ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ, ಗೌತಮ್ ಅದಾನಿ  
ದೇಶ

‘ಕಣ್ಣಿಗೆ ಕಾಣುವುದಕ್ಕಿಂತ ಈ ಕೇಸಲ್ಲಿ ಇನ್ನೂ ಹೆಚ್ಚಿನ ಸಂಗತಿಗಳಿವೆ’: ಅದಾನಿ ಪ್ರಕರಣ ವಜಾ ಬೆನ್ನಲ್ಲೇ ರಾಹುಲ್ ಗಾಂಧಿ ಟೀಕೆ

ಅಮೆರಿಕದ ನ್ಯಾಯಾಲಯವು ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ವಜಾಗೊಳಿಸಿದ ಬೆನ್ನಲ್ಲೇ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕಣ್ಣಿಗೆ ಕಾಣುವುದಕ್ಕಿಂತ ಈ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಸಂಗತಿಗಳಿವೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು, ರಾಜಿ ಮಾಡಿಕೊಂಡಿರುವ ಪ್ರಧಾನಿ ಭಾರತದ ಹಿತಾಸಕ್ತಿಯನ್ನು ಮಾರಾಟ ಮಾಡುವಂತೆ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಅಮೆರಿಕದ ಫೆಡರಲ್ ನ್ಯಾಯಾಧೀಶರು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಭದ್ರತಾ ವಂಚನೆ ಪಿತೂರಿ, ವೈರ್ ವಂಚನೆ ಪಿತೂರಿ ಹಾಗೂ ಭದ್ರತಾ ವಂಚನೆ ಸೇರಿದಂತೆ ಕ್ರಿಮಿನಲ್ ಆರೋಪಗಳನ್ನು ಶಾಶ್ವತವಾಗಿ ವಜಾಗೊಳಿಸಿದ ಬಳಿಕ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಅಮೆರಿಕದ ನ್ಯಾಯಾಲಯದ ಆದೇಶಕ್ಕೆ ಸಂಬಂಧಿಸಿದ ಸುದ್ದಿ ವರದಿಯೊಂದನ್ನು ಹಂಚಿಕೊಂಡು ರಾಹುಲ್ ಗಾಂಧಿ ‘ಎಕ್ಸ್’ನಲ್ಲಿ, “ಕಣ್ಣಿಗೆ ಕಾಣುವುದಕ್ಕಿಂತ ಈ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಸಂಗತಿಗಳಿವೆ. ರಾಜಿ ಮಾಡಿಕೊಂಡಿರುವ ಪ್ರಧಾನಿಯನ್ನು ಭಾರತದ ಹಿತಾಸಕ್ತಿಯನ್ನು ಮಾರಾಟ ಮಾಡುವಂತೆ ಒತ್ತಾಯಿಸಲಾಗಿದೆ. ಭಾರತ ಇದಕ್ಕೆ ಭಾರೀ ಬೆಲೆ ತೆರಬೇಕಾಗಿದೆ,” ಎಂದು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಮುನಿಯಪ್ಪಗೆ ಸಮಾಜಕಲ್ಯಾಣ, ಜಮೀರ್ – ವಸತಿ ಖಾತೆ?

ಪರಪ್ಪನ ಅಗ್ರಹಾರ ಜೈಲಿನಲ್ಲೂ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್‌ಡ್ರೈವ್ ಪತ್ತೆ: ಮಾಜಿ ಸಂಸದನ ವಿರುದ್ಧ ಕೇಸ್ ದಾಖಲು

ಮಳೆ ಕೊರತೆ, ಬಿತ್ತನೆ ವೈಫಲ್ಯ: ರಾಜ್ಯದಲ್ಲಿ 50 ಲಕ್ಷ ಟನ್ ಆಹಾರ ಧಾನ್ಯ ನಷ್ಟದ ಭೀತಿ

ಮಿಸ್ ಆಯ್ತು ಸಚಿವ ಸ್ಥಾನ; ‘ಶಕ್ತಿ ಪ್ರದರ್ಶನ’ಕ್ಕೆ ಸಜ್ಜಾದ ಸಿದ್ದರಾಮಯ್ಯ ಆಪ್ತರು! ಮೈಸೂರಿನಲ್ಲಿ ‘ಅಸಮಾಧಾನ’ ಸಭೆ!

ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕದಲ್ಲಿ ಗುಟ್ಕಾ, ತಂಬಾಕು ಪಾನ್ ಮಸಾಲಾ ಬ್ಯಾನ್