ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್-ಕೌಶಂಬಿ ಗಡಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಕಾರ್ಖಾನೆಯ ಬಳಿಯ ಮನೆಗಳಲ್ಲಿ ವಾಸಿಸುತ್ತಿದ್ದ 8 ಮಕ್ಕಳು ಸೇರಿದಂತೆ ಹನ್ನೊಂದು ಜನರು ಸಾವನ್ನಪ್ಪಿದ್ದು ಐದು ಮಂದಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಸ್ಫೋಟವು ಎಷ್ಟು ತೀವ್ರವಾಗಿತ್ತೆಂದರೇ ಇಡೀ ಕಾರ್ಖಾನೆ ನೆಲಸಮವಾಗಿದೆ. 100 ಮೀಟರ್ ವ್ಯಾಪ್ತಿಯೊಳಗಿನ ಎಂಟು ಮನೆಗಳು ಹಾನಿಗೊಳಗಾಗಿವೆ.
ಸ್ಫೋಟದ ಪರಿಣಾಮವಾಗಿ ಸುಮಾರು 500 ಮೀಟರ್ ದೂರದಲ್ಲಿರುವ ಪ್ರಯಾಗ್ರಾಜ್-ಕಾನ್ಪುರ್ ರೈಲ್ವೆ ಮಾರ್ಗದಲ್ಲಿ OHE (ಓವರ್ಹೆಡ್ ಎಲೆಕ್ಟ್ರಿಕ್ ಲೈನ್) ಮಾರ್ಗವು ಅಸ್ತವ್ಯಸ್ತಗೊಂಡಿದೆ. ಇದು ಕಾನ್ಪುರದಿಂದ ಪ್ರಯಾಗ್ರಾಜ್ಗೆ ಸುಮಾರು ಒಂದೂವರೆ ಗಂಟೆಗಳ ಕಾಲ ರೈಲು ಕಾರ್ಯಾಚರಣೆಯನ್ನು ಅಡ್ಡಿಪಡಿಸಿತು. ಎಂಜಿನಿಯರ್ಗಳು ಮಾರ್ಗವನ್ನು ದುರಸ್ತಿ ಮಾಡಿ ಪುನಃಸ್ಥಾಪಿಸಿದರು. ಸ್ಫೋಟದ ಶಬ್ದವು 2 ಕಿಲೋಮೀಟರ್ ದೂರದವರೆಗೆ ಕೇಳಿಬಂತು. ಸ್ವಲ್ಪ ಸಮಯದೊಳಗೆ ದಡ್ಡ ಹೊಗೆ ಪ್ರದೇಶವನ್ನು ಆವರಿಸಿತು. ಗ್ರಾಮಸ್ಥರು ಸುಟ್ಟ ಗಾಯಾಳುಗಳನ್ನು ಹಾಸಿಗೆಗಳ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದಿದೆ.
ಕೌಶಾಂಬಿ ಜಿಲ್ಲೆಯ ಮೊಹಮ್ಮದ್ಪುರ ಗ್ರಾಮದಲ್ಲಿ ಬೆಳಿಗ್ಗೆ 11:30 ಕ್ಕೆ ಅಪಘಾತ ಸಂಭವಿಸಿದೆ. ಈ ಗ್ರಾಮ ಪ್ರಯಾಗ್ರಾಜ್ ಗಡಿಯಲ್ಲಿದೆ. ಮನುರಿಯಲ್ಲಿರುವ ವಾಯುಪಡೆಯ ನಿಲ್ದಾಣವು ಇಲ್ಲಿಂದ 2 ಕಿ.ಮೀ ದೂರದಲ್ಲಿದೆ. ಪೊಲೀಸ್, ವಾಯುಪಡೆ, ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ನ 200 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು. 10 ಬುಲ್ಡೋಜರ್ಗಳು ಅವಶೇಷಗಳನ್ನು ತೆಗೆದುಹಾಕಿವೆ.