ಅಭಿಜೀತ್ ದೀಪ್ಕೆ - ರಾಮದಾಸ್ ಅಠಾವಳೆ 
ದೇಶ

‘ಸರ್ಕಾರ ನಮ್ಮದು…’: BJP ನೇತೃತ್ವದ NDA ಸೇರುವಂತೆ ಅಭಿಜೀತ್ ದೀಪ್ಕೆಗೆ ಕೇಂದ್ರ ಸಚಿವರಿಂದ ಬಿಗ್ ಆಫರ್!

ಕೇಂದ್ರ ಸಚಿವರ ಈ ಪ್ರಸ್ತಾಪಕ್ಕೆ ಅಭಿಜೀತ್ ದೀಪ್ಕೆ ಅವರು ಇನ್ನೂ ಪ್ರತಿಕ್ರಿಯಿಸಿಲ್ಲ. ಆದರೆ ಸಿಜೆಪಿ ನಾಯಕ ಈ ಹಿಂದೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದನ್ನು ತಳ್ಳಿಹಾಕಿದ್ದರು.

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ಸೇರುವಂತೆ ಕೇಂದ್ರ ಸಚಿವರೊಬ್ಬರು ಆಹ್ವಾನ ನೀಡಿದ್ದಾರೆ.

"ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕನಸನ್ನು ನನಸಾಗಿಸಲು" ಸಿಜೆಪಿ ಸಂಚಾಲಕ ತಮ್ಮ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ) ಗೆ ಸೇರುವುದನ್ನು ಪರಿಗಣಿಸಬೇಕು ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಸೋಮವಾರ ಹೇಳಿದ್ದಾರೆ.

ಕೇಂದ್ರ ಸಚಿವರ ಈ ಪ್ರಸ್ತಾಪಕ್ಕೆ ಅಭಿಜೀತ್ ದೀಪ್ಕೆ ಅವರು ಇನ್ನೂ ಪ್ರತಿಕ್ರಿಯಿಸಿಲ್ಲ. ಆದರೆ ಸಿಜೆಪಿ ನಾಯಕ ಈ ಹಿಂದೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದನ್ನು ತಳ್ಳಿಹಾಕಿದ್ದರು ಮತ್ತು ರಾಜಕೀಯ ಹಾಗೂ ಚುನಾವಣಾ ವ್ಯವಸ್ಥೆಯಲ್ಲಿ ನಂಬಿಕೆ ಕಳೆದುಕೊಂಡಿರುವುದಾಗಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಠಾವಳೆ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕನಸನ್ನು ನನಸಾಗಿಸಲು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಮ್ಮ ಆರ್‌ಪಿಐ(ಎ) ಪಕ್ಷಕ್ಕೆ ಸೇರುವುದನ್ನು ಪರಿಗಣಿಸಬೇಕು ಮತ್ತು ಸಮಾಜ ಹಾಗೂ ಪಕ್ಷವನ್ನು ಬಲಪಡಿಸಲು ಸಹಾಯ ಮಾಡಬೇಕು ಎಂದು ಬಹಿರಂಗವಾಗಿಯೇ ಆಹ್ವಾನ ನೀಡಿದ್ದಾರೆ.

"ತಪ್ಪು ಮಾಡುವ ಜನ ಶಿಕ್ಷೆಗೆ ಗುರಿಯಾಗಬೇಕು ಎಂದು ನಂಬುವ ಸರ್ಕಾರ ನಮ್ಮದು. ಆದ್ದರಿಂದ ಅವರು ಆಡಳಿತದ ಬಣಕ್ಕೆ ಸೇರಬೇಕು" ಎಂದು ಅಠವಳೆ ಹೇಳಿದರು.

ಗಮನಾರ್ಹ ವಿಚಾರವೆಂದರೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ) ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಭಾಗವಾಗಿದೆ.

“ಅಭಿಜೀತ್ ದೀಪ್ಕೆ ಅಂಬೇಡ್ಕರ್ ವಾದಿ ಎಂದು ನಾನು ಭಾವಿಸುತ್ತೇನೆ. ಅವರು ಸಕ್ರಿಯವಾಗಿದ್ದಾರೆ ಮತ್ತು ಯುವಕ. ಅವರು ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ(ಎ) ಗೆ ಸೇರುವುದನ್ನು ಪರಿಗಣಿಸಬೇಕು” ಎಂದು ಕೇಂದ್ರ ಸಚಿವ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು

ಪಬ್‌ನಲ್ಲಿ ಶಾಕಿಂಗ್ ಘಟನೆ: ಬಾರ್‌ಟೆಂಡರ್ ಯುವತಿಗೆ ಚಾಕುವಿನಿಂದ ಇರಿದು ಕೊಂದ ಸಹೋದ್ಯೋಗಿ; ಭಯಾನಕ ಕೃತ್ಯ CCTVಯಲ್ಲಿ ಸೆರೆ! Video