ಕಂಗನಾ ರಣಾವತ್ 
ದೇಶ

'' ಆಂಟಿ, ಇಂಡಿಪೆಂಡೆಂಟ್ ಅಲ್ಲ, ಸರಿಯಾದ ಕಾಗುಣಿತವೂ ಗೊತ್ತಿಲ್ಲವೇ?' ಕಂಗನಾ ರಣಾವತ್ ಕಾಲೆಳೆದ ನೆಟ್ಟಿಗರು!

ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಂಗನಾ ರಣಾವತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಸಂದೇಶದಲ್ಲಿನ ವ್ಯಾಕರಣ ದೋಷ ನೆಟ್ಟಿಗರಿಗೆ ಅಸ್ತ್ರವಾಗಿದ್ದು, ನಾನಾ ರೀತಿಯಲ್ಲಿ ಪ್ರತಿಕ್ರಿಯಿಸುವ ಮೂಲಕ ನಟಿಯ ಕಾಲೆಳೆಯುತ್ತಿದ್ದಾರೆ.

ನವದೆಹಲಿ: ಇತ್ತೀಚಿಗೆ ನೀಟ್ ಪರೀಕ್ಷೆಯಲ್ಲಿ ಅಕ್ರಮ ಕುರಿತು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ CJP ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದ Gen-z ಗಳನ್ನು Gutter ಎಂದು ಟೀಕಿಸಿ ತೀವ್ರ ವಿವಾದಕ್ಕೀಡಾಗಿದ್ದ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸತ್ ಸದಸ್ಯೆ ಕಂಗನಾ ರಣಾವತ್, 80ನೇ ಸ್ವಾತಂತ್ರ್ಯ ದಿನಾಚರಣೆಗೆ ಮಾಡಿರುವ ಶುಭಾಶಯ ಚರ್ಚೆಗೆ ಗ್ರಾಸವಾಗಿದ್ದು, ನೆಟ್ಟಿಗರು ಲೇವಡಿ ಮಾಡುತ್ತಿದ್ದಾರೆ.

ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಂಗನಾ ರಣಾವತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಸಂದೇಶದಲ್ಲಿನ ವ್ಯಾಕರಣ ದೋಷ ನೆಟ್ಟಿಗರಿಗೆ ಅಸ್ತ್ರವಾಗಿದ್ದು, ನಾನಾ ರೀತಿಯಲ್ಲಿ ಪ್ರತಿಕ್ರಿಯಿಸುವ ಮೂಲಕ ನಟಿಯ ಕಾಲೆಳೆಯುತ್ತಿದ್ದಾರೆ.

"Happy Independence Day" (ಹ್ಯಾಪಿ ಇಂಡಿಪೆಂಡೆನ್ಸ್ ಡೇ) ಎಂದು ಬರೆಯುವ ಬದಲು "Happy Independent Day" (ಹ್ಯಾಪಿ ಇಂಡಿಪೆಂಡೆಂಟ್ ಡೇ) ಎಂದು ಬರೆಯುವ ಮೂಲಕ ನೆಟ್ಟಿಗರ ಬಾಯಿಗೆ ಆಹಾರವಾಗಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಭಾರತೀಯ ಧ್ವಜವನ್ನು ಬೀಸುತ್ತಿರುವ ವೀಡಿಯೊವನ್ನು ಹಂಚಿಕೊಂಡಿರುವ ಕಂಗನಾ, ಅದರೊಂದಿಗೆ "Happy Independent Day" ಎಂಬ ಸಂದೇಶವನ್ನು ಬರೆದಿದ್ದರು. ಅಷ್ಟೇ ಅಲ್ಲದೇ, ಇದೇ ಶುಭಾಶಯವನ್ನು 'X' (ಹಿಂದಿನ ಟ್ವಿಟರ್) ನಲ್ಲೂ ಪೋಸ್ಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಪೋಸ್ಟ್ ಅನ್ನು ಹಂಚಿಕೊಳ್ಳುವಾಗಲೂ ಕಂಗನಾ ಮತ್ತೊಮ್ಮೆ "Happy Independent Day" ಎಂದೇ ಬರೆದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಒಬ್ಬ ಬಳಕೆದಾರರು, "ಮೇಡಂ, ನಿಮಗೆ 'Independence' (ಸ್ವಾತಂತ್ರ್ಯ) ಪದದ ಸರಿಯಾದ ಕಾಗುಣಿತವಾದರೂ ಗೊತ್ತಿದೆಯೇ?" ಎಂದು ಪ್ರಶ್ನಿಸಿದ್ದಾರೆ.

ಮತ್ತೊಬ್ಬ ಬಳಕೆದಾರ ಆಂಟಿ, ಅದು ಇಂಡಿಪೆಂಡೆಂಟ್ ಅಲ್ಲ, ಇಂಡಿಪೆಂಡೆನ್ಸ್ ಡೇ ಎಂದು ಬರೆಯುವ ಮೂಲಕ ಟೀಕಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕೇಂದ್ರ ಅದೊಂದು ಕೆಲಸ ಮಾಡದಿದ್ದರೆ... PoK ಜಮ್ಮು ಮತ್ತು ಕಾಶ್ಮೀರದೊಂದಿಗೆ ಸೇರುತ್ತಿತ್ತು': ಒಮರ್ ಅಬ್ದುಲ್ಲಾ

ಗುಡ್‌ನ್ಯೂಸ್: ಪೆಟ್ರೋಲ್, ಡೀಸೆಲ್, ATF ಮೇಲಿನ ತೆರಿಗೆ ಇಳಿಕೆ

ಸ್ವಾತಂತ್ರ್ಯ ದಿನಾಚರಣೆ ವೇಳೆ ಜಾರ್ಖಂಡ್ ನಲ್ಲಿ ಹೈಡ್ರಾಮಾ: ತಿರಂಗಾ ಯಾತ್ರೆಗೆ ತೆರಳದಂತೆ JLKM ನಾಯಕನ ತಡೆದ ಪೊಲೀಸರು, Video

ಜಾತಿ, ಧಾರ್ಮಿಕ ತಡೆಗೋಡೆ ಮುರಿಯುವುದು ನಿಜವಾದ ಸ್ವಾತಂತ್ರ್ಯ: ತಮಿಳುನಾಡು ಸಿಎಂ ಆಗಿ ವಿಜಯ್ ಮೊದಲ ಸ್ವಾತಂತ್ರ್ಯದಿನಾಚರಣೆಯ ಭಾಷಣ!

ನಾನು ಪ್ರಶಾಂತ್ ಕಿಶೋರ್ ರಾಜಕೀಯ ಬೆಂಬಲಿಸುತ್ತೇನೆ, ಆದರೆ ಅವರ ಭವಿಷ್ಯ ಸವಾಲಿನಿಂದ ಕೂಡಿದೆ: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್