ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ  
ದೇಶ

‘ವಂದೇ ಮಾತರಂ’ ಹಾಡುವ ವೇಳೆ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅರ್ಧದಲ್ಲೇ ನಿಲ್ಲಿಸುವಂತೆ ಸನ್ನೆ ಮಾಡಿದರೇ: Viral Video ಬಗ್ಗೆ ಕಾಂಗ್ರೆಸ್ ಹೇಳುವುದೇನು?

ಭಾರತವು ಇಂದು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದೆ. ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಕಚೇರಿಯಲ್ಲಿ ಭಾಗವಹಿಸಿದ್ದರು.

ದೆಹಲಿಯ ಕಾಂಗ್ರೆಸ್‌ ಕೇಂದ್ರ ಕಚೇರಿಯಲ್ಲಿ ಇಂದು ನಡೆದ 80ನೇ ಸ್ವಾತಂತ್ರ್ಯ ಆಚರಣೆ ಕಾರ್ಯಕ್ರಮದ ವೈರಲ್ ವಿಡಿಯೋವೊಂದು ‘ವಂದೇ ಮಾತರಂ’ ಕುರಿತು ಹೊಸ ವಿವಾದಕ್ಕೆ ಕಾರಣವಾಗಿದೆ. ‘ವಂದೇ ಮಾತರಂ’ ಗೀತೆಯನ್ನು ಹಾಡುತ್ತಿದ್ದ ವೇಳೆ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಅದನ್ನು ಮಧ್ಯದಲ್ಲೇ ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಟೀಕಿಸುತ್ತಿದ್ದಾರೆ. ಆದರೆ, ಗೀತೆಯನ್ನು ಹಾಡುಗಾರರು ಮುಂದುವರಿಸಿದ್ದು, ಪೂರ್ಣ ‘ವಂದೇ ಮಾತರಂ’ ಕಾರ್ಯಕ್ರಮದಲ್ಲಿ ಹಾಡಲಾಗಿದೆ.

ಭಾರತವು ಇಂದು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದೆ. ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಕಚೇರಿಯಲ್ಲಿ ಭಾಗವಹಿಸಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ‘ವಂದೇ ಮಾತರಂ’ ಗೀತೆ ಮೊಳಗುತ್ತಿದ್ದ ಸಂದರ್ಭದಲ್ಲಿ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಸನ್ನೆ ಮಾಡುತ್ತಿರುವುದು ಕಂಡುಬರುತ್ತದೆ. ಈ ಸನ್ನೆಗಳನ್ನು ಕೆಲವರು ‘ವಂದೇ ಮಾತರಂ’ ಗೀತೆಯನ್ನು ನಿಲ್ಲಿಸಲು ಅಥವಾ ಮಧ್ಯದಲ್ಲಿ ತಡೆಹಿಡಿಯಲು ಮಾಡಿದ ಪ್ರಯತ್ನ ಎಂದು ವ್ಯಾಖ್ಯಾನಿಸಿದ್ದಾರೆ.

ಆದರೆ, ಆ ಸನ್ನೆಗಳ ನಡುವೆಯೂ ಗೀತೆ ಮುಂದುವರಿದಿದ್ದು, ಪೂರ್ಣ ‘ವಂದೇ ಮಾತರಂ’ ಹಾಡಲಾಗಿದೆ.

ಈ ಘಟನೆ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಪ್ರಶ್ನೆಗಳು ಎದ್ದಿವೆ: ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನಿಜವಾಗಿಯೂ ‘ವಂದೇ ಮಾತರಂ’ಗೆ ಆಕ್ಷೇಪ ವ್ಯಕ್ತಪಡಿಸಿದ್ದರೇ? ಅಥವಾ ವಿಡಿಯೋವನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆಯೇ?

‘ವಂದೇ ಮಾತರಂ’ ವಿವಾದದ ಬಗ್ಗೆ ಕಾಂಗ್ರೆಸ್‌ ಹೇಳಿದ್ದೇನು?

ಕಾಂಗ್ರೆಸ್‌ ನಾಯಕರಾದ ಪವನ್ ಖೇರಾ ಮತ್ತು ಜೈರಾಮ್ ರಮೇಶ್ ಅವರು ‘ವಂದೇ ಮಾತರಂ’ ಕುರಿತು ಪಕ್ಷದ ನಿಲುವನ್ನು ವಿವರಿಸಿದ್ದಾರೆ. ಕಾಂಗ್ರೆಸ್‌ ಸಭೆಗಳಲ್ಲಿ ಐತಿಹಾಸಿಕವಾಗಿ ಗೀತೆಯ ಆರಂಭದ ಸಾಲುಗಳನ್ನು ಮಾತ್ರ ಹಾಡುವ ಪದ್ಧತಿ ಇದೆ ಎಂದು ಅವರು ಹೇಳಿದ್ದಾರೆ.

1937ರ ಅಕ್ಟೋಬರ್‌ನಲ್ಲಿ ಕೋಲ್ಕತ್ತಾದಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಸೇರಿದಂತೆ ಹಲವು ಪ್ರಮುಖ ನಾಯಕರು ಈ ವಿಷಯದ ಕುರಿತು ಚರ್ಚಿಸಿದ್ದರು ಎಂದು ಪವನ್ ಖೇರಾ ಹೇಳಿದ್ದಾರೆ.

ಜೈರಾಮ್ ರಮೇಶ್ ಅವರು 1937ರ ಅಕ್ಟೋಬರ್ 28ರಂದು ಕೋಲ್ಕತ್ತಾದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯನ್ನು ಉಲ್ಲೇಖಿಸಿದ್ದಾರೆ. ಈ ಸಭೆಯಲ್ಲಿ ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್, ಮೌಲಾನಾ ಅಬ್ದುಲ್ ಕಲಾಂ ಆಜಾದ್, ಜವಾಹರಲಾಲ್ ನೆಹರು, ಗೋವಿಂದ್ ಬಲ್ಲಭ್ ಪಂತ್ ಮತ್ತು ಸಿ. ರಾಜಗೋಪಾಲಾಚಾರಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ರಬೀಂದ್ರನಾಥ ಟ್ಯಾಗೋರ್ ಅವರು ಜವಾಹರಲಾಲ್ ನೆಹರು ಮತ್ತು ಸುಭಾಷ್ ಚಂದ್ರ ಬೋಸ್ ಅವರಿಗೆ ಕಾಂಗ್ರೆಸ್‌ ಸಭೆಗಳಲ್ಲಿ ‘ವಂದೇ ಮಾತರಂ’ನ ಆರಂಭದ ಸಾಲುಗಳನ್ನು ಮಾತ್ರ ಹಾಡುವಂತೆ ಸಲಹೆ ನೀಡಿದ್ದರು ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಈ ಪದ್ಧತಿ ಕಾಂಗ್ರೆಸ್‌ ಸಭೆಗಳಲ್ಲಿ ಮುಂದುವರಿದಿದೆ. ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಸೇವಾದಳದವರು ಸಭೆಗಳಲ್ಲಿ ‘ವಂದೇ ಮಾತರಂ’ನ ಆರಂಭದ ಸಾಲುಗಳನ್ನು ಹಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಪೂರ್ಣ ‘ವಂದೇ ಮಾತರಂ’ ಏಕೆ ರಾಜಕೀಯ ವಿವಾದದ ಕೇಂದ್ರವಾಗಿದೆ?

ಸರ್ಕಾರಿ ಕಾರ್ಯಕ್ರಮಗಳು, ಶಾಲೆಗಳು ಮತ್ತು ಪ್ರಮುಖ ರಾಷ್ಟ್ರೀಯ ಸಮಾರಂಭಗಳಲ್ಲಿ ‘ವಂದೇ ಮಾತರಂ’ನ ಎಲ್ಲಾ ಆರು ಚರಣಗಳನ್ನು ಹಾಡುವಂತೆ ಸರ್ಕಾರ ಸೂಚಿಸಿದ ನಂತರ ಈ ವಿಷಯ ರಾಜಕೀಯ ಚರ್ಚೆಯ ಕೇಂದ್ರವಾಗಿದೆ.

ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿರುವ ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯ ಅಂಗವಾಗಿ ಸರ್ಕಾರ ಕಳೆದ ನವೆಂಬರ್‌ನಲ್ಲಿ ಒಂದು ವರ್ಷ ಅವಧಿಯ ಆಚರಣೆಯನ್ನೂ ಆರಂಭಿಸಿತ್ತು. ಈ ಕ್ರಮವನ್ನು ಕಾಂಗ್ರೆಸ್‌ ಟೀಕಿಸಿದ್ದು, ಬಿಜೆಪಿ ರಾಷ್ಟ್ರೀಯ ಸಂಕೇತವನ್ನು ರಾಜಕೀಯಗೊಳಿಸುತ್ತಿದೆ ಎಂದು ಆರೋಪಿಸಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹಿರಿಯ ನಾಯಕರು ‘ವಂದೇ ಮಾತರಂ’ ಹಾಡುವ ವೇಳೆ ಸನ್ನೆ ಮಾಡುತ್ತಿರುವಂತೆ ಕಾಣಿಸುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ಹರಡಿ ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

PM Modi's I-Day speech: 'ನಮ್ಮ ಕನಸು, ಸಂಕಲ್ಪಗಳು ದೊಡ್ಡದಾಗಿರಬೇಕು; 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಧಾನಿ ಮೋದಿ-Video

80th Independence Day|ಯುವಜನತೆ ಸಾಮರ್ಥ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು: ಪ್ರಧಾನಿ ಮೋದಿ-Video

ಯುವ ಉದ್ಯೋಗ ಸೇತು, ವಿದ್ಯಾರ್ಥಿ ಸಹಾಯಹಸ್ತ, ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ: ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ CM ಡಿ ಕೆ ಶಿವಕುಮಾರ್ ಪ್ರಮುಖ ಘೋಷಣೆಗಳು-Video

'RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ': B L ಸಂತೋಷ್

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು