ವಿದೇಶಿ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕದಲ್ಲಿದ್ದ ಪ್ರಮುಖ ಉಗ್ರಗಾಮಿ ಏಜೆಂಟ್ ಒಬ್ಬನನ್ನು ಬಂಧಿಸಿದ್ದಾರೆ. ಈತನಿಂದ ಚೀನಾದ ಅತ್ಯಂತ ಅಪಾಯಕಾರಿ 86-P ಮಾದರಿಯ ಹ್ಯಾಂಡ್ ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಮುಂದುವರೆದು, ಉಗ್ರಗಾಮಿಗಳು ಮತ್ತು ಅವರ ವಿದೇಶಿ ಮಾಲೀಕರು ನೇರವಾಗಿ ಮುಖಾಮುಖಿ ಭೇಟಿಯಾಗದೆ, ನಿರ್ದಿಷ್ಟ ರಹಸ್ಯ ಜಾಗದಲ್ಲಿ ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟು ಸಂವಹನ ನಡೆಸುವ DLB ವಿಧಾನದ ಮೂಲಕ ಈ ಹ್ಯಾಂಡ್ ಗ್ರೆನೇಡ್ ಅನ್ನು ಪಂಜಾಬ್‌ಗೆ ತಲುಪಿಸಲಾಗಿತ್ತು ಎನ್ನಲಾಗಿದೆ.

ಏತನ್ಮಧ್ಯೆ, ಬಂಧಿತ ಆರೋಪಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಬೆಂಬಲಿತ, ಅಮೆರಿಕ, ಯುಕೆ ಮತ್ತು ಯುರೋಪ್‌ ದೇಶಗಳಲ್ಲಿ ತಲೆಮರೆಸಿಕೊಂಡಿರುವ ಬಾಬರ್ ಖಾಲ್ಸಾ ಇಂಟರ್ನ್ಯಾಷನಲ್ ಉಗ್ರಗಾಮಿ ಸಂಘಟನೆಯ ನಾಯಕರೊಂದಿಗೆ ನೇರ ಸಂಪರ್ಕದಲ್ಲಿದ್ದು, ಆಗಸ್ಟ್ 15ರ ಸಂದರ್ಭದಲ್ಲಿ ದೇಶದಲ್ಲಿ ಶಾಂತಿ ಕದಡಲು ಮತ್ತು ಭಯದ ವಾತಾವರಣ ಸೃಷ್ಟಿಸಲು ಮಾಸ್ಟರ್ ಪ್ಲಾನ್ ರೂಪಿಸಿದ್ದ. ಇನ್ನು, ಪಂಜಾಬ್ ಪೊಲೀಸರು ಬಂಧಿತ ಉಗ್ರನ ವಿರುದ್ಧ BNS ಮತ್ತು ಸ್ಫೋಟಕ ಪದಾರ್ಥಗಳ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!