ಸ್ವತಂತ್ರ್ಯ ದಿನಾಚರಣೆಯಂದು ವಿಜಯ್ ಪೋಷಕರ ಪಕ್ಕದಲ್ಲಿ ಕುಳಿತ ತ್ರಿಶಾ 
ದೇಶ

ಇಂಥ ಅಸಹ್ಯಕ್ಕೂ ನಿಮ್ಮ ಬಳಿ ಸಮರ್ಥನೆಯಿದೆಯೇ? ಧ್ವಜಾರೋಹಣದ ಜೊತೆ ನಿಮ್ಮ ಘನತೆ ಗಾಳಿಗೆ ಹಾರಿ ಹೋಗಲಿಲ್ಲವೇ?

ಒಂದು ವಿಡಿಯೋದಲ್ಲಿ, ಮುಖ್ಯಮಂತ್ರಿ ವಿಜಯ್ ಅವರು ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುತ್ತಾ ಜೀಪಿನಲ್ಲಿ ಹಾದು ಹೋಗುತ್ತಿದ್ದಾಗ ತ್ರಿಶಾ ಅವರಿಗೆ ನಮಸ್ಕರಿಸುತ್ತಿರುವುದನ್ನು ತೋರಿಸಲಾಗಿದೆ.

ಚೆನ್ನೈ: ನಗರದ ಫೋರ್ಟ್ ಸೇಂಟ್ ಜಾರ್ಜ್‌ನಲ್ಲಿ ನಡೆದ 80 ನೇ ಸ್ವಾತಂತ್ರ್ಯ ದಿನಾಚರಣೆಯ ಅಧಿಕೃತ ಕಾರ್ಯಕ್ರಮದಲ್ಲಿ ನಟಿ ತ್ರಿಷಾ ಕೃಷ್ಣನ್ ಭಾಗವಹಿಸಿದ್ದರು. ತಮಿಳುನಾಡು ಮುಖ್ಯಮಂತ್ರಿ ವಿಜಯ್ ಧ್ವಜಾರೋಹಣ ನೆರವೇರಿಸಿದ ಈ ಸಮಾರಂಭದಲ್ಲಿ ತ್ರಿಶಾ ಮುಂಚೂಣಿಯ ಸಾಲಿನಲ್ಲಿ ಕುಳಿತಿದ್ದರು.

ಒಂದು ವಿಡಿಯೋದಲ್ಲಿ, ಮುಖ್ಯಮಂತ್ರಿ ವಿಜಯ್ ಅವರು ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುತ್ತಾ ಜೀಪಿನಲ್ಲಿ ಹಾದು ಹೋಗುತ್ತಿದ್ದಾಗ ತ್ರಿಶಾ ಅವರಿಗೆ ನಮಸ್ಕರಿಸುತ್ತಿರುವುದನ್ನು ತೋರಿಸಲಾಗಿದೆ.

ಇದನ್ನು ಪ್ರಶ್ನಿಸಿರುವ ಡಿಎಂಕೆ ಸಿಎಂ ಅವರ ಅಧಿಕೃತ ಕಾರ್ಯಕ್ರಮದ ಸಮಯದಲ್ಲಿ ತ್ರಿಶಾಗೆ ಹೇಗೆ ಆಸನ ವ್ಯವಸ್ಥೆ ಮಾಡಲಾಯಿತು ಎಂದು ಕಿಡಿಕಾರಿದೆ. ತನ್ನ ಮುಖವಾಣಿ ಮುರಸೋಲಿಯಲ್ಲಿ ಈ ಬಗ್ಗೆ ಟೀಕಿಸಿರುವ ಡಿಎಂಕೆ ಹೇಗೆ ಸೆಲ್ಯೂಟ್ ವಿನಿಮಯ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದೆ.

ಫೋರ್ಟ್ ಸೇಂಟ್ ಜಾರ್ಜ್‌ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮೊದಲ ಸಾಲಿನಲ್ಲಿ ಕುಳಿತಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ವದಂತಿಯ ಗೆಳತಿ ನಟಿ ತ್ರಿಶಾ ಕೃಷ್ಣನ್ ವಿರುದ್ಧ ಡಿಎಂಕೆ ಹರಿಹಾಯ್ದಿದೆ.

ಹಸಿರು ಬ್ಲೌಸ್‌ನೊಂದಿಗೆ ಹಳದಿ ಸೀರೆಯನ್ನು ಧರಿಸಿದ ತ್ರಿಶಾ, ವಿಜಯ್ ಅವರ ಪೋಷಕರಾದ ಎಸ್‌ಎ ಚಂದ್ರಶೇಖರ್ ಮತ್ತು ಶೋಭಾ ಚಂದ್ರಶೇಖರ್ ಅವರ ಪಕ್ಕದಲ್ಲಿ ಮುಂದಿನ ಸಾಲಿನಲ್ಲಿ ಕುಳಿತಿದ್ದರು.

ವೈರಲ್ ಆಗಿರುವ ವೀಡಿಯೊಗಳಲ್ಲಿ, ಸಮಾರಂಭದಲ್ಲಿ ಮುಖ್ಯಮಂತ್ರಿ ವಿಜಯ್ ಹಾದುಹೋಗುವಾಗ ನಟಿ ತ್ರಿಶಾ ಅವರಿಗೆ ನಮಸ್ಕರಿಸುತ್ತಿರುವುದು ಕಂಡುಬರುತ್ತದೆ. ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ವಿಜಯ್ ಅವರ ಘನತೆ ಗಾಳಿಯಲ್ಲಿ ಹಾರಿಹೋಗಿದೆ.

ಅವರಿಗೆ ಮತ ಹಾಕಿದ ಜನರು ಸಹ ನಾಚಿಕೆಯಿಂದ ಅಥವಾ ಮುಜುಗರದಿಂದ ಅವರನ್ನು ನೋಡಿ ಸಹಿಸಿಕೊಳ್ಳಲು ಸಾಧ್ಯವಾಗಲಿಲ್ಲ, ಒಬ್ಬ ನಟಿಯನ್ನು ಮುಂದಿನ ಸಾಲಿನಲ್ಲಿ ಕೂರಿಸಿ ಇಬ್ಬರೂ ಪರಸ್ಪರ ನಮಸ್ಕರಿಸುತ್ತಿದ್ದರು. ಅಂತಹ ಅಸಭ್ಯತೆ ಮತ್ತು ಅಸಹ್ಯವನ್ನು ಬಹಿರಂಗವಾಗಿ ಸಮರ್ಥಿಸಿಕೊಳ್ಳಬಹುದು ಎಂದು ಭಾವಿಸುವ ವ್ಯಕ್ತಿ ಇಂದು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಬಂದಿದ್ದಾರೆ ಎಂದು ಬರೆದು ಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?

‘Dimagi Naxal’ ವಿವಾದ: ‘ಕಾಂಗ್ರೆಸ್‌ ಮಾವೋವಾದಿ ಪಕ್ಷವಾಗಿ ಬದಲಾಗುತ್ತಿದೆ’: ಕಿರಣ್‌ ರಿಜಿಜು ವಾಗ್ದಾಳಿ

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!