ನೇಪಾಳ ಭೀಕರ ಪ್ರವಾಹ 
ದೇಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ನೇಪಾಳ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಒಂಬತ್ತು ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆ ವಿಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಿವೆ.

ಕಠ್ಮಂಡು: ಭಾರತದ ನೆರೆರಾಷ್ಟ್ರ ನೇಪಾಳದ ನುವಾಕೋಟ್ ಮತ್ತು ಧಾಡಿಂಗ್ ಜಿಲ್ಲೆಗಳಲ್ಲಿ ಸಂಭವಿಸಿದ ಹಠಾತ್ ಭೀಕರ ಪ್ರವಾಹದಲ್ಲಿ ಒಂಬತ್ತು ಜಲವಿದ್ಯುತ್ ಕೇಂದ್ರಗಳು ಕೊಚ್ಚಿ ಹೋಗಿವೆ.

ನೇಪಾಳ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಒಂಬತ್ತು ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆ ವಿಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಿವೆ. ಕೆಲವು ಸ್ಥಳಗಳಲ್ಲಿ, ಮಣ್ಣು ಮತ್ತು ಬಂಡೆಗಳು ಕುಸಿದ ಪರಿಣಾಮ ಹೆಲವು ಹೆದ್ದಾರಿಗಳು ಬಂದ್ ಆಗಿವೆ.

ಕಠ್ಮಂಡುವಿನ ನಾಗಧುಂಗಾದಿಂದ ಮುಗ್ಲಿಂಗ್‌ಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗವನ್ನು ಅನಿರ್ದಿಷ್ಟಾವಧಿಗೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಹಠಾತ್ ಪ್ರವಾಹದಿಂದ ಒಂಬತ್ತು ಜಲವಿದ್ಯುತ್ ಕೇಂದ್ರಗಳು ಮತ್ತು 9ಕ್ಕೂ ಹೆಚ್ಚು ವಾಣಿಜ್ಯ ಬ್ಯಾಂಕುಗಳ ಶಾಖೆಗಳಪ ನೀರಿನಲ್ಲಿ ಕೊಚ್ಚಿ ಹೋಗಿವೆ.

ನೇಪಾಳದ ರಸುವಾ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಲ್ಲಿ ಸಾವಿನ ಸಂಖ್ಯೆ 165ಕ್ಕೆ ಏರಿಕೆಯಾಗಿದ್ದು, ಕೈಲಾಸ ಮಾನಸ ಸರೋವರ ಯಾತ್ರೆಯಲ್ಲಿದ್ದ ಸುಮಾರು 300 ಭಾರತೀಯರು ಸೇರಿದಂತೆ 500 ವಿದೇಶಿ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ತಿಳಿಸಿದ್ದಾರೆ.

ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪ್ರವಾಹದಿಂದ ಬಾಧಿತರಾದ ಭಾರತೀಯರ ನೆರವು ಮತ್ತು ಮಾಹಿತಿಗಾಗಿ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದೆ. ಎಕ್ಸ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಂತೆ, +977 985 131 6807 ಅಥವಾ +977 970 910 7500 ಸಂಖ್ಯೆಗೆ ಸಂಪರ್ಕಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!