ಪ್ರಫುಲ್ ಪಟೇಲ್ 
ದೇಶ

ಎನ್‌ಸಿಪಿ ಅಧ್ಯಕ್ಷರಾಗಿ ನೇಮಕಗೊಂಡಿಲ್ಲ, ಮಾಧ್ಯಮಗಳ ವರದಿ ಆಧಾರರಹಿತ: ಪ್ರಫುಲ್ ಪಟೇಲ್

ಎನ್ ಸಿಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನನ್ನ ನೇಮಕಾತಿಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಕೆಲವು ವರದಿಗಳನ್ನು ನಾನು ಗಮನಿಸಿದ್ದೇನೆ. ಈ ವರದಿಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ.

ಮುಂಬೈ: ತಮ್ಮನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂಬ ವರದಿಗಳು ಆಧಾರರಹಿತ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಅವರು ಭಾನುವಾರ ಹೇಳಿದ್ದಾರೆ.

"ಎನ್ ಸಿಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನನ್ನ ನೇಮಕಾತಿಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಕೆಲವು ವರದಿಗಳನ್ನು ನಾನು ಗಮನಿಸಿದ್ದೇನೆ. ಈ ವರದಿಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ ಮತ್ತು ಅದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ" ಎಂದು ಪಟೇಲ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ನೀಡಿದ ಹೇಳಿಕೆಯ ನಂತರ ಪಟೇಲ್ ಅವರ ಈ ಹೇಳಿಕೆ ಬಂದಿದೆ.

"ಎನ್ ಸಿಪಿ ಪ್ರಜಾಪ್ರಭುತ್ವ ಸಂಸ್ಥೆಯಾಗಿದೆ. ಇಂತಹ ದೊಡ್ಡ ನಿರ್ಧಾರವನ್ನು ನಮ್ಮ ಹಿರಿಯ ನಾಯಕರು ಮತ್ತು ಶಾಸಕರೊಂದಿಗೆ ಸಮಾಲೋಚಿಸಿ, ನಮ್ಮ ಪಕ್ಷದ ಪದಾಧಿಕಾರಿಗಳೊಂದಿಗೆ ಚರ್ಚಿಸುವ ಮೂಲಕ ಮತ್ತು ನಮ್ಮ ಎಲ್ಲಾ ಪಕ್ಷದ ಸದಸ್ಯರ ಭಾವನೆಗಳು ಮತ್ತು ಸಾಮೂಹಿಕ ಇಚ್ಛೆಯನ್ನು ಗೌರವಿಸುವ ಮೂಲಕ ಮಾತ್ರ ತೆಗೆದುಕೊಳ್ಳಲಾಗುತ್ತದೆ. ರಾಷ್ಟ್ರೀಯ ಪಕ್ಷವಾಗಿರುವುದರಿಂದ, ನಾವು ಈ ವಿಷಯಗಳಲ್ಲಿ ಸ್ಥಾಪಿತ ಪ್ರಕ್ರಿಯೆಯನ್ನು ಅನುಸರಿಸುತ್ತೇವೆ" ಎಂದು ಪಟೇಲ್ ಹೇಳಿದ್ದಾರೆ.

ಭಾನುವಾರ ಗೋಯಲ್ ಅವರು, ತಪ್ಪು ಮಾಹಿತಿಯ ಆಧಾರದ ಮೇಲೆ ಎನ್‌ಸಿಪಿ ಅಧ್ಯಕ್ಷರಾಗಿ ಪ್ರಫುಲ್ ಪಟೇಲ್ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದರು.

ನಂತರ “ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪ್ರಫುಲ್ ಪಟೇಲ್ ಆಯ್ಕೆಯಾಗಿದ್ದಾರೆ ಎಂದು ಹಿರಿಯ ಪತ್ರಕರ್ತರೊಬ್ಬರು ನನಗೆ ತಪ್ಪು ಮಾಹಿತಿ ನೀಡಿದ್ದರು. ಮಾಹಿತಿಯನ್ನು ಪರಿಶೀಲಿಸದೆ, ನಾನು ಮಾಧ್ಯಮಗಳಲ್ಲಿ ಕೆಲವು ಹೇಳಿಕೆಗಳನ್ನು ನೀಡಿದ್ದೆ, ಆದರೆ ನಂತರ ಆ ಮಾಹಿತಿ ತಪ್ಪಾಗಿದೆ ಎಂದು ಗೊತ್ತಾಯಿತು ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವು ಉಪಮುಖ್ಯಮಂತ್ರಿ ಸುನೇತ್ರಾ ಅಜಿತ್‌ದಾದ ಪವಾರ್ ಅವರ ನೇತೃತ್ವದಲ್ಲಿ ಕೆಲಸ ಮಾಡುವುದನ್ನು ಮುಂದುವರೆಸಿದೆ. ದಾರಿತಪ್ಪಿಸುವ ಮಾಹಿತಿಗಾಗಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ” ಎಂದು ಗೋಯಲ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ನಮ್ಮ ರಾಜ್ಯಕ್ಕೆ 44 ಸಾವಿರ ವಾಣಿಜ್ಯ ಸಿಲಿಂಡರ್ ಅವಶ್ಯಕತೆಯಿದೆ, ಪೂರೈಕೆಯಾಗುತ್ತಿರುವುದು ಕೇವಲ 9 ಸಾವಿರ: ಸಚಿವ ಕೆ ಹೆಚ್ ಮುನಿಯಪ್ಪ

ಯುಗಾದಿ, ರಂಜಾನ್ ರಜೆ: ಬೆಂಗಳೂರಿನಿಂದ ವಿವಿಧೆಡೆ ಸಂಚಾರಕ್ಕೆ ವಿಶೇಷ ರೈಲು ಸೇವೆ, ವೇಳಾಪಟ್ಟಿ ಹೀಗಿದೆ...

ನಾಡಿನೆಲ್ಲೆಡೆ ಯುಗಾದಿ ಸಂಭ್ರಮ-ಪೂಜೆ, ಹಬ್ಬದೂಟ ತಯಾರಿಯಲ್ಲಿ ಜನತೆ, ವ್ಯಾಪಾರ ಭರಾಟೆ ಜೋರು

ಮಿತ್ರ..., My Friend... ಎನ್ನುತ್ತಲೇ ಭಾರತದ ಬೆನ್ನಿಗೆ ಚೂರಿ!; US ಸೇನೆ ಜೊತೆ ನಂಟು ಹೊಂದಿದ್ದ ವ್ಯಕ್ತಿ ಈಶಾನ್ಯ ರಾಜ್ಯದಲ್ಲಿ; ದೇಶದ ವಿರುದ್ಧ ಸಂಚು!

SCROLL FOR NEXT