ಸ್ಕೂಟರ್ ಢಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ 
ದೇಶ

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ಕಲಡಿ ಕಡೆಯಿಂದ ಎಲಂಜಿಗೆ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪ್ರವಾಸಿ ಬಸ್‌ ಕೊತ್ತಟ್ಟೂಕುಳಂ ಬಳಿ ಚಲಿಸುತ್ತಿದ್ದಾಗ ಅದರ ಮುಂದಿದ್ದ ಸ್ಕೂಟರ್ ಚಾಲಕ ದಿಢೀರ್ ಬಲಕ್ಕೆ ತಿರುಗಿದೆ.

ಎರ್ನಾಕುಲಂ: ಕೇರಳದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಸ್ಕೂಟರ್ ಚಾಲಕ ಅಜಾರೂಕತೆಗೆ ಬಸ್ ವೊಂದು ಪಲ್ಟಿಯಾದ ಘಟನೆ ನಡೆದಿದೆ.

ಕೇರಳದ ಎರ್ನಾಕುಲಂನ ಸಮೀಪ ಕೊತ್ತಟ್ಟೂಕುಳಂನ ಕಕ್ಕೂರು ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ಕಲಡಿ ಕಡೆಯಿಂದ ಎಲಂಜಿಗೆ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪ್ರವಾಸಿ ಬಸ್‌ ಕೊತ್ತಟ್ಟೂಕುಳಂ ಬಳಿ ಚಲಿಸುತ್ತಿದ್ದಾಗ ಅದರ ಮುಂದಿದ್ದ ಸ್ಕೂಟರ್ ಚಾಲಕ ದಿಢೀರ್ ಬಲಕ್ಕೆ ತಿರುಗಿದ್ದು, ಇದರಿಂದ ಬಸ್ ಚಾಲಕ ಸಂಭಾವ್ಯ ಅಪಘಾತ ತಪ್ಪಿಸಲು ಬಸ್ ಅನ್ನು ತಿರುಗಿಸಿದ್ದಾನೆ.

ಬಸ್ ತಿರುಗುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ ಬಸ್ ಪೆಟ್ರೋಲ್ ಬಂಕ್ ತಡೆಗೋಡೆಗೆ ಗುದ್ದಿ ಪಲ್ಟಿಯಾಗಿದೆ. ಈ ಅಪಘಾತದ ವೇಳೆ ಬಸ್ ನಲ್ಲಿ ಸುಮಾರು 35 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ.

ಅಚ್ಚರಿ ಎಂದರೆ ಆ ಪೆಟ್ರೋಲ್ ಬಂಕ್ ಸಮೀಪವೇ ವೃದ್ದನೊಬ್ಬ ತನ್ನ ಬೈಕ್ ನಲ್ಲಿ ರಸ್ತೆ ಕ್ರಾಸ್ ಮಾಡಲು ನಿಂತಿದ್ದು ಬಸ್ ಪಲ್ಟಿಯಾಗಿ ಆತನ ಪಕ್ಕದಲ್ಲೇ ಬಿದ್ದಿದೆ. ಅದೃಷ್ಟವಶಾತ್ ಆ ವೃದ್ದ ವ್ಯಕ್ತಿಗೆ ಯಾವುದೇ ಅಪಾಯಗಳಾಗಿಲ್ಲ.

ಆದರೆ ಬಸ್ ನಲ್ಲಿದ್ದವರ ಪೈಕಿ 4 ಮಂದಿಗೆ ಗಂಭೀರ ಗಾಯಗಳಾಗಿದ್ದು, 30 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಡಿಯೋ ವೈರಲ್

ಬಸ್‌ ಪಲ್ಟಿಯಾಗುವ ದೃಶ್ಯ ಸೇರಿದಂತೆ ಸಂಪೂರ್ಣ ಘಟನೆ CCTV ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೆಟ್ರೋಲ್‌ ಬಂಕ್‌ನತ್ತ ಬಸ್‌ ನುಗ್ಗಿದರೂ, ಬಂಕ್‌ಗೆ ಡಿಕ್ಕಿಯಾಗದೆ ನಿಂತಿದ್ದರಿಂದ ಮತ್ತೊಂದು ದೊಡ್ಡ ದುರಂತ ತಪ್ಪಿದೆ. ಅಪಘಾತದ ಬಳಿಕ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಬಸ್‌ನಲ್ಲಿದ್ದವರನ್ನು ಹೊರಗೆ ಕರೆತಂದಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?