ಸತ್ಯೇಂದರ್ ಜೈನ್ 
ದೇಶ

ದೆಹಲಿ ಜಲ ಮಂಡಳಿಯಲ್ಲಿ ಭ್ರಷ್ಟಾಚಾರ ಪ್ರಕರಣ: AAP ನಾಯಕ ಸತ್ಯೇಂದರ್ ಜೈನ್ ಸೇರಿ ಆರು ಮಂದಿ ಬಂಧನ!

ಆರೋಪಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮೇ 11,2024 ರಂದು ಈ ಎಫ್‌ಐಆರ್ ದಾಖಲಾಗಿತ್ತು ಎಂದು ಭ್ರಷ್ಟಚಾರ ನಿಗ್ರಹ ದಳ ತಿಳಿಸಿದೆ.

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ನಾಯಕ ಹಾಗೂ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಮತ್ತೆ ಅರೆಸ್ಟ್ ಆಗಿದ್ದಾರೆ.

ದೆಹಲಿ ಭ್ರಷ್ಟಾಚಾರ ನಿಗ್ರಹ ದಳವು (ACB) ಮಂಗಳವಾರ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಸತ್ಯೇಂದರ್ ಜೈನ್, ಮಾಜಿ ಐಎಎಸ್ ಅಧಿಕಾರಿ ಹಾಗೂ ದೆಹಲಿ ಜಲ ಮಂಡಳಿಯ ಸಿಇಒ ಉದಿತ್ ಪ್ರಕಾಶ್ ರೈ, ಗುತ್ತಿಗೆ ಆಧಾರಿತ ಮಾಜಿ ಸಲಹೆಗಾರ ಅಂಕಿತ್ ಶ್ರೀವಾಸ್ತವ ಮತ್ತು ಮೂವರು ಖಾಸಗಿ ವ್ಯಕ್ತಿಗಳು ಸೇರಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿದೆ.

ಇವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮೇ 11,2024 ರಂದು ಈ ಎಫ್‌ಐಆರ್ ದಾಖಲಾಗಿತ್ತು ಎಂದು ಭ್ರಷ್ಟಚಾರ ನಿಗ್ರಹ ದಳ ತಿಳಿಸಿದೆ.

ಇದು ದೆಹಲಿ ಜಲ ಮಂಡಳಿಯ ಒಳಚರಂಡಿ ಸಂಸ್ಕರಣಾ ಘಟಕಗಳ (STP) ವಿಸ್ತರಣೆ ಮತ್ತು ಉನ್ನತೀಕರಣಕ್ಕಾಗಿ ಹೊರಡಿಸಲಾದ ಟೆಂಡರ್‌ಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಬೃಹತ್ ಪ್ರಮಾಣದ ಅಕ್ರಮಗಳು, ಟೆಂಡರ್ ಷರತ್ತುಗಳಲ್ಲಿನ ತಿರುಚುವಿಕೆ ಮತ್ತು ಕ್ರಿಮಿನಲ್ ಪಿತೂರಿಗೆ ಸಂಬಂಧಿಸಿದ ಪ್ರಕರಣವಾಗಿದೆ.

ಇತರ ಕಂಪನಿಗಳ ಸ್ಪರ್ಧೆಯನ್ನು ಸೀಮಿತಗೊಳಿಸುವ ಮೂಲಕ, ನಿರ್ದಿಷ್ಟ ತಂತ್ರಜ್ಞಾನ ಮತ್ತು 'ಮೆಸರ್ಸ್ ಯುರೋಟೆಕ್ ಎನ್ವಿರಾನ್ಮೆಂಟ್ ಪ್ರೈವೇಟ್ ಲಿಮಿಟೆಡ್' ಎಂಬ ಖಾಸಗಿ ಕಂಪನಿಗೆ ಅನುಕೂಲವಾಗುವಂತೆ ಟೆಂಡರ್‌ನ ತಾಂತ್ರಿಕ ವಿವರಣೆಯನ್ನು ರೂಪಿಸಲಾಗಿದೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಸಂಸ್ಕರಿಸಿದ ತ್ಯಾಜ್ಯ ನೀರಿಗೆ (effluent) ಸಂಬಂಧಿಸಿದ ಅಗತ್ಯ ಮಾನದಂಡಗಳನ್ನು ಟೆಂಡರ್‌ನಿಂದ ಕೈಬಿಡಲಾಗಿದೆ ಮತ್ತು ತಾಂತ್ರಿಕ ವಿವರಣೆಗಳನ್ನು ಬದಲಾಯಿಸಲಾಗಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಭಾರಿ ಆರ್ಥಿಕ ಹೊರೆ ಉಂಟಾಗಿದೆ ಎಂದು ಆರೋಪಿಸಲಾಗಿದೆ.

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?

ಅಮೆರಿಕ ಯೋಧನ ತಲೆಗೆ 30 ಸಾವಿರ ಡಾಲರ್ ಬಹುಮಾನ: ಇರಾನ್‌ನಿಂದ ವಿಜಯನಗರದ ಅರಸನ ತಂತ್ರ ಬಳಕೆ!