ಗಂಗಾಜಲ ಹಿಡಿದು ಲಂಚದ ಹಣ ಪ್ರಾಮಾಣಿಕ ಹಂಚಿಕೆ ಪ್ರಮಾಣ ಮಾಡಿದ ಶಹಜಹಾನ್‌ಪುರ ಕಾರ್ಪೊರೇಟರ್‌ಗಳು Online Desk
ದೇಶ

ಭ್ರಷ್ಟಾಚಾರದಲ್ಲೂ ಪ್ರಾಮಾಣಿಕತೆ! ಕಮಿಷನ್ ಹಣಕ್ಕಾಗಿ ಗಂಗಾಜಲ ಹಿಡಿದು ಪ್ರಮಾಣ ಮಾಡಿದ ಕಾರ್ಪೊರೇಟರ್‌ಗಳು

ಪವಿತ್ರ ಗಂಗಾಜಲವನ್ನು ಹಿಡಿದು ಭಕ್ತಿ, ಸತ್ಯ ಮತ್ತು ನಿಷ್ಠೆಯ ಪ್ರಮಾಣ ಮಾಡುವುದನ್ನು ನೋಡಿದ್ದೇವೆ. ಆದರೆ, ಇಲ್ಲಿ ಕಾರ್ಪೊರೇಟರ್‌ಗಳು ಲಂಚದ ಹಣವನ್ನು ಸಮಾನವಾಗಿ ಹಂಚಿಕೊಳ್ಳಲು ಹಾಗೂ ಭ್ರಷ್ಟಾಚಾರದಲ್ಲಿ ಒಗ್ಗಟ್ಟಾಗಿರಲು ಇದೇ ಗಂಗಾಜಲವನ್ನು ಸಾಕ್ಷಿಯಾಗಿಟ್ಟುಕೊಂಡು ಶಪಥ ಮಾಡಿದ್ದಾರೆ.

ಶಹಜಹಾನ್‌ಪುರ (ಉತ್ತರ ಪ್ರದೇಶ): ರಾಜಕಾರಣಿಗಳು ಜನಸೇವೆಯೇ ಜನಾರ್ಧನ ಸೇವೆಯನ್ನುತ್ತಾ ಅಧಿಕಾರಕ್ಕೆ ಬರುತ್ತಾರೆ. ಆದರೆ, ಅಧಿಕಾರಕ್ಕೆ ಬಂದ ಮೇಲೆ ಜನರು ಇಲ್ಲ, ಜನಾರ್ದನನೂ ಇಲ್ಲ ಎನ್ನುವ ಮಾತು ಅಕ್ಷರಶಃ ಸತ್ಯ! ಹೌದು, ಉತ್ತರ ಪ್ರದೇಶದ ಶಹಜಹಾನ್‌ಪುರ ಮಹಾನಗರ ಪಾಲಿಕೆಯ ಹಲವು ಕಾರ್ಪೊರೇಟರ್‌ಗಳು ಗಂಗಾಜಲ ಹಿಡಿದು, ಲಂಚದ ಹಣವನ್ನು ತಮ್ಮ ನಡುವೆ ಪ್ರಾಮಾಣಿಕವಾಗಿ ಹಂಚಿಕೊಳ್ಳುವುದಾಗಿ ಪ್ರಮಾಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ವೈರಲ್ ವಿಡಿಯೋ?

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಉತ್ತರ ಪ್ರದೇಶದ ಶಹಜಹಾನ್‌ಪುರ ಮಹಾನಗರ ಪಾಲಿಕೆಯ ಕೆಲವು ಕಾರ್ಪೊರೇಟರ್‌ಗಳು ಒಟ್ಟಿಗೆ ಕುಳಿತುಕೊಂಡು, ಒಬ್ಬರ ಕೈಯಲ್ಲಿ ಗಂಗಾಜಲವಿರುವ ಬಾಟಲಿಯನ್ನು ಹಿಡಿದು ಲಂಚದ ಹಣದ ಹಂಚಿಕೆ ಬಗ್ಗೆ ಪ್ರಮಾಣ ಮಾಡುತ್ತಿರುವುದು ಕಂಡುಬಂದಿದೆ. ಅದರಂತೆ, ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಂದಿರುವ ಕಮಿಷನ್ ಹಣವನ್ನು ಎಲ್ಲರೂ ಸಮಾನವಾಗಿ ಮತ್ತು ಪ್ರಾಮಾಣಿಕವಾಗಿ ಹಂಚಿಕೊಳ್ಳಬೇಕು, ಯಾರೂ ಯಾರಿಗೂ ಮೋಸ ಮಾಡಬಾರದು ಎಂದು ಅವರು ಗಂಗಾಜಲದ ಮೇಲೆ ಆಣೆ ಮಾಡಿದ್ದಾರೆ. ಅದರಲ್ಲೂ, ಈ ವಿಡಿಯೋದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳಾದ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಕಾರ್ಪೊರೇಟರ್‌ಗಳು ಒಟ್ಟಿಗೆ ಇರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಮುಂದುವರೆದು, ವೈರಲ್ ವಿಡಿಯೋದಲ್ಲಿ, ಮಹಾನಗರ ಪಾಲಿಕೆಗೆ ಬರುವ ಹಣವನ್ನು ಎಲ್ಲಾ 60 ಜನ ಸದಸ್ಯರ ನಡುವೆ ಸಮಾನವಾಗಿ ಹಂಚಿಕೊಳ್ಳುವ ಬಗ್ಗೆ ಮತ್ತು ಯಾವುದೇ ಸದಸ್ಯರು ಸಂಕಷ್ಟಕ್ಕೆ ಸಿಲುಕಿದಾಗ ಒಗ್ಗಟ್ಟಾಗಿ ನಿಲ್ಲುವ ಬಗ್ಗೆ ಪ್ರತಿಜ್ಞೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಪ್ರಮಾಣವಚನವನ್ನು ಉಲ್ಲಂಘಿಸಿದ ಓರ್ವ ಪಾಲಿಕೆ ಸದಸ್ಯನನ್ನು, ಇತರರು ದೇಶದ್ರೋಹಿ ಎಂದು ಕರೆದಿರುವುದನ್ನು ಸ್ಪಷ್ಟವಾಗಿ ಕೇಳಬಹುದಾಗಿದೆ. 

ಮತ್ತೊಂದೆಡೆ, ಸಾಮಾನ್ಯವಾಗಿ, ಭ್ರಷ್ಟಾಚಾರವನ್ನು ತಡೆಯಲು ಗಂಗಾಜಲದ ಮೇಲೆ ಆಣೆ ಮಾಡುವುದನ್ನು ಕೇಳಿದ್ದೇವೆ. ಆದರೆ, ಲಂಚದ ಹಣವನ್ನು ಸರಿಯಾಗಿ ಹಂಚಿಕೊಳ್ಳಲು ಗಂಗಾಜಲದ ಮೇಲೆ ಪ್ರಮಾಣ ಮಾಡಿರುವುದನ್ನು ಕಂಡು ಸಾರ್ವಜನಿಕರು ತೀವ್ರ ಆಕ್ರೋಶ ಮತ್ತು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಇನ್ನು, ಈ ವಿಡಿಯೋ ವೈರಲ್ ಬೆನ್ನಲ್ಲೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಜನರಿದ ಕೇಳಿಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)