ರಾಮಗರ್ ಮೋಹನಗರ್ ಗೋಸಾಯಿ 
ದೇಶ

ಜಂತರ್ ಮಂತರ್‌ ಪ್ರತಿಭಟನೆ ಎಫೆಕ್ಟ್: ಮೋದಿ ಬೆಂಬಲಿಸಲು ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಪೊಲೀಸ್‌ ಕಾನ್‌ಸ್ಟೆಬಲ್‌!

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲ ನೀಡುವುದಕ್ಕಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ರಾಮಗರ್ ಮೋಹನಗರ್ ಗೋಸಾಯಿ ಅವರು ಹೇಳಿದ್ದಾರೆ.

ಗಾಂಧಿನಗರ: ಇತ್ತೀಚೆಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ)ದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ವಿರೋಧಿ ನಿರೂಪಣೆಗಳು ಕಂಡುಬಂದವು. ಇದನ್ನು ಎದುರಿಸಲು ಬಿಜೆಪಿಗೆ ನೈತಿಕ ಬೆಂಬಲ ಘೋಷಿಸಿ ಗುಜರಾತ್ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಇತ್ತೀಚಿನ ರಾಜಕೀಯ ಬೆಳವಣಿಗೆಗಳು ತನಗೆ ಸರ್ಕಾರಿ ಹುದ್ದೆ ತ್ಯಾಗ ಮಾಡಲು ಪ್ರೇರೇಪಿಸಿವೆ ಎಂದು ಗುಜರಾತ್ ನ ಗಾಂಧಿಧಾಮ್‌ನ ಪೂರ್ವ ಕಚ್‌ನಲ್ಲಿರುವ ಅದೇಸರ್ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿರುವ ರಾಮಗರ್ ಮೋಹನಗರ್ ಗೋಸಾಯಿ ಅವರು ಹೇಳಿಕೊಂಡಿದ್ದಾರೆ.

2029ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲ ನೀಡುವುದಕ್ಕಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ರಾಮಗರ್ ಮೋಹನಗರ್ ಗೋಸಾಯಿ ಅವರು ಹೇಳಿದ್ದಾರೆ.

ಈ ಕುರಿತು ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಗೋಸಾಯಿ ಅವರು, ಪೊಲೀಸ್ ಇಲಾಖೆಯಲ್ಲಿ ಸ್ಥಾನ ಪಡೆಯಲು ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ನಂತರ ಕೆಲಸ ಸಿಕ್ಕಿತು. ಆದರೆ, ಈಗ ಸೇವೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

ಜಂತರ್ ಮಂತರ್ ಪ್ರತಿಭಟನೆಯ ನಂತರ ಪ್ರಧಾನಿಯವರು ದೇಶದ ಯುವಜನರ ಪರವಾಗಿ ನಿರ್ಧಾರಗಳನ್ನು ತೆಗೆದುಕೊಂಡರು. ಇದು ಸರ್ಕಾರಿ ಸೇವೆಗಿಂತ ಹೆಚ್ಚಾಗಿ ನಾಗರಿಕ ಮತ್ತು ಸಾಮಾಜಿಕ-ರಾಜಕೀಯ ಚಟುವಟಿಕೆಗೆ ನನ್ನ ಜೀವನವನ್ನು ಮುಡಿಪಾಗಿಡಲು ಪ್ರೇರೇಪಿಸಿತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಬುರ್ಖಾ ಧರಿಸಿ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ನೆಕ್ಲೆಸ್ ಕದ್ದ ಮಹಿಳೆಯರು; ಖತರ್ನಾಕ್ ಕಳ್ಳಿಯರ "ಕೈ"ಚಳಕ CCTVಯಲ್ಲಿ ಸೆರೆ!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!