FCRA ತಿದ್ದುಪಡಿ ಮಸೂದೆ2026 
ದೇಶ

ಲೋಕಸಭೆಯಲ್ಲಿ ಭಾರೀ ಗದ್ದಲ; ಸಂಸತ್ತಿನ ಜಂಟಿ ಸಮಿತಿಯ ಅಂಗಳ ತಲುಪಿದ FCRA ತಿದ್ದುಪಡಿ ಮಸೂದೆ

FCRA ತಿದ್ದುಪಡಿ ಮಸೂದೆ2026 ಲೋಕಸಭೆಯಲ್ಲಿ ಮಂಡನೆಯಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಏರ್ಪಟ್ಟಿತು. ಹಾಗಾಗಿ, ಸಂಸತ್ತು, ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆಯನ್ನು ಆಳವಾದ ಪರಿಶೀಲನೆಗಾಗಿ JPC ಒಪ್ಪಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ FCRA ಮಸೂದೆಯು ಲೋಕಸಭೆಯಲ್ಲಿ ಮಂಡನೆಯಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಏರ್ಪಟ್ಟಿತು. ಹಾಗಾಗಿ, ಸಂಸತ್ತು, ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ, 2026 (FCRA Amendment Bill, 2026) ಯನ್ನು ಆಳವಾದ ಪರಿಶೀಲನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ (JPC) ಒಪ್ಪಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

FCRA ತಿದ್ದುಪಡಿ ಮಸೂದೆ 2026 ಅನ್ನು ಲೋಕಸಭೆಯಲ್ಲಿ ಅಂಗೀಕರಿಸುವ ವೇಳೆ ರಾಜಕೀಯ ನಾಯಕರ ನಡುವೆ ವಾಕ್ಸಮರ ನಡೆಯಿತು. ಅದರಂತೆ, "ಈ ಸರ್ಕಾರವು ಇಲ್ಲಿಯವರೆಗೆ ಅಲ್ಪಸಂಖ್ಯಾತರ ವಿರುದ್ಧವಲ್ಲದ ಯಾವ ಮಸೂದೆಯನ್ನು ತಂದಿದೆ?" ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೇಳಿದರು. ಇದಕ್ಕೆ ತಿರುಗೇಟು ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, "ವಿರೋಧ ಪಕ್ಷವು ಸದನವನ್ನು ದಾರಿ ತಪ್ಪಿಸುತ್ತಿದ್ದು, ಮಸೂದೆಯಲ್ಲಿ ಅಲ್ಪಸಂಖ್ಯಾತರ ವಿರುದ್ಧವಿರುವ ಯಾವುದಾದರೂ ಒಂದು ಅಂಶವನ್ನು ತೋರಿಸುವಂತೆ" ಸವಾಲು ಹಾಕಿದರು. ಇದರ ನಡುವೆ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್, FCRA ತಿದ್ದುಪಡಿ ಮಸೂದೆಯನ್ನು ತಕ್ಷಣವೇ ಇದನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

JPC ರಚನೆ

ಮುಂದುವರೆದು, ಸಂಸತ್ತಿನಲ್ಲಿ ಗದ್ದಲದ ನಡುವೆಯೇ, ಧ್ವನಿ ಮತದ ಮೂಲಕ ಈ ಮಸೂದೆಯನ್ನು 31 ಸದಸ್ಯರನ್ನು ಒಳಗೊಂಡ ಜಂಟಿ ಸಂಸದೀಯ ಸಮಿತಿಗೆ ರವಾನಿಸಲಾಗಿದೆ. ಈ ಸಮಿತಿಯಲ್ಲಿ ಲೋಕಸಭೆಯಿಂದ 21 ಹಾಗೂ ರಾಜ್ಯಸಭೆಯಿಂದ 10 ಸದಸ್ಯರಿರುತ್ತಾರೆ. ಸಮಿತಿಯು ಈ ಮಸೂದೆಯ ಪ್ರತಿಯೊಂದು ನಿಬಂಧನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, 2026ರ ಚಳಿಗಾಲದ ಅಧಿವೇಶನದ ಮೊದಲ ವಾರದ ಕೊನೆಯ ದಿನದೊಳಗೆ ವಿವರವಾದ ವರದಿಯನ್ನು ಸಲ್ಲಿಸಲಿದೆ.

FCRA ತಿದ್ದುಪಡಿ ಮಸೂದೆಯ ಮುಖ್ಯ ಉದ್ದೇಶವೇನು?

  • ವಿದೇಶಿ ನಿಧಿಗಳ ಮೇಲೆ ನಿಗಾ: ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಎನ್‌ಜಿಒ ಮತ್ತು ಸಂಸ್ಥೆಗಳು ವಿದೇಶಗಳಿಂದ ಪಡೆಯುವ ದೇಣಿಗೆ ಹಾಗೂ ಹಣದ ಬಳಕೆಯನ್ನು ಮತ್ತಷ್ಟು ಪಾರದರ್ಶಕಗೊಳಿಸುವುದು.

  • ರಾಷ್ಟ್ರೀಯ ಭದ್ರತೆ: ವಿದೇಶಿ ಹಣವು ದೇಶದ ಆಂತರಿಕ ಭದ್ರತೆ ಅಥವಾ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಕೆಯಾಗದಂತೆ ತಡೆಯಲು ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವುದು ಈ ತಿದ್ದುಪಡಿಯ ಮುಖ್ಯ ಗುರಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಮುನಿಯಪ್ಪಗೆ ಸಮಾಜಕಲ್ಯಾಣ, ಜಮೀರ್ – ವಸತಿ ಖಾತೆ?

ಪರಪ್ಪನ ಅಗ್ರಹಾರ ಜೈಲಿನಲ್ಲೂ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್‌ಡ್ರೈವ್ ಪತ್ತೆ: ಮಾಜಿ ಸಂಸದನ ವಿರುದ್ಧ ಕೇಸ್ ದಾಖಲು

ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ: ಡಬಲ್ ಸಂಭ್ರಮದಲ್ಲಿರುವ ಪತ್ನಿ ಸೋನಲ್'ಗೆ ದುಬಾರಿ ಗಿಫ್ಟ್ ನೀಡಿದ ತರುಣ್ ಸುಧೀರ್!

ಮಳೆ ಕೊರತೆ, ಬಿತ್ತನೆ ವೈಫಲ್ಯ: ರಾಜ್ಯದಲ್ಲಿ 50 ಲಕ್ಷ ಟನ್ ಆಹಾರ ಧಾನ್ಯ ನಷ್ಟದ ಭೀತಿ

ಮಿಸ್ ಆಯ್ತು ಸಚಿವ ಸ್ಥಾನ; ‘ಶಕ್ತಿ ಪ್ರದರ್ಶನ’ಕ್ಕೆ ಸಜ್ಜಾದ ಸಿದ್ದರಾಮಯ್ಯ ಆಪ್ತರು! ಮೈಸೂರಿನಲ್ಲಿ ‘ಅಸಮಾಧಾನ’ ಸಭೆ!