ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್  
ದೇಶ

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಬದಲಾವಣೆಯಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಹೆಸರುಗಳೂ ಚರ್ಚೆಯಲ್ಲಿವೆ.

ನವದೆಹಲಿ/ಮುಂಬೈ: ಭಾರತೀಯ ಜನತಾ ಪಾರ್ಟಿಯಲ್ಲಿ ದೇಶದ ಮಟ್ಟದಲ್ಲಿ ಹಲವು ಮಹತ್ತರ ಬದಲಾವಣೆಗಳು ಸನ್ನಿಹಿತವಾಗಿದೆ. ಬಿಜೆಪಿ ತನ್ನ 12 ಸದಸ್ಯರ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಸಂಸದೀಯ ಮಂಡಳಿಯನ್ನು ಆಗಸ್ಟ್ 30ರ ಸುಮಾರಿಗೆ ಪುನಾರಚಿಸುವ ಸಾಧ್ಯತೆಯಿದೆ. ಯುವ ನಾಯಕರು ಮತ್ತು ಪ್ರಸ್ತುತ ಅಧಿಕಾರದಲ್ಲಿರುವ ಮೂರರಿಂದ ನಾಲ್ಕು ಮುಖ್ಯಮಂತ್ರಿಗಳನ್ನು ಮಂಡಳಿಗೆ ಸೇರ್ಪಡೆಗೊಳಿಸುವ ಚಿಂತನೆ ಪಕ್ಷದಲ್ಲಿ ನಡೆಯುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬದಲಾವಣೆಯಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಹೆಸರುಗಳೂ ಚರ್ಚೆಯಲ್ಲಿವೆ. ಪಶ್ಚಿಮ ಬಂಗಾಳದ ಸುವೇಂದು ಅಧಿಕಾರಿ ಅವರ ಹೆಸರೂ ಪರಿಶೀಲನೆಯಲ್ಲಿದೆ. ಆದರೆ, ಮೂಲಗಳ ಪ್ರಕಾರ ಯಾವುದೇ ಅಂತಿಮ ನಿರ್ಧಾರವನ್ನು ಇನ್ನೂ ತೆಗೆದುಕೊಳ್ಳಲಾಗಿಲ್ಲ.

ಪ್ರಸ್ತಾವಿತ ಬದಲಾವಣೆಗಳು ಪ್ರಾಮುಖ್ಯತೆ ಪಡೆದುಕೊಂಡಿವೆ, ಏಕೆಂದರೆ ಈ ಮಂಡಳಿಯು ಪ್ರಧಾನಿ ಮತ್ತು ಮುಖ್ಯಮಂತ್ರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶಿಫಾರಸು ಮಾಡುತ್ತದೆ. 2027 ಮತ್ತು 2028ರಲ್ಲಿ ಹಲವಾರು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ನಂತರ 2029ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ.

ಪ್ರಸ್ತುತ ಅಧಿಕಾರದಲ್ಲಿರುವ ಮೂರರಿಂದ ನಾಲ್ಕು ಮುಖ್ಯಮಂತ್ರಿಗಳಿಗೆ ಮಂಡಳಿಯಲ್ಲಿ ಅವಕಾಶ ನೀಡಬಹುದು ಹಾಗೂ ಒಬ್ಬ ಮುಖ್ಯಮಂತ್ರಿಗೆ ಸ್ಥಾನ ನೀಡಲು ಪಕ್ಷದ ಮಾಜಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಮಂಡಳಿಯಿಂದ ಕೈಬಿಡಬಹುದು ಎಂದು ಮೂಲಗಳು ಊಹಿಸಿವೆ.

ಪ್ರಸ್ತುತ ಮಂಡಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಜೆ ಪಿ ನಡ್ಡಾ ಸೇರಿದ್ದಾರೆ.

ಏನನ್ನು ಪರಿಗಣಿಸಲಾಗುತ್ತದೆ?

ಪ್ರಮುಖ ಸಮುದಾಯಗಳು ಮತ್ತು ಪ್ರದೇಶಗಳಿಗೆ ಪ್ರಾತಿನಿಧ್ಯ ನೀಡುವುದನ್ನು ಪರಿಗಣಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಪುನಾರಚಿತ ಮಂಡಳಿಯಲ್ಲಿ ದಕ್ಷಿಣ ಭಾರತದ ನಾಯಕರೊಬ್ಬರು ಸ್ಥಾನ ಪಡೆಯುವ ಸಾಧ್ಯತೆಯಿದೆ. ದೇವೇಂದ್ರ ಫಡ್ನವೀಸ್ ಅವರು ಆರ್‌ಎಸ್‌ಎಸ್‌ನೊಂದಿಗೆ ನಿಕಟ ಸಂಪರ್ಕ ಹೊಂದಿರುವ ಕಾರಣ ಗಮನ ಸೆಳೆಯುತ್ತಿದ್ದಾರೆ. ಕೇಂದ್ರ ರಾಜಕೀಯದಲ್ಲಿ ಅವರನ್ನು ಯುವ ಮುಖವಾಗಿ ಮೇಲಕ್ಕೆ ತರಲು ಆರ್‌ಎಸ್‌ಎಸ್ ಉತ್ಸುಕವಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಪ್ರಸ್ತುತ ಮಹಾರಾಷ್ಟ್ರದಿಂದ ಸಂಸದೀಯ ಮಂಡಳಿಯಲ್ಲಿ ಯಾವುದೇ ಪ್ರಾತಿನಿಧ್ಯವಿಲ್ಲ. ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಹಿಂದೆ ಮಂಡಳಿಯ ಸದಸ್ಯರಾಗಿದ್ದರು.

ಪ್ರಸ್ತುತ, ಯಾವುದೇ ರಾಜ್ಯದ ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿಲ್ಲ. ಆದ್ದರಿಂದ, ದೇವೇಂದ್ರ ಫಡ್ನವೀಸ್ ಅವರ ನೇಮಕಾತಿಯ ಬಗ್ಗೆ ಕೆಲವು ಬಿಜೆಪಿ ನಾಯಕರು ಆಕ್ಷೇಪಣೆ ಮತ್ತು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಹೆಸರು ಹೇಳಲು ಇಚ್ಛಿಸದ ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ದೇವೇಂದ್ರ ಫಡ್ನವೀಸ್ ಅವರಿಗೆ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕರೆ, ಅದು ಅವರ ರಾಷ್ಟ್ರ ರಾಜಕೀಯ ಪ್ರವೇಶಕ್ಕೆ ಹಾದಿ ಸುಗಮಗೊಳಿಸುತ್ತದೆ. ನಿತಿನ್ ಗಡ್ಕರಿ ಅವರ ನಂತರ ದೇವೇಂದ್ರ ಫಡ್ನವೀಸ್ ಆರ್‌ಎಸ್‌ಎಸ್‌ನ ನೆಚ್ಚಿನ ನಾಯಕರಾಗಿರುವುದರಿಂದ ಅವರು ಪ್ರಧಾನಿ ಹುದ್ದೆಯ ಸ್ಪರ್ಧೆಯಲ್ಲೂ ಇರುತ್ತಾರೆ ಎಂದು ಹೇಳಿದ್ದಾರೆ.

ಈ ಪುನಾರಚನೆಯು ಸಾಂಸ್ಥಿಕವಾಗಿಯೂ ಪರಿಣಾಮ ಬೀರಲಿದೆ. ಸಂಸದೀಯ ಮಂಡಳಿ ಪುನಾರಚನೆಯಾದ ನಂತರ ಕೇಂದ್ರ ಚುನಾವಣಾ ಸಮಿತಿ ಮತ್ತು ರಾಷ್ಟ್ರೀಯ ಕಾರ್ಯಾಕಾರಿಣಿಯಲ್ಲೂ ಬದಲಾವಣೆಗಳಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರೀಯ ಕಾರ್ಯಾಕಾರಿಣಿಗೆ ಹೆಚ್ಚಿನ ಯುವ ನಾಯಕರು ಸೇರ್ಪಡೆಯಾಗಬಹುದು.

ಭವಿಷ್ಯದ ನಾಯಕತ್ವ

ಬಿಜೆಪಿ ಈ ಹಿಂದೆ ಸಂಸದೀಯ ಮಂಡಳಿಯನ್ನು ಭವಿಷ್ಯದ ನಾಯಕತ್ವವನ್ನು ಸೂಚಿಸಲು ಬಳಸಿಕೊಂಡಿದೆ. ಅಂದಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರನ್ನು 2006ರಲ್ಲಿ ರಾಜನಾಥ್ ಸಿಂಗ್ ಮಂಡಳಿಯಿಂದ ತೆಗೆದುಹಾಕಿದ್ದರು, ಆದರೆ 2013ರಲ್ಲಿ—ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಒಂದು ವರ್ಷದ ಮೊದಲು—ಮತ್ತೆ ಮಂಡಳಿಗೆ ಸೇರ್ಪಡೆಗೊಳಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಕಡಿವಾಣ: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮನೆಗೆಲಸ ಮಾಡು, ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!