ಬಂದ್ ಆಗಿರುವ ಬ್ಯಾಂಕ್ ಶಾಖೆ (ಸಂಗ್ರಹ ಚಿತ್ರ) online desk
ದೇಶ

ಸೆಪ್ಟೆಂಬರ್ 11 ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ಸಾಧ್ಯತೆ

ಸೆಪ್ಟೆಂಬರ್ 11 ಶುಕ್ರವಾರ, ಮತ್ತು ನಂತರದ ಎರಡು ದಿನಗಳು ಬ್ಯಾಂಕ್ ರಜಾದಿನಗಳಾಗಿವೆ. ಸೆಪ್ಟೆಂಬರ್ 14 ಗಣೇಶ ಚತುರ್ಥಿಯಂದು ಕೆಲವು ರಾಜ್ಯಗಳಲ್ಲಿ ಬ್ಯಾಂಕ್ ಗಳಿಗೆ ರಜೆ ದಿನವಾಗಿದೆ.

ನವದೆಹಲಿ: ಪಿಂಚಣಿ ಸಂಬಂಧಿತ ಸಮಸ್ಯೆಗಳು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ.11 ರಂದು ದೇಶಾದ್ಯಂತ ಮುಷ್ಕರ ನಡೆಸಲು ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನಿರ್ಧರಿಸಿದೆ.

5 ದಿನಗಳ ಬ್ಯಾಂಕಿಂಗ್ ನೀತಿ ಅನುಷ್ಠಾನದಲ್ಲಿನ ವಿಳಂಬ, ಕಾರ್ಯಕ್ಷಮತೆಗೆ ಸಂಬಂಧಿಸಿದ ಪ್ರೋತ್ಸಾಹಕ ಯೋಜನೆಯ ಮೇಲಿನ ಭಿನ್ನಾಭಿಪ್ರಾಯಗಳು ಮತ್ತು ಪಿಂಚಣಿ ಸಂಬಂಧಿತ ಸಮಸ್ಯೆಗಳು ಬೇಡಿಕೆಗಳಲ್ಲಿ ಸೇರಿವೆ. ಮುಷ್ಕರ ನಡೆದರೆ, ದೇಶದ ಹಲವು ಭಾಗಗಳಲ್ಲಿ ನಾಲ್ಕು ದಿನಗಳವರೆಗೆ ಬ್ಯಾಂಕಿಂಗ್ ಸೇವೆಗಳು, ವಿಶೇಷವಾಗಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ, ಪರಿಣಾಮ ಬೀರುತ್ತವೆ.

ಸೆಪ್ಟೆಂಬರ್ 11 ಶುಕ್ರವಾರ, ಮತ್ತು ನಂತರದ ಎರಡು ದಿನಗಳು ಬ್ಯಾಂಕ್ ರಜಾದಿನಗಳಾಗಿವೆ. ಸೆಪ್ಟೆಂಬರ್ 14 ಗಣೇಶ ಚತುರ್ಥಿಯಂದು ಕೆಲವು ರಾಜ್ಯಗಳಲ್ಲಿ ಬ್ಯಾಂಕ್ ಗಳಿಗೆ ರಜೆ ದಿನವಾಗಿದೆ.

9 ಬ್ಯಾಂಕ್ ನೌಕರರ ಮತ್ತು ಅಧಿಕಾರಿಗಳ ಸಂಘಗಳ ಒಕ್ಕೂಟವಾದ UFBU, ಸೆಪ್ಟೆಂಬರ್ 28 ರಿಂದ ಪ್ರಾರಂಭವಾಗುವ ಮೂರು ದಿನಗಳ ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿವೆ. ತಮ್ಮ ಬೇಡಿಕೆಗಳು ಸರ್ಕಾರ ಮತ್ತು ಬ್ಯಾಂಕ್ ಆಡಳಿತಕ್ಕೆ ಕೇಳಿಸದೇ ಇದ್ದರೆ ಅಕ್ಟೋಬರ್ 26 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಹ ಅವರು ನಿರ್ಧರಿಸಿದ್ದಾರೆ.

ತಮ್ಮ ಪ್ರಮುಖ ಬೇಡಿಕೆಗಳ ಬಗ್ಗೆ ಸರ್ಕಾರದ 'ನಕಾರಾತ್ಮಕ ವರ್ತನೆ' ತೋರಿದೆ ಎಂದು ಒಕ್ಕೂಟಗಳು ಹೇಳಿದ್ದು, ಭಾನುವಾರ ನಡೆದ ಸಭೆಯಲ್ಲಿ ಮುಷ್ಕರದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು UFBU ಹೇಳಿಕೆಯಲ್ಲಿ ತಿಳಿಸಿದೆ.

ಐದು ದಿನಗಳ ಬ್ಯಾಂಕಿಂಗ್ ಕುರಿತು, ಭಾರತೀಯ ಬ್ಯಾಂಕುಗಳ ಸಂಘ (IBA) ಮಾರ್ಚ್ 8, 2024 ರಂದು ಸಹಿ ಮಾಡಿದ 12 ನೇ ಒಪ್ಪಂದ/9 ನೇ ಜಂಟಿ ಟಿಪ್ಪಣಿಯ ಭಾಗವಾಗಿ ಪ್ರಸ್ತಾವನೆಗೆ ಒಪ್ಪಿಕೊಂಡಿರುವುದಾಗಿ ಹೇಳಿದೆ. ಇದರ ಅಡಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಕೆಲಸದ ಸಮಯವನ್ನು 40 ನಿಮಿಷಗಳಷ್ಟು ಹೆಚ್ಚಿಸಲಾಗುತ್ತದೆ.

ನಂತರ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಆದರೆ ಎರಡು ವರ್ಷಗಳಿಗೂ ಹೆಚ್ಚು ಕಾಲ ಬೇಡಿಕೆ ಈಡೇರದೇ ಹಾಗೆಯೇ ಉಳಿದಿದೆ ಎಂದು ಅದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!