ಅನಿಲ್ ಝಾ ವತ್ಸ್ - ರೇಖಾ ಗುಪ್ತಾ 
ದೇಶ

‘ಕನಿಷ್ಠ ಸರಿಯಾಗಿ ಬಟ್ಟೆ ಹಾಕಿಕೊಳ್ಳಿ’: ಅರೆಬೆತ್ತಲಾಗಿ ಮಹಿಳೆಯರಿಂದ ಅರ್ಜಿ ಸ್ವೀಕರಿಸಿದ AAP ಶಾಸಕನ ವಿರುದ್ಧ ಸಿಎಂ ರೇಖಾ ಗುಪ್ತಾ ಗರಂ! Video

ಆಪ್ ಶಾಸಕನ ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ದೆಹಲಿ ವಿಧಾನಸಭಾ ಅಧಿವೇಶನದ ಸಮಯದಲ್ಲೇ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ರೇಖಾ ಗುಪ್ತಾ ಅವರು, ಇದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕ ಅನಿಲ್ ಝಾ ವತ್ಸ್ ಅವರು ಸಾರ್ವಜನಿಕರು ಹಾಗೂ ಮಹಿಳೆಯರಿಂದ ಅರ್ಜಿಗಳನ್ನು ಸ್ವೀಕರಿಸುವ ವೇಳೆ ಅರೆಬೆತ್ತಲಾಗಿ(ಒಳ ಉಡುಪಿನಲ್ಲಿ) ಕುಳಿತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಯುವ್ಯ ದೆಹಲಿಯ ಕಿರಾರಿ ಕ್ಷೇತ್ರವನ್ನು ಪ್ರತಿನಿಧಿಸುವ ವತ್ಸ್ ಅವರು, ವಿಡಿಯೋದಲ್ಲಿ ವೆಸ್ಟ್ ಮತ್ತು ಶಾರ್ಟ್ಸ್ ಧರಿಸಿ ಕುರ್ಚಿಯಲ್ಲಿ ಕಾಲು ಮಡಚಿ ಕುಳಿತಿರುವುದನ್ನು ನೋಡಬಹುದು. ಆಪ್ ಶಾಸಕರು ತಮ್ಮ ಕ್ಷೇತ್ರದ ಜನರು ತಂದ ದಾಖಲೆಗಳಿಗೆ ಸಹಿ ಹಾಕುತ್ತಿದ್ದಾರೆ.

ಆಪ್ ಶಾಸಕನ ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ದೆಹಲಿ ವಿಧಾನಸಭಾ ಅಧಿವೇಶನದ ಸಮಯದಲ್ಲೇ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ರೇಖಾ ಗುಪ್ತಾ ಅವರು, ಇದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

ಮತದಾರರನ್ನು, ವಿಶೇಷವಾಗಿ ಮಹಿಳೆಯರನ್ನು ಭೇಟಿಯಾಗುವಾಗ ಚುನಾಯಿತ ಪ್ರತಿನಿಧಿ ಸರಿಯಾಗಿ ಬಟ್ಟೆ ಹಾಕಿಕೊಳ್ಳಬೇಕು. ಈ ರೀತಿಯ ಅಸಭ್ಯ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೇ, ಅವರ ಶಾಸಕತ್ವವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಶಾಸಕನ ಸ್ಪಷ್ಟನೆ

ವಿಧಾನಸಭೆ ಕಲಾಪದಲ್ಲೂ ಶಾಸಕ ಅಸಭ್ಯ ಸನ್ನೆಗಳನ್ನು ಮಾಡಿದ್ದಾರೆ ಎಂದು ಸಿಎಂ ಆರೋಪಿಸಿದ್ದು, ಇದಕ್ಕೆ ಪ್ರತಿಯಾಗಿ ಎಎಪಿ ಶಾಸಕ ಅನಿಲ್ ಝಾ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಯಾವುದೇ ತಪ್ಪು ಸನ್ನೆಗಳನ್ನು ಮಾಡಿಲ್ಲ. ಅದಕ್ಕೆ ಸಂಬಂಧಿಸಿದ ವಿಡಿಯೋ ಸಾಕ್ಷಿ ಇದ್ದರೆ ತೋರಿಸಲಿ. ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತರಿಸಲಾಗದೇ ಈ ರೀತಿಯ ಆಧಾರ ರಹಿತ ಆರೋಪವನ್ನು ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾವು ನಮ್ಮ ರೈತರನ್ನು ರಕ್ಷಿಸಬೇಕು, ನ್ಯಾಯಾಲಯದ ತೀರ್ಪನ್ನೂ ಪಾಲಿಸಬೇಕು: CWRC ಆದೇಶಕ್ಕೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ನಾನು ಸೇರಿದಂತೆ ಎಲ್ಲರೂ ಸರ್ಕಾರಿ ನೌಕರರೇ; ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲ, ಡಬಲ್ ಬಿಲ್ ಮಾಡುವವರನ್ನು ಮಟ್ಟ ಹಾಕುವೆ: CM ಡಿಕೆಶಿ ಎಚ್ಚರಿಕೆ

'ನಾನೀಗ ಪೆಟ್ಟು ತಿಂದ ಹುಲಿಯಂತಾಗಿದ್ದೇನೆ; ನೋಡ್ತಿರಿ ನೀವು...': ಖಾತೆ ಬಗ್ಗೆ ಸಚಿವ ಬಿ.ನಾಗೇಂದ್ರ ಸ್ಫೋಟಕ ಹೇಳಿಕೆ - Video

ನಿಮ್ಮ ಜೊತೆಗಿದ್ದವರು ಯಾರು?: ರಾಹುಲ್ ಗಾಂಧಿ ರಜಾ ಫೋಟೋ ಬಗ್ಗೆ ಕೇಂದ್ರ ಸಚಿವರ ಪ್ರಶ್ನೆ, ಕಾಂಗ್ರೆಸ್ ಕೆಂಡಮಂಡಲ!

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್‌; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!