ಘಟನಾ ಸ್ಥಳದಲ್ಲಿ ಪೊಲೀಸರು 
ದೇಶ

ದೆಹಲಿಯಲ್ಲಿ ಸಿಎನ್‌ಜಿ ಸಿಲಿಂಡರ್ ಸ್ಫೋಟ: ಒಬ್ಬರ ಸಾವು, ಆರು ಮಂದಿಗೆ ಗಂಭೀರ ಗಾಯ!

ದೆಹಲಿಯ ಟಿಕ್ರಿ ಕಲನ್ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪಶ್ಚಿಮ ದೆಹಲಿಯ ಬಾಬಾ ಹರಿದಾಸ್ ಕಾಲೋನಿಯ ನಿವಾಸಿ ಮನೀಶ್ ಎಂದು ಗುರುತಿಸಲಾಗಿದೆ. ಅವರಿಗೆ 25 ವರ್ಷ ವಯಸ್ಸಾಗಿತ್ತು.

ನವದೆಹಲಿ: ದೆಹಲಿಯ ಇಂಧನ ಕೇಂದ್ರವೊಂದರಲ್ಲಿ ಟ್ರಕ್‌ನ ಸಿಎನ್‌ಜಿ ಸಿಲಿಂಡರ್‌ಗೆ ಅನಿಲ ತುಂಬಿಸುವಾಗ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ದೆಹಲಿಯ ಟಿಕ್ರಿ ಕಲನ್ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪಶ್ಚಿಮ ದೆಹಲಿಯ ಬಾಬಾ ಹರಿದಾಸ್ ಕಾಲೋನಿಯ ನಿವಾಸಿ ಮನೀಶ್ ಎಂದು ಗುರುತಿಸಲಾಗಿದೆ. ಅವರಿಗೆ 25 ವರ್ಷ ವಯಸ್ಸಾಗಿತ್ತು.

ದೆಹಲಿಯ ಹೊರವಲಯ ಡಿಸಿಪಿ (DCP)ಅವರ ಪ್ರಕಾರ, ಗಾಯಗೊಂಡಿರುವ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯ ದೊಡ್ಡ ತಂಡಗಳನ್ನು ನಿಯೋಜಿಸಲಾಗಿದೆ.

ಟ್ರಕ್‌ನ ಸಿಎನ್‌ಜಿ ಸಿಲಿಂಡರ್‌ಗೆ ಅನಿಲ ತುಂಬಿಸುತ್ತಿದ್ದ ವ್ಯಕ್ತಿಯೇ ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಡಿಸಿಪಿ ಹೇಳಿದ್ದಾರೆ.

ಸ್ಫೋಟದ ಸಮಯದಲ್ಲಿ ಹತ್ತಿರದಲ್ಲೇ ನಿಂತಿದ್ದು ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

'Digital arrest' ವಂಚನೆ ತಡೆಗೆ ಸಿಮ್ ಕಾರ್ಡ್ ವಿತರಣೆ ಬಿಗಿಗೊಳಿಸಲಿದೆ ಸರ್ಕಾರ; ಇನ್ಮುಂದೆ ಖರೀದಿಗೆ ನಿರ್ಬಂಧ, ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ!

ಹಗಲು ರಾತ್ರಿ ನೀರಿನಲ್ಲೇ ವಾಸ: ಇಕ್ಬಾಲ್ ನೆರವಿಗೆ ಅನಂತ್ ಅಂಬಾನಿ, ಮುಂಬೈಗೆ ಏರ್‌ಲಿಫ್ಟ್!

ಶ್ರೀನಗರಕ್ಕೆ ಭಾರತದಲ್ಲಿನ US ರಾಯಭಾರಿ ಸೆರ್ಗಿಯೊ ಮೊದಲ ಭೇಟಿ: ಕಾಶ್ಮೀರದ ಸೌಂದರ್ಯಕ್ಕೆ ಫಿದಾ, ಅಮೆರಿಕದ ಪ್ರಯಾಣ ಸಲಹೆ ಬದಲಾವಣೆಯ ಸುಳಿವು!