ಅರವಿಂದ್ ಕೇಜ್ರಿವಾಲ್ - ಅಭಿಜೀತ್ ದೀಪ್ಕೆ 
ದೇಶ

ಮೂಡ್ ಆಫ್ ದಿ ನೇಷನ್: ಪ್ರಧಾನಿ ರೇಸ್‌ನಲ್ಲಿ ಕೇಜ್ರಿವಾಲ್​ರನ್ನೇ ಹಿಂದಿಕ್ಕಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ!

ದೇಶದ ಜನಪ್ರಿಯ ನಾಯಕ ಯಾರು? ಪ್ರಧಾನಿ ಹುದ್ದೆಗೆ ಯಾರು ಸೂಕ್ತ? ಎಂಬ ಪ್ರಶ್ನೆಗೆ ಅತೀ ಹೆಚ್ಚು ಜನ ಮತ್ತೊಮ್ಮೆ ನರೇಂದ್ರ ಮೋದಿ ಅವರ ಹೆಸರನ್ನೇ ಆಯ್ಕೆ ಮಾಡಿದ್ದಾರೆ.

ನವದೆಹಲಿ: ಇಂಡಿಯಾ ಟುಡೇ ಮತ್ತು ಸಿವೋಟರ್ ನಡೆಸಿದ ಇತ್ತೀಚಿನ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಪ್ರಕಾರ, ಪ್ರಧಾನಿ ರೇಸ್‌ನಲ್ಲಿ ಆಮ್ ಆದ್ಮಿ ಪಕ್ಷದ(ಎಎಪಿ) ಮಾಜಿ ಕಾರ್ಯಕರ್ತ ಹಾಗೂ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ತಮ್ಮ ಮಾಜಿ ಗುರು, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನೇ ಹಿಂದಿಕ್ಕಿದ್ದಾರೆ.

ದೇಶದ ಜನಪ್ರಿಯ ನಾಯಕ ಯಾರು? ಪ್ರಧಾನಿ ಹುದ್ದೆಗೆ ಯಾರು ಸೂಕ್ತ? ಎಂಬ ಪ್ರಶ್ನೆಗೆ ಅತೀ ಹೆಚ್ಚು ಜನ ಮತ್ತೊಮ್ಮೆ ನರೇಂದ್ರ ಮೋದಿ ಅವರ ಹೆಸರನ್ನೇ ಆಯ್ಕೆ ಮಾಡಿದ್ದಾರೆ. ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶೇ. 48.7 ರಷ್ಟು ಜನರ ಬೆಂಬಲದೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶೇ. 27.1 ರಷ್ಟು ಬೆಂಬಲದೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಅದರಲ್ಲೂ, ತಮಿಳುನಾಡು ಮುಖ್ಯಮಂತ್ರಿಯಾಗಿ ಕೇವಲ ಮೂರು ತಿಂಗಳು ಪೂರೈಸಿರುವ ವಿಜಯ್ ಅವರು ಶೇ. 9.2 ರಷ್ಟು ಮತದಾರರ ಒಲವು ಗಳಿಸಿ ಅಚ್ಚರಿ ಮೂಡಿಸಿದ್ದಾರೆ.

ಇನ್ನು ಕಾಕ್ರೋಚ್ ಜನತಾ ಪಾರ್ಟಿ ಮೂಲಕ ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ಅಭಿಜೀತ್ ದೀಪ್ಕೆ ಅವರು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗಿಂತ ಹೆಚ್ಚು ಬೆಂಬಲ ಪಡೆಯುವ ಮೂಲಕ ಪ್ರಧಾನಿ ಹುದ್ದೆಗೆ ಹೆಚ್ಚಿನ ಜನರ ಆದ್ಯತೆಯ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ.

ಸಮೀಕ್ಷೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಶೇಕಡಾ 1.2 ರಷ್ಟು ಬೆಂಬಲ ಪಡೆದರೆ, ಅಭಿಜೀತ್ ದೀಪ್ಕೆ ಅವರು ಶೇಕಡಾ 1.3 ರಷ್ಟು ಬೆಂಬಲ ಗಳಿಸಿದ್ದಾರೆ. ಇಬ್ಬರ ನಡುವಿನ ವ್ಯತ್ಯಾಸವು ಕೇವಲ ಶೇಕಡಾ 0.1 ರಷ್ಟಿರಬಹುದು, ಆದರೆ ಇದರ ರಾಜಕೀಯ ಸಂಕೇತವನ್ನು ನಿರ್ಲಕ್ಷಿಸುವಂತಿಲ್ಲ. 2020 ರಿಂದ 2023 ರವರೆಗೆ ಕೇಜ್ರಿವಾಲ್ ನಾಯಕತ್ವದಲ್ಲಿ ಎಎಪಿಯ ಕಮ್ಯುನಿಕೇಷನ್ಸ್ ತಂಡದಲ್ಲಿ ಕಾರ್ಯನಿರ್ವಹಿಸಿದ್ದ ದಿಪ್ಕೆ, ಇತ್ತೀಚಿನ ಕೆಲ ತಿಂಗಳುಗಳಲ್ಲಿ ತಮ್ಮನ್ನು ರಾಜಕೀಯ ಸಂವಹನ ವೃತ್ತಿಪರನಿಂದ, ಪ್ರಭಾವಿ ಚಳವಳಿಯ ಮುಖವಾಗಿ ಗುರುತಿಸಿಕೊಂಡಿದ್ದಾರೆ.

ಮುಂಚೂಣಿಯಲ್ಲಿರುವ ಅಭ್ಯರ್ಥಿಗಳಿಗೆ ಹೋಲಿಸಿದರೆ ದೀಪ್ಕೆಗೆ ಸಿಕ್ಕಿರುವ ಶೇಕಡಾ 1.3 ರಷ್ಟು ಬೆಂಬಲವು ಚಿಕ್ಕ ಸಂಖ್ಯೆಯಾಗಿದ್ದರೂ, ಕೇಜ್ರಿವಾಲ್ ಅವರ ಜೊತೆ ಹೋಲಿಸಿದಾಗ ಅದು ಗಮನಾರ್ಹವಾಗಿ ಕಾಣಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

ಅಂಡರ್-19 ತಂಡದಲ್ಲಿ ದ್ರಾವಿಡ್, ಸೆಹ್ವಾಗ್ ಮಕ್ಕಳಿಗೆ ಚಾನ್ಸ್; ಸ್ಫೋಟಕ ಪ್ರದರ್ಶನ ನೀಡಿದ್ರೂ ವೈಭವ್ ಸೂರ್ಯವಂಶಿ ಕೈಬಿಟ್ಟ BCCI; ಇಲ್ಲಿದೆ ಕಾರಣ...

ನಾಡಗೀತೆ: ಹೈಕೋರ್ಟ್ ಆದೇಶದಲ್ಲಿ ಮಧ್ಯ ಪ್ರವೇಶಕ್ಕೆ ಸುಪ್ರೀಂಕೋರ್ಟ್ ನಕಾರ!

ಸಿನಿಮಾ ಇಷ್ಟವಾಗಲಿಲ್ಲ ಅಂದ್ರೆ ನಾನು ನಡು ರಸ್ತೆಯಲ್ಲೇ ತಲೆ ಬೋಳಿಸಿಕೊಳ್ಳುತ್ತೇನೆ: ಪ್ರೇಕ್ಷಕರಿಗೆ ನಟಿ ಶ್ವೇತಾ ಚಾಲೆಂಜ್; ವಿಡಿಯೋ ವೈರಲ್!