ಬಾಬಾ ರಾಮ್​ದೇವ್ - ಕಂಗನಾ 
ದೇಶ

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

"ಬಾಬಾ ರಾಮದೇವ್ ಬಗ್ಗೆ ಹೇಳುವುದಾದರೆ, ಅವರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ಅವರು ತಾವು ಧರಿಸುವ ಕೇಸರಿ ನಿಲುವಂಗಿಗಳನ್ನು ಅವಮಾನಿಸಿದ್ದಾರೆ" ಎಂದು ಕಂಗನಾ ಕಿಡಿ ಕಾರಿದ್ದಾರೆ.

ನವದೆಹಲಿ: ಯೋಗ ಗುರು ಬಾಬಾ ರಾಮದೇವ್ ವಿರುದ್ಧ ವಾಗ್ದಾಳಿ ಮುಂದುವರೆಸಿದ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು, ಮಹಿಳೆಯರ ಬಗ್ಗೆ ಅವರು ನೀಡಿರುವ ಹೇಳಿಕೆಗಳ ಬಗ್ಗೆ "ಆಲೋಚಿಸಬೇಕು", ಕೇಸರಿ ನಿಲುವಂಗಿ ಧರಿಸಿದ ಗುರು "ಸಭ್ಯತೆಯ ಎಲ್ಲಾ ಮಿತಿಗಳನ್ನು" ಮೀರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವಕರನ್ನು "ಜನರೇಷನ್ ಗಟರ್" ಎಂದು ಟೀಕಿಸಿದ್ದ ಕಂಗನಾ ರಣಾವತ್ ಅವರನ್ನು ಯೋಗ ಗುರು ಬಾಬಾ ರಾಮದೇವ್ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ 'ಆಕೆಯ ಹಿಂದಿನ ಚಟುವಟಿಕೆಗಳು ಹೇಗಿದ್ದವು?' ಎಂದು ಪ್ರಶ್ನಿಸಿದ್ದರು. ಇದು ಇಬ್ಬರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

"ಬಾಬಾ ರಾಮದೇವ್ ಬಗ್ಗೆ ಹೇಳುವುದಾದರೆ, ಅವರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ಮಹಿಳೆಯ ಬಗ್ಗೆ ಅವರು ಮಾಡಿರುವ ಕಾಮೆಂಟ್‌ಗಳು ಸಮಾಜವೇ ನಾಚಿಕೆಪಡುವಂತಿವೆ. ಅವರು ತಾವು ಧರಿಸುವ ಕೇಸರಿ ನಿಲುವಂಗಿಗಳನ್ನು ಅವಮಾನಿಸಿದ್ದಾರೆ" ಎಂದು ಕಂಗನಾ ಕಿಡಿ ಕಾರಿದ್ದಾರೆ.

ಇದಕ್ಕೂ ಮೊದಲು, ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದ ಕಂಗನಾ, ತಾನು ರಾಮದೇವ್‌ಗಿಂತ "ಉತ್ತಮ ವ್ಯಕ್ತಿತ್ವ" ಹೊಂದಿದ್ದೇನೆ ಎಂದು ಹೇಳಿದ್ದರು. ಅಲ್ಲದೆ 'ಬಾಬಾ ಜೀ, ನನ್ನ ಯೌವನ ಅಥವಾ ಬೆಡ್‌ರೂಂ ಬಗ್ಗೆ ಹಗಲುಗನಸು ಕಾಣಬೇಡಿ' ಎಂದು ತಿರುಗೇಟು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ