ಸಜ್ಜನ್ ಕುಮಾರ್ 
ದೇಶ

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಜೈಲಿನಲ್ಲೇ ನಿಧನ!

ಡಿಸೆಂಬರ್ 17, 2018 ರಂದು ದೆಹಲಿ ಹೈಕೋರ್ಟ್ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ನಂತರ 1984ರ ನವಂಬರ್ 1 ರಂದು ದೆಹಲಿಯಲ್ಲಿ ನಡೆದ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರ ಆರೋಗ್ಯ ತೀವ್ರ ಹದಗೆಟ್ಟ ನಂತರ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಕಾಂಗ್ರೆಸ್ ನಾಯಕ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಸಜ್ಜನ್ ಕುಮಾರ್ ಅವರಿಗೆ 80 ವರ್ಷ ವಯಸ್ಸಾಗಿತ್ತು.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ, 1984, ನವೆಂಬರ್ 1 ಮತ್ತು 2 ರಂದು ಪಾಲಂ ಕಾಲೋನಿ ಪ್ರದೇಶದಲ್ಲಿ ನಡೆದ ಗಲಭೆಯ ಸಂದರ್ಭದಲ್ಲಿ ಐದು ಜನರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಸಜ್ಜನ್ ಕುಮಾರ್ ತಪ್ಪಿತಸ್ಥ ಎಂದು ಹೈಕೋರ್ಟ್ ಘೋಷಿಸಿತ್ತು.

ಡಿಸೆಂಬರ್ 17, 2018 ರಂದು ದೆಹಲಿ ಹೈಕೋರ್ಟ್ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಶಿಕ್ಷೆಯನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಮೇಲ್ಮನವಿ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಡಿಗೆ ಬೆಂಕಿ ಹಚ್ಚಿ, ಶಿಬಿರಗಳನ್ನೇ ಸ್ಫೋಟಿಸಿದ ಕಳ್ಳಬೇಟೆಗಾರರು: ಚಾಮರಾಜನಗರ ಎನ್‌ಕೌಂಟರ್ ಪ್ರತಿಕಾರಕ್ಕೆ 10 ಎಕರೆ ಅರಣ್ಯವೇ ಬಲಿ!

ದಾವಣಗೆರೆ: ಇಬ್ಬರು ಮಕ್ಕಳ ಸಹಿತ ದಂಪತಿ ಅನುಮಾನಾಸ್ಪದವಾಗಿ ನಾಪತ್ತೆ; ಮನೆಯಲ್ಲಿ ಪತ್ರ ಪತ್ತೆ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: ಶಿಕ್ಷೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ Tehelka ಮಾಜಿ ಸಂಪಾದಕ ತರುಣ್ ತೇಜಪಾಲ್

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ: ಕಾಂಗ್ರೆಸ್ ನಾಯಕರ ಮೌನಕ್ಕೆ ಮಲ್ಲಿಕಾರ್ಜುನ ಖರ್ಗೆ ಬೇಸರ, ‘ನನಗೆ ನೋವಾಗಿದೆ’ ಎಂದ ಅಧ್ಯಕ್ಷ..!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟಿದ್ದ ವ್ಯಕ್ತಿಯ ಬಂಧನ