ಮಲ್ಲಿಕಾರ್ಜುನ ಖರ್ಗೆ - ಸೋನಿಯಾ ಗಾಂಧಿ 
ದೇಶ

'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು

ಶನಿವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ನಿಲ್ಲಿಸುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ನವದೆಹಲಿ: ಪಕ್ಷದ ಪ್ರಧಾನ ಕಚೇರಿಯಲ್ಲಿ ಮತ್ತು ನಂತರ ಗೋವಾದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಪಠಣದ ಕುರಿತು ಎದ್ದಿರುವ ವಿವಾದಗಳ ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಯಾವ ಆಧಾರದ ಮೇಲೆ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ರಾಷ್ಟ್ರಗೀತೆಯನ್ನು ಅದರ ಹಿಂದಿನ ಆವೃತ್ತಿಯಲ್ಲಿ ಹಾಡುವುದು ಅಪರಾಧವಾಗಿದ್ದರೆ, ಮಹಾತ್ಮ ಗಾಂಧಿ, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ವಿರುದ್ಧವೂ ದೂರು ದಾಖಲಿಸಬೇಕು ಎಂದು ಅವರು ಹೇಳಿದರು.

ಶನಿವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ನಿಲ್ಲಿಸುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದ್ದು, ಅವರ ವಿರುದ್ಧ ದೂರು ದಾಖಲಾದ ನಂತರ ಖರ್ಗೆ ಈ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಖರ್ಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ತ್ರಿವರ್ಣ ಧ್ವಜ ಹಾರಿಸಿ, ನಂತರ ವಂದೇ ಮಾತರಂ ಹಾಡಿದರು.

ಗಾಯಕರು ಪೂರ್ಣ ಆವೃತ್ತಿಯೊಂದಿಗೆ ಮುಂದುವರಿಯುತ್ತಿರುವುದನ್ನು ಮೊದಲು ಗಮನಿಸಿದವರು ಸೋನಿಯಾ ಗಾಂಧಿ ಎಂದು ವರದಿಯಾಗಿದೆ. ಅವರು ಖರ್ಗೆ ಕಡೆಗೆ ಸನ್ನೆ ಮಾಡಿ ನಂತರ ಗಾಯಕರೊಂದಿಗೆ ಸಂವಹನ ನಡೆಸಿ ನಿಲ್ಲಿಸುವಂತೆ ಸೂಚಿಸಿದರು ಎನ್ನಲಾಗಿದೆ. ಆದರೆ, ಬಹಳ ಹೊತ್ತಿನಿಂದ ನಿಂತಿದ್ದ ಖರ್ಗೆಗೆ ಕುರ್ಚಿ ವ್ಯವಸ್ಥೆ ಮಾಡುವಂತೆ ಸೋನಿಯಾ ಗಾಂಧಿ ಸನ್ನೆ ಮಾಡಿದ್ದರು ಎಂದು ಕಾಂಗ್ರೆಸ್ ಹೇಳಿದೆ.

'ಇದು ಸುಳ್ಳುಗಳ ಕಂತೆ. ಸೋನಿಯಾ ಗಾಂಧಿ ಹಾಗೆ ಮಾಡಿಲ್ಲ. ನಮ್ಮ ಕಾಂಗ್ರೆಸ್ ಅಧ್ಯಕ್ಷರು ಆರೋಗ್ಯವಾಗಿಲ್ಲ; ಅವರು ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಿಲ್ಲ... ಆದ್ದರಿಂದ ಸೋನಿಯಾ ಗಾಂಧಿ ಅವರು ಖುರ್ಚಿ ವ್ಯವಸ್ಥೆ ಮಾಡುವಂತೆ ಸನ್ನೆ ಮಾಡಿದರು. ವಂದೇ ಮಾತರಂ ಹಾಡುವುದನ್ನು ನಿಲ್ಲಿಸುವಂತೆ ಅಲ್ಲ' ಎಂದು ಕಾಂಗ್ರೆಸ್ ನಾಯಕ ಉದಿತ್ ರಾಜ್ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ವಂದೇ ಮಾತರಂ ಗೀತೆಗೆ ಅಡ್ಡಿಪಡಿಸಲು ಯತ್ನಿಸಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸುವಂತೆ ಕೋರಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಸೋಮವಾರ ದೆಹಲಿ ಪೊಲೀಸರಿಗೆ ದೂರು ದಾಖಲಿಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, 'ಸರಿ, ನೋಡಿ, ಅವರು ಏನೆಂದು ದೂರು ನೀಡಿದ್ದಾರೆ? ನಾವು ಮಹಾತ್ಮ ಗಾಂಧಿ ಹಾಡಿದ ವಂದೇ ಮಾತರಂ ಅನ್ನು ಹಾಡಿದ್ದೇವೆ. ಜವಾಹರಲಾಲ್ ನೆಹರು ಹಾಡಿದ್ದನ್ನು ನಾವು ಹಾಡಿದ್ದೇವೆ. ಕಳೆದ 18 ವರ್ಷಗಳಿಂದ, ವಾಜಪೇಯಿ ನೇತೃತ್ವದ ಅವರ ಕೇಂದ್ರ ಸರ್ಕಾರ ಹಾಡಿದ್ದನ್ನು ಒಳಗೊಂಡಂತೆ, ಅವರು ಹಾಡಿದ್ದನ್ನು ನಾವು ಹಾಡಿದ್ದೇವೆ. ಮತ್ತು ಇಷ್ಟು ವರ್ಷಗಳಿಂದ ಹಾಡುತ್ತಿರುವ ಅದೇ ವಂದೇ ಮಾತರಂ ಗೀತೆಯನ್ನೇ ಅವರು (ಪ್ರಧಾನಿ ನರೇಂದ್ರ ಮೋದಿ) 12 ವರ್ಷಗಳ ಕಾಲ, ಮುಖ್ಯಮಂತ್ರಿಯಾಗಿ ಹಾಡಿದ್ದಾರೆ' ಎಂದು ಹೇಳಿದರು.

'ಇದು ಅಪರಾಧವಾಗಿದ್ದರೆ, ಅವರು 18 ವರ್ಷಗಳಿಂದ ಈ ಅಪರಾಧವನ್ನು ಮಾಡುತ್ತಿದ್ದಾರೆ. ಇದು ಅಪರಾಧವಾಗಿದ್ದರೆ, ಮಹಾತ್ಮ ಗಾಂಧಿಯವರ ವಿರುದ್ಧ ಪ್ರಕರಣ ದಾಖಲಿಸಿ. ಇದು ಅಪರಾಧವಾಗಿದ್ದರೆ, ನೆಹರೂ ವಿರುದ್ಧವೂ ಪ್ರಕರಣ ದಾಖಲಿಸಿ' ಎಂದು ಅವರು ಹೇಳಿದರು.

ಅನೇಕ ವಿಮರ್ಶಕರು ಹುಟ್ಟುವ ಮೊದಲೇ ಕಾಂಗ್ರೆಸ್‌ ಸದ್ಯದ ರಾಷ್ಟ್ರೀಯ ಗೀತೆಗಳ ಕುರಿತು ನಿರ್ಣಯವನ್ನು ಅಂಗೀಕರಿಸಿತ್ತು ಎಂದು ಖರ್ಗೆ ಹೇಳಿದರು.

ಸೋಮವಾರ ಗೋವಾದಲ್ಲಿ ಖರ್ಗೆ ಅವರು ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಿದಾಗ ವಿವಾದ ಮತ್ತಷ್ಟು ಭುಗಿಲೆದ್ದಿತು. ಗೋವಾ ಕಾಂಗ್ರೆಸ್ ಸಮಾವೇಶ ಪ್ರಾರಂಭವಾಗುವ ಮೊದಲು ಖರ್ಗೆ ಮತ್ತು ಇತರ ನಾಯಕರ ಪಠಣ ನಡೆಯಿತು.

ಈ ವರ್ಷದ ಆರಂಭದಲ್ಲಿ, ಕೇಂದ್ರವು ಸಾರ್ವಜನಿಕ ಸಭೆಗಳು, ಶಾಲೆಗಳು ಮತ್ತು ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ಇತರ ಸ್ಥಳಗಳಲ್ಲಿ ವಂದೇ ಮಾತರಂ ಅನ್ನು ಸಂಪೂರ್ಣವಾಗಿ ಹಾಡುವುದನ್ನು ಕಡ್ಡಾಯಗೊಳಿಸಿದೆ. ವಂದೇ ಮಾತರಂ ಹಾಡುವಿಕೆಯನ್ನು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುವುದು ಅಥವಾ ತಡೆಯುವುದನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

ಪಬ್‌ನಲ್ಲಿ ಶಾಕಿಂಗ್ ಘಟನೆ: ಬಾರ್‌ಟೆಂಡರ್ ಯುವತಿಗೆ ಚಾಕುವಿನಿಂದ ಇರಿದು ಕೊಂದ ಸಹೋದ್ಯೋಗಿ; ಭಯಾನಕ ಕೃತ್ಯ CCTVಯಲ್ಲಿ ಸೆರೆ! Video

'ಸ್ವಂತ ಕೆಲಸದ ಮೇಲೆ ನಂಬಿಕೆ ಇಲ್ಲವೇ?': ಸಚಿವರು, ಅಧಿಕಾರಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ?; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ

ಮಹಾರಾಷ್ಟ್ರ: ಅಭಿಜೀತ್ ದೀಪ್ಕೆ ಪ್ರತಿಭಟನೆಯ ಎಚ್ಚರಿಕೆ, ಶಾಲಾ ಪ್ರಾಂಶುಪಾಲರ ಅಮಾನತು! Video